<p><strong>ರಾಯಪುರ (ಐಎಎನ್ಎಸ್): </strong>ಕೇಂದ್ರದ ಮಾಜಿ ಸಚಿವ ವಿ.ಸಿ.ಶುಕ್ಲಾ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಫಾರ್ಮ್ಹೌಸ್ನಲ್ಲಿ ಬುಧವಾರ ನಡೆಯಿತು. ಛತ್ತೀಸಗಡದಲ್ಲಿ ಕಳೆದ ತಿಂಗಳ ನಕ್ಸಲರು ನಡೆಸಿದ ದಾಳಿಯಲ್ಲಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶುಕ್ಲಾ ಮಂಗಳವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.<br /> <br /> ಶುಕ್ಲಾ ಅವರ ಬಯಕೆಯಂತೆ ರಾಧೆಶ್ಯಾಂ ಭವನದ ಫಾರ್ಮ್ಹೌಸ್ನಲ್ಲೇ ಅಂತ್ಯಕ್ರಿಯೆ ನಡೆಸಲಾಯಿತು. ಅವರ ಮೊಮ್ಮಗ ವಿನಾಯಕ ಪಾಂಡೆ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.<br /> <br /> ಗೃಹಖಾತೆ ರಾಜ್ಯ ಸಚಿವ ಆರ್.ಪಿ.ಎನ್.ಸಿಂಗ್, ಕಾಂಗ್ರೆಸ್ ಮುಖಂಡ ಮೋತಿಲಾಲ್ ವೋರಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ದಿಗ್ವಿಜಯ್ ಸಿಂಗ್, ಬಿ.ಕೆ.ಹರಿಪ್ರಸಾದ್ಛತ್ತೀಸಗಡದ ರಾಜ್ಯಪಾಲ ಶೇಖರ್ ದತ್, ಮುಖ್ಯಮಂತ್ರಿ ರಮಣ್ ಸಿಂಗ್ ಅಲ್ಲದೆ ಹಲವು ಬಿಜೆಪಿ ಮುಖಂಡರೂ ಸಹ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.<br /> <br /> ಶುಕ್ಲಾ ಅವರ ಶವ ಇರಿಸಲಾಗಿದ್ದ ಗಾಂಧಿಭವನದಲ್ಲಿ ಬೆಳಿಗ್ಗೆಯಿಂದಲೇ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಮುಖಂಡರು ಅಗಮಿಸಿ ಅಂತಿಮ ನಮನ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ (ಐಎಎನ್ಎಸ್): </strong>ಕೇಂದ್ರದ ಮಾಜಿ ಸಚಿವ ವಿ.ಸಿ.ಶುಕ್ಲಾ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಫಾರ್ಮ್ಹೌಸ್ನಲ್ಲಿ ಬುಧವಾರ ನಡೆಯಿತು. ಛತ್ತೀಸಗಡದಲ್ಲಿ ಕಳೆದ ತಿಂಗಳ ನಕ್ಸಲರು ನಡೆಸಿದ ದಾಳಿಯಲ್ಲಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶುಕ್ಲಾ ಮಂಗಳವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.<br /> <br /> ಶುಕ್ಲಾ ಅವರ ಬಯಕೆಯಂತೆ ರಾಧೆಶ್ಯಾಂ ಭವನದ ಫಾರ್ಮ್ಹೌಸ್ನಲ್ಲೇ ಅಂತ್ಯಕ್ರಿಯೆ ನಡೆಸಲಾಯಿತು. ಅವರ ಮೊಮ್ಮಗ ವಿನಾಯಕ ಪಾಂಡೆ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.<br /> <br /> ಗೃಹಖಾತೆ ರಾಜ್ಯ ಸಚಿವ ಆರ್.ಪಿ.ಎನ್.ಸಿಂಗ್, ಕಾಂಗ್ರೆಸ್ ಮುಖಂಡ ಮೋತಿಲಾಲ್ ವೋರಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ದಿಗ್ವಿಜಯ್ ಸಿಂಗ್, ಬಿ.ಕೆ.ಹರಿಪ್ರಸಾದ್ಛತ್ತೀಸಗಡದ ರಾಜ್ಯಪಾಲ ಶೇಖರ್ ದತ್, ಮುಖ್ಯಮಂತ್ರಿ ರಮಣ್ ಸಿಂಗ್ ಅಲ್ಲದೆ ಹಲವು ಬಿಜೆಪಿ ಮುಖಂಡರೂ ಸಹ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.<br /> <br /> ಶುಕ್ಲಾ ಅವರ ಶವ ಇರಿಸಲಾಗಿದ್ದ ಗಾಂಧಿಭವನದಲ್ಲಿ ಬೆಳಿಗ್ಗೆಯಿಂದಲೇ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಮುಖಂಡರು ಅಗಮಿಸಿ ಅಂತಿಮ ನಮನ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>