<p><strong>ದಾವಣಗೆರೆ:</strong> ~ಪಕ್ಷದಲ್ಲಿ ಸ್ವಲ್ಪಮಟ್ಟಿನ ಭಿನ್ನಾಭಿಪ್ರಾಯಗಳಿವೆ. ಅವುಗಳನ್ನು ಸರಿಮಾಡಿಕೊಳ್ಳುತ್ತೇವೆ. ಪಕ್ಷದಲ್ಲಿ ಕೆಲವರು ಶಿಸ್ತು ಮೀರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದಕ್ಕೆ ಪ್ರಮುಖರ ಸಮಿತಿ ಕರೆದು ತಡೆ ಹಾಕಲಾಗುವುದು~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದರು.</p>.<p>ನಗರದ ಶಿವಾಜಿ ನಗರದ ದುರ್ಗಾಂಬಿಕಾ ವೃತ್ತದಲ್ಲಿ ನಿರ್ಮಿಸಿರುವ ಅಶ್ವಾರೂಢ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>~ಸದ್ಯ ಬಜೆಟ್ ಕುರಿತು ಚಿಂತನೆ ನಡೆಸಲಾಗುತ್ತಿದ್ದು, ಕಳೆದ ವರ್ಷಕ್ಕಿಂಥ ಈ ವರ್ಷ ಬಜೆಟ್ ಮೊತ್ತ ಶೇ. 10 ರಿಂದ 15ರಷ್ಟು ಹೆಚ್ಚಿಸಲಾಗುದು. ಪ್ರತ್ಯೇಕ ಯುವ ಬಜೆಟ್ ಮಂಡಿಸುವ ಕುರಿತು ಚಿಂತಿಸಿಲ್ಲ. ಆದರೆ, ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಲಾಗುವುದು~ ಎಂದರು.</p>.<p><strong>ಬಿಎಸ್ವೈ ವೈಯಕ್ತಿಕ ಪ್ರವಾಸ</strong>: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಪಕ್ಷದಲ್ಲಿ ಯಾವುದೇ ಭಿನ್ನ ಮತವಿಲ್ಲ. ವೈಯಕ್ತಿಕ ಇಚ್ಚೆಯಂತೆ ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ. ಇದಕ್ಕೆ ಈಶ್ವರಪ್ಪ, ಸದಾನಂದಗೌಡರು ಸೇರಿಕೊಂಡರೆ ಅಭ್ಯಂತರವಿಲ್ಲ. ಸಮಾವೇಶ, ಸಭೆಗಳ ಮೂಲಕ ಪಕ್ಷವನ್ನು ಸಂಘಟಿಸುವ ಪ್ರಯತ್ನ ಮಾಡುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ~ಪಕ್ಷದಲ್ಲಿ ಸ್ವಲ್ಪಮಟ್ಟಿನ ಭಿನ್ನಾಭಿಪ್ರಾಯಗಳಿವೆ. ಅವುಗಳನ್ನು ಸರಿಮಾಡಿಕೊಳ್ಳುತ್ತೇವೆ. ಪಕ್ಷದಲ್ಲಿ ಕೆಲವರು ಶಿಸ್ತು ಮೀರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದಕ್ಕೆ ಪ್ರಮುಖರ ಸಮಿತಿ ಕರೆದು ತಡೆ ಹಾಕಲಾಗುವುದು~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದರು.</p>.<p>ನಗರದ ಶಿವಾಜಿ ನಗರದ ದುರ್ಗಾಂಬಿಕಾ ವೃತ್ತದಲ್ಲಿ ನಿರ್ಮಿಸಿರುವ ಅಶ್ವಾರೂಢ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>~ಸದ್ಯ ಬಜೆಟ್ ಕುರಿತು ಚಿಂತನೆ ನಡೆಸಲಾಗುತ್ತಿದ್ದು, ಕಳೆದ ವರ್ಷಕ್ಕಿಂಥ ಈ ವರ್ಷ ಬಜೆಟ್ ಮೊತ್ತ ಶೇ. 10 ರಿಂದ 15ರಷ್ಟು ಹೆಚ್ಚಿಸಲಾಗುದು. ಪ್ರತ್ಯೇಕ ಯುವ ಬಜೆಟ್ ಮಂಡಿಸುವ ಕುರಿತು ಚಿಂತಿಸಿಲ್ಲ. ಆದರೆ, ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಲಾಗುವುದು~ ಎಂದರು.</p>.<p><strong>ಬಿಎಸ್ವೈ ವೈಯಕ್ತಿಕ ಪ್ರವಾಸ</strong>: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಪಕ್ಷದಲ್ಲಿ ಯಾವುದೇ ಭಿನ್ನ ಮತವಿಲ್ಲ. ವೈಯಕ್ತಿಕ ಇಚ್ಚೆಯಂತೆ ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ. ಇದಕ್ಕೆ ಈಶ್ವರಪ್ಪ, ಸದಾನಂದಗೌಡರು ಸೇರಿಕೊಂಡರೆ ಅಭ್ಯಂತರವಿಲ್ಲ. ಸಮಾವೇಶ, ಸಭೆಗಳ ಮೂಲಕ ಪಕ್ಷವನ್ನು ಸಂಘಟಿಸುವ ಪ್ರಯತ್ನ ಮಾಡುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>