<p>ಹಾವೇರಿ: `ರಾಜ್ಯದಲ್ಲಿ ತಾಳೆ ಎಣ್ಣೆ ತಯಾರಿಸುವ ಐದು ಹೊಸ ಘಟಕಗಳು ಶೀಘ್ರದಲ್ಲಿ ಪ್ರಾರಂಭವಾಗಲಿವೆ~ ಎಂದು ತೋಟಗಾರಿಕೆ ಹಾಗೂ ಸಕ್ಕರೆ ಸಚಿವ ಎಸ್.ಎ.ರವೀಂದ್ರನಾಥ ಹೇಳಿದರು.<br /> <br /> ಶುಕ್ರವಾರ ತೋಟಗಾರಿಕೆ ಇಲಾ ಖೆಯ ಪ್ರಗತಿ ಪರಿಶೀಲನೆ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ತಾಳೆ ಎಣ್ಣೆ ತಯಾರಿಕಾ ಘಟಕಗಳನ್ನು ಆರಂಭಿಸಲು ಉದ್ಯಮಿ ಗಳು ಮುಂದೆ ಬಂದಿದ್ದು, ಸರ್ಕಾರದಿಂದ ಅನುಮತಿ ಕೂಡಾ ಪಡೆದುಕೊಂಡಿದ್ದಾರೆ. ಇಷ್ಟರಲ್ಲಿಯೇ ಘಟಕಗಳ ಸ್ಥಾಪನೆ ಕಾರ್ಯ ಆರಂಭವಾಗಲಿದೆ ಎಂದರು. <br /> <br /> ಈಗಾಗಲೇ ತಾಳೆ ಎಣ್ಣೆ ತಯಾರಿಕಾ ಘಟಕಗಳು ರಾಜ್ಯದ ಹೊಸಪೇಟೆ, ಶಿವಮೊಗ್ಗ ಹಾಗೂ ಮೈಸೂರು ನಗರ ಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಹೊಸ ಐದು ಘಟಕಗಳ ಸ್ಥಾಪನೆಯಿಂದ ರಾಜ್ಯ ದಲ್ಲಿ ಒಟ್ಟು ಎಂಟು ಘಟಕಗಳಾಗಲಿವೆ. ಇದರಿಂದ ತಾಳೆ ಬೆಳೆಯುವ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.<br /> <br /> ತಾಳೆ ಬೆಳೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 33 ಕೋಟಿ ರೂ., ರಾಜ್ಯ ಸರ್ಕಾರ 6 ಕೋಟಿ ರೂ. ನೀಡಿವೆ. ಒಟ್ಟು 39 ಕೋಟಿ ರೂ. ಇಲಾಖೆ ಬಳಿ ಇದ್ದು, ಈ ಹಣದಿಂದ ರಾಜ್ಯದಲ್ಲಿ ತಾಳೆ ಬೆಳೆ ಅಭಿವೃದ್ಧಿಗೆ ಅವಶ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.<br /> <br /> ತೋಟಗಾರಿಕೆ ಬೆಳೆಗಳನ್ನು ಬೆಳೆ ಯುವ ರೈತರಿಗೆ ಮಾರುಕಟ್ಟೆ ಸಮಸ್ಯೆ ತಪ್ಪಿಸುವ ಉದ್ದೇಶದಿಂದ ಜಿಲ್ಲಾ ಮಟ್ಟ ದಲ್ಲಿ ಹಾಪ್ಕಾಮ್ಸ ಮಳಿಗೆಗಳನ್ನು ತೆರೆಯಲಾಗುತ್ತಿದೆ. ಈಗಾಗಲೇ ಹಾಪ್ಕಾಮ್ಸ ರಾಜ್ಯ ಅಧ್ಯಕ್ಷರೊಂದಿಗೆ ಚರ್ಚಿಸ ಲಾಗಿದ್ದು, ಪ್ರತಿ ಜಿಲ್ಲೆಗೂ 50 ಲಕ್ಷ ರೂ. ಮೀಸಲಿಡಲು ಚಿಂತನೆ ನಡೆದಿದೆ ಎಂದರು. <br /> <br /> ಕೇಂದ್ರದ ರಾಷ್ಟ್ರೀಯ ತೋಟಗಾರಿಕೆ ಮಿಷನ್ನ ವ್ಯಾಪ್ತಿಯಲ್ಲಿ ಬ್ಯಾಡಗಿ ಮೆಣಸಿನಕಾಯಿ ಹಾಗೂ ವಿಳ್ಯದೆಲೆ ಸೇರ್ಪಡೆಯಾಗದಿರುವ ಬಗ್ಗೆ ಸಚಿವ ಗಮನ ಸೆಳೆದಾಗ, ಈ ಎರಡು ಬೆಳೆಗಳು ಈ ಜಿಲ್ಲೆ ಪ್ರಮುಖ ಬೆಳೆಗಳಾಗಿವೆ. ಇವುಗಳನ್ನು ಸೇರ್ಪಡಿಸುವುದರಿಂದ ಬ್ಯಾಡಗಿ ತಳಿಯ ಮೆಣಸಿನಕಾಯಿ ಬೆಳೆಗೆ ಉತ್ತೇಜನ ಸಿಕ್ಕಂತಾಗುತ್ತದೆ. ಈ ನಿಟ್ಟಿನಲ್ಲಿ ತಮ್ಮ ಇಲಾಖೆ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. <br /> <br /> ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನರ, ಜಿ.ಪಂ. ಅಧ್ಯಕ್ಷ ಮಂಜುನಾಥ ಓಲೇಕಾರ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಕುಸುಗಲ್ಲ, ತೋಟಗಾರಿಕೆ ಇಲಾಖೆ ಅಧಿಕಾರಿಗಳಾದ ದೊಡ್ಡನಗೌಡರ, ಕೃಷ್ಣ ಉಕ್ಕುಂದ ಸೇರಿದಂತೆ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: `ರಾಜ್ಯದಲ್ಲಿ ತಾಳೆ ಎಣ್ಣೆ ತಯಾರಿಸುವ ಐದು ಹೊಸ ಘಟಕಗಳು ಶೀಘ್ರದಲ್ಲಿ ಪ್ರಾರಂಭವಾಗಲಿವೆ~ ಎಂದು ತೋಟಗಾರಿಕೆ ಹಾಗೂ ಸಕ್ಕರೆ ಸಚಿವ ಎಸ್.ಎ.ರವೀಂದ್ರನಾಥ ಹೇಳಿದರು.<br /> <br /> ಶುಕ್ರವಾರ ತೋಟಗಾರಿಕೆ ಇಲಾ ಖೆಯ ಪ್ರಗತಿ ಪರಿಶೀಲನೆ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ತಾಳೆ ಎಣ್ಣೆ ತಯಾರಿಕಾ ಘಟಕಗಳನ್ನು ಆರಂಭಿಸಲು ಉದ್ಯಮಿ ಗಳು ಮುಂದೆ ಬಂದಿದ್ದು, ಸರ್ಕಾರದಿಂದ ಅನುಮತಿ ಕೂಡಾ ಪಡೆದುಕೊಂಡಿದ್ದಾರೆ. ಇಷ್ಟರಲ್ಲಿಯೇ ಘಟಕಗಳ ಸ್ಥಾಪನೆ ಕಾರ್ಯ ಆರಂಭವಾಗಲಿದೆ ಎಂದರು. <br /> <br /> ಈಗಾಗಲೇ ತಾಳೆ ಎಣ್ಣೆ ತಯಾರಿಕಾ ಘಟಕಗಳು ರಾಜ್ಯದ ಹೊಸಪೇಟೆ, ಶಿವಮೊಗ್ಗ ಹಾಗೂ ಮೈಸೂರು ನಗರ ಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಹೊಸ ಐದು ಘಟಕಗಳ ಸ್ಥಾಪನೆಯಿಂದ ರಾಜ್ಯ ದಲ್ಲಿ ಒಟ್ಟು ಎಂಟು ಘಟಕಗಳಾಗಲಿವೆ. ಇದರಿಂದ ತಾಳೆ ಬೆಳೆಯುವ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.<br /> <br /> ತಾಳೆ ಬೆಳೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 33 ಕೋಟಿ ರೂ., ರಾಜ್ಯ ಸರ್ಕಾರ 6 ಕೋಟಿ ರೂ. ನೀಡಿವೆ. ಒಟ್ಟು 39 ಕೋಟಿ ರೂ. ಇಲಾಖೆ ಬಳಿ ಇದ್ದು, ಈ ಹಣದಿಂದ ರಾಜ್ಯದಲ್ಲಿ ತಾಳೆ ಬೆಳೆ ಅಭಿವೃದ್ಧಿಗೆ ಅವಶ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.<br /> <br /> ತೋಟಗಾರಿಕೆ ಬೆಳೆಗಳನ್ನು ಬೆಳೆ ಯುವ ರೈತರಿಗೆ ಮಾರುಕಟ್ಟೆ ಸಮಸ್ಯೆ ತಪ್ಪಿಸುವ ಉದ್ದೇಶದಿಂದ ಜಿಲ್ಲಾ ಮಟ್ಟ ದಲ್ಲಿ ಹಾಪ್ಕಾಮ್ಸ ಮಳಿಗೆಗಳನ್ನು ತೆರೆಯಲಾಗುತ್ತಿದೆ. ಈಗಾಗಲೇ ಹಾಪ್ಕಾಮ್ಸ ರಾಜ್ಯ ಅಧ್ಯಕ್ಷರೊಂದಿಗೆ ಚರ್ಚಿಸ ಲಾಗಿದ್ದು, ಪ್ರತಿ ಜಿಲ್ಲೆಗೂ 50 ಲಕ್ಷ ರೂ. ಮೀಸಲಿಡಲು ಚಿಂತನೆ ನಡೆದಿದೆ ಎಂದರು. <br /> <br /> ಕೇಂದ್ರದ ರಾಷ್ಟ್ರೀಯ ತೋಟಗಾರಿಕೆ ಮಿಷನ್ನ ವ್ಯಾಪ್ತಿಯಲ್ಲಿ ಬ್ಯಾಡಗಿ ಮೆಣಸಿನಕಾಯಿ ಹಾಗೂ ವಿಳ್ಯದೆಲೆ ಸೇರ್ಪಡೆಯಾಗದಿರುವ ಬಗ್ಗೆ ಸಚಿವ ಗಮನ ಸೆಳೆದಾಗ, ಈ ಎರಡು ಬೆಳೆಗಳು ಈ ಜಿಲ್ಲೆ ಪ್ರಮುಖ ಬೆಳೆಗಳಾಗಿವೆ. ಇವುಗಳನ್ನು ಸೇರ್ಪಡಿಸುವುದರಿಂದ ಬ್ಯಾಡಗಿ ತಳಿಯ ಮೆಣಸಿನಕಾಯಿ ಬೆಳೆಗೆ ಉತ್ತೇಜನ ಸಿಕ್ಕಂತಾಗುತ್ತದೆ. ಈ ನಿಟ್ಟಿನಲ್ಲಿ ತಮ್ಮ ಇಲಾಖೆ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. <br /> <br /> ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನರ, ಜಿ.ಪಂ. ಅಧ್ಯಕ್ಷ ಮಂಜುನಾಥ ಓಲೇಕಾರ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಕುಸುಗಲ್ಲ, ತೋಟಗಾರಿಕೆ ಇಲಾಖೆ ಅಧಿಕಾರಿಗಳಾದ ದೊಡ್ಡನಗೌಡರ, ಕೃಷ್ಣ ಉಕ್ಕುಂದ ಸೇರಿದಂತೆ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>