<p><strong>ನವದೆಹಲಿ (ಪಿಟಿಐ</strong>): ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜಾಹೀರಾತಿಗಾಗಿ ಸರ್ಕಾರದ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕಳೆದ ವಾರ ಲೋಕಾಯುಕ್ತರು ಆರೋಪಿಸಿದ ಬೆನ್ನಲ್ಲೇ, ದೀಕ್ಷಿತ್ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.<br /> <br /> ಮುಖ್ಯಮಂತ್ರಿ ಶೀಲಾ ದೀಕ್ಷಿತ್, ಕೆಲವು ಸಚಿವರು, ದೆಹಲಿ ಸರ್ಕಾರದ ಜಾಹೀರಾತು ಮತ್ತು ಪ್ರಚಾರ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಇಲ್ಲಿನ ವಿಶೇಷ ನ್ಯಾಯಾಲಯದಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ವಿವೇಕ ಗರ್ಗ್ ದೂರು ದಾಖಲಿಸಿದ್ದಾರೆ. ಈ ಕುರಿತ ವಿಚಾರಣೆಯನ್ನು ಜೂನ್ 6ಕ್ಕೆ ಮುಂದೂಡಲಾಗಿದೆ.<br /> <br /> 2008ರ ದೆಹಲಿ ಚುನಾವಣೆ ಸಂದರ್ಭದಲ್ಲಿ ಶೀಲಾ ದೀಕ್ಷಿತ್ ಅವರು ಲಾಭ ಪಡೆಯಲು ಸರ್ಕಾರದ ಹಣವನ್ನು ಜಾಹೀರಾತಿಗಾಗಿ ಬಳಸಿಕೊಂಡಿದ್ದಾರೆ. ಈ ಬಗ್ಗೆ ಲೋಕಾಯುಕ್ತರು ನಡೆಸಿದ ತನಿಖೆಯೇ ಮುಖ್ಯ ಸಾಕ್ಷಿ ಎಂದು ದೂರಿನಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ</strong>): ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜಾಹೀರಾತಿಗಾಗಿ ಸರ್ಕಾರದ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕಳೆದ ವಾರ ಲೋಕಾಯುಕ್ತರು ಆರೋಪಿಸಿದ ಬೆನ್ನಲ್ಲೇ, ದೀಕ್ಷಿತ್ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.<br /> <br /> ಮುಖ್ಯಮಂತ್ರಿ ಶೀಲಾ ದೀಕ್ಷಿತ್, ಕೆಲವು ಸಚಿವರು, ದೆಹಲಿ ಸರ್ಕಾರದ ಜಾಹೀರಾತು ಮತ್ತು ಪ್ರಚಾರ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಇಲ್ಲಿನ ವಿಶೇಷ ನ್ಯಾಯಾಲಯದಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ವಿವೇಕ ಗರ್ಗ್ ದೂರು ದಾಖಲಿಸಿದ್ದಾರೆ. ಈ ಕುರಿತ ವಿಚಾರಣೆಯನ್ನು ಜೂನ್ 6ಕ್ಕೆ ಮುಂದೂಡಲಾಗಿದೆ.<br /> <br /> 2008ರ ದೆಹಲಿ ಚುನಾವಣೆ ಸಂದರ್ಭದಲ್ಲಿ ಶೀಲಾ ದೀಕ್ಷಿತ್ ಅವರು ಲಾಭ ಪಡೆಯಲು ಸರ್ಕಾರದ ಹಣವನ್ನು ಜಾಹೀರಾತಿಗಾಗಿ ಬಳಸಿಕೊಂಡಿದ್ದಾರೆ. ಈ ಬಗ್ಗೆ ಲೋಕಾಯುಕ್ತರು ನಡೆಸಿದ ತನಿಖೆಯೇ ಮುಖ್ಯ ಸಾಕ್ಷಿ ಎಂದು ದೂರಿನಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>