<p>ಅರಕಲಗೂಡು: ಶುಂಠಿ, ಅರಿಶಿನ ದಂತಹ ಸಾಂಬಾರು ಬೆಳೆಗಳಿಗೆ ಅಂತರರಾಷ್ಟ್ರೀಯವಾಗಿ ಹೆಚ್ಚಿನ ಬೇಡಿಕೆ ಇದ್ದು ರೈತರು ಇದನ್ನು ವೈಜ್ಞಾನಿಕವಾಗಿ ಬೆಳೆದಾಗ ಹೆಚ್ಚಿನ ಇಳುವರಿ ಮತ್ತು ಆದಾಯ ಪಡೆಯಬಹುದಾಗಿದೆ ಎಂದು ಸಕಲೇಶಪುರ ಎಲಕ್ಕಿ ಸಂಶೋಧನಾ ಕೇಂದ್ರದ ಹಿರಿಯ ವಿಜ್ಞಾನಿ ಬಿ.ಎ. ವಾದಿರಾಜ್ ತಿಳಿಸಿದರು.<br /> <br /> ತಾಲ್ಲೂಕಿನ ಮಲ್ಲಿಪಟ್ಟಣದಲ್ಲಿ ಭಾನುವಾರ ಪೊಟ್ಯಾಟೊ ಕ್ಲಬ್ ಏರ್ಪಡಿಸಿದ್ದ ಅರಿಶಿನ ಮತ್ತು ಶುಂಠಿ ಬೆಳೆ ಬೇಸಾಯ ಕುರಿತ ವಿಚಾರ ಗೋಷ್ಠಿಯಲ್ಲಿ ಮಾತನಾಡಿದರು.<br /> <br /> ಶುಂಠಿ ಬೆಳೆಯಲು ಸ್ಥಳೀಯವಾಗಿ ದೊರೆಯುವ ಬಿತ್ತನೆ ಬೀಜ ಬಳಸಿದಲ್ಲಿ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಿಲ್ಲ. ಕಲ್ಲಿಕೋಟೆಯಲ್ಲಿರುವ ಸಂಬಾರು ಮಂಡಳಿಯ ಕೇಂದ್ರ ಕಚೇರಿಯಲ್ಲಿ ಶುಂಠಿ ಬಿತ್ತನೆ ಬೀಜ ದೊರೆಯುತ್ತಿದ್ದು, ಇದನ್ನು ತರಿಸಿಕೊಂಡು ಬಿತ್ತನೆ ನಡೆಸುವಂತೆ ಸಲಹೆ ಮಾಡಿದರು.<br /> <br /> ಪೊಟ್ಯಾಟೊ ಕ್ಲಬ್ ಅಧ್ಯಕ್ಷ ಎಚ್. ಯೋಗಾರಮೇಶ್ ಮಾತನಾಡಿದರು. ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಮುತ್ತಿಗೆ ರಾಜೇಗೌಡ ಮಾತನಾಡಿ ಬ್ಯಾಂಕ್ ರೈತರಿಗೆ ನೀಡುತ್ತಿರುವ ಸವಲತ್ತುಗಳ ಕುರಿತು ಮಾಹಿತಿ ನೀಡಿದರು. <br /> <br /> ಕೃಷಿ ವಿಜ್ಞಾನಿ ಅರುಣಕುಮಾರ್, ಪ್ರಗತಿಪರ ಶುಂಠಿ ಬೆಳೆಗಾರ ಪ್ರಕಾಶ್ ಮಾತನಾಡಿದರು. ತಾ.ಪಂ. ಸದಸ್ಯೆ ಸರೋಜಮ್ಮ ಮಲ್ಲಿಪಟ್ಟಣ ಗ್ರಾ.ಪಂ. ಮಾಜಿ ಅಧ್ಯಕ್ಷ ಸುರೇಶ್ ಕ್ಲಬ್ ಮುಖಂಡರಾದ ಆಲದಹಳ್ಳಿ ಸುಬ್ಬೇಗೌಡ, ಎಂ.ಸಿ. ರಾಜೇಂದ್ರ, ಉದಯಕುಮಾರ್ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಕಲಗೂಡು: ಶುಂಠಿ, ಅರಿಶಿನ ದಂತಹ ಸಾಂಬಾರು ಬೆಳೆಗಳಿಗೆ ಅಂತರರಾಷ್ಟ್ರೀಯವಾಗಿ ಹೆಚ್ಚಿನ ಬೇಡಿಕೆ ಇದ್ದು ರೈತರು ಇದನ್ನು ವೈಜ್ಞಾನಿಕವಾಗಿ ಬೆಳೆದಾಗ ಹೆಚ್ಚಿನ ಇಳುವರಿ ಮತ್ತು ಆದಾಯ ಪಡೆಯಬಹುದಾಗಿದೆ ಎಂದು ಸಕಲೇಶಪುರ ಎಲಕ್ಕಿ ಸಂಶೋಧನಾ ಕೇಂದ್ರದ ಹಿರಿಯ ವಿಜ್ಞಾನಿ ಬಿ.ಎ. ವಾದಿರಾಜ್ ತಿಳಿಸಿದರು.<br /> <br /> ತಾಲ್ಲೂಕಿನ ಮಲ್ಲಿಪಟ್ಟಣದಲ್ಲಿ ಭಾನುವಾರ ಪೊಟ್ಯಾಟೊ ಕ್ಲಬ್ ಏರ್ಪಡಿಸಿದ್ದ ಅರಿಶಿನ ಮತ್ತು ಶುಂಠಿ ಬೆಳೆ ಬೇಸಾಯ ಕುರಿತ ವಿಚಾರ ಗೋಷ್ಠಿಯಲ್ಲಿ ಮಾತನಾಡಿದರು.<br /> <br /> ಶುಂಠಿ ಬೆಳೆಯಲು ಸ್ಥಳೀಯವಾಗಿ ದೊರೆಯುವ ಬಿತ್ತನೆ ಬೀಜ ಬಳಸಿದಲ್ಲಿ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಿಲ್ಲ. ಕಲ್ಲಿಕೋಟೆಯಲ್ಲಿರುವ ಸಂಬಾರು ಮಂಡಳಿಯ ಕೇಂದ್ರ ಕಚೇರಿಯಲ್ಲಿ ಶುಂಠಿ ಬಿತ್ತನೆ ಬೀಜ ದೊರೆಯುತ್ತಿದ್ದು, ಇದನ್ನು ತರಿಸಿಕೊಂಡು ಬಿತ್ತನೆ ನಡೆಸುವಂತೆ ಸಲಹೆ ಮಾಡಿದರು.<br /> <br /> ಪೊಟ್ಯಾಟೊ ಕ್ಲಬ್ ಅಧ್ಯಕ್ಷ ಎಚ್. ಯೋಗಾರಮೇಶ್ ಮಾತನಾಡಿದರು. ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಮುತ್ತಿಗೆ ರಾಜೇಗೌಡ ಮಾತನಾಡಿ ಬ್ಯಾಂಕ್ ರೈತರಿಗೆ ನೀಡುತ್ತಿರುವ ಸವಲತ್ತುಗಳ ಕುರಿತು ಮಾಹಿತಿ ನೀಡಿದರು. <br /> <br /> ಕೃಷಿ ವಿಜ್ಞಾನಿ ಅರುಣಕುಮಾರ್, ಪ್ರಗತಿಪರ ಶುಂಠಿ ಬೆಳೆಗಾರ ಪ್ರಕಾಶ್ ಮಾತನಾಡಿದರು. ತಾ.ಪಂ. ಸದಸ್ಯೆ ಸರೋಜಮ್ಮ ಮಲ್ಲಿಪಟ್ಟಣ ಗ್ರಾ.ಪಂ. ಮಾಜಿ ಅಧ್ಯಕ್ಷ ಸುರೇಶ್ ಕ್ಲಬ್ ಮುಖಂಡರಾದ ಆಲದಹಳ್ಳಿ ಸುಬ್ಬೇಗೌಡ, ಎಂ.ಸಿ. ರಾಜೇಂದ್ರ, ಉದಯಕುಮಾರ್ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>