<p>ಆನೇಕಲ್: ತಾಲ್ಲೂಕಿನ ಕೊಪ್ಪ ಗೇಟ್ ಸಮೀಪದ ತಪೋವನ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಪ್ರಜಾ ವಿಮೋಚನಾ ಚಳವಳಿ (ಸಮತವಾದ) ಸಂಘಟನೆಯ ಕೊಪ್ಪ ಗೇಟ್ ರವಿ ಆರೋಪಿಸಿದ್ದಾರೆ.<br /> <br /> ಶಾಲೆಯಲ್ಲಿ ಏಕಾಏಕಿ ಶುಲ್ಕ ಏರಿಕೆ ಮಾಡಿರುವುದನ್ನು ವಿರೋಧಿಸಿ ಪೋಷಕರು ಶುಕ್ರವಾರ ಶಾಲಾ ಆವರಣದಲ್ಲಿ ಸಭೆ ಸೇರಿ ಶುಲ್ಕ ಕಡಿಮೆ ಮಾಡುವಂತೆ ಶಾಲೆಯ ಆಡಳಿತ ಮಂಡಳಿಯನ್ನು ಕೋರಿ ಮಾತನಾಡಿದರು.<br /> <br /> ‘ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ಹಿಂದೆಯೇ ದೂರು ನೀಡಲಾಗಿತ್ತು. ಅವರು ಸೂಚನೆ ನೀಡಿದರೂ ಆಡಳಿತ ಮಂಡಳಿ ಯಾವುದೇ ಕಿಮ್ಮತ್ತು ನೀಡದೇ ಉದ್ಧಟತನದಿಂದ ವರ್ತಿಸುತ್ತಿದೆ. ಶಾಲೆಯಲ್ಲಿ ವಸೂಲು ಮಾಡುವ ಶುಲ್ಕಕ್ಕೆ ಪೂರ್ಣ ರಸೀದಿ ಸಹ ನೀಡುವುದಿಲ್ಲ’ ಎಂದು ಆರೋಪಿಸಿದರು.<br /> <br /> ಇದೇ ವೇಳೆಯಲ್ಲಿ ಸ್ಥಳದಲ್ಲಿದ್ದ ಪೋಷಕರೊಬ್ಬರು ಶಿಕ್ಷಕರು ಮಕ್ಕಳಿಗೆ ಸಲ್ಲದ ಶಿಕ್ಷೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.<br /> ನನ್ನ ಮಗುವನ್ನು ಈ ಶಾಲೆಯ ಶಿಕ್ಷಕರೊಬ್ಬರು ಈ ಹಿಂದೆ ಕಂಬಕ್ಕೆ ಕಟ್ಟಿ ಹಾಕಿ ಶಿಕ್ಷೆ ನೀಡಿದ್ದರು. ಈ ಬಗ್ಗೆ ನನ್ನ ಬಳಿ ಫೋಟೊಗಳು ಇವೆ ಎಂದು ದೂರಿದರು.<br /> <br /> ಈ ಕುರಿತು ಶಾಲೆಯ ಆಡಳಿತ ಮಂಡಳಿಯವರನ್ನು ‘ಪ್ರಜಾವಾಣಿ’ ಸಂಪರ್ಕಿಸಿದಾಗ ವಾಣಿ ಶರ್ಮ ಅವರು ಮಾತನಾಡಿ, ‘ಇದು ಮೂರು ನಾಲ್ಕು ತಿಂಗಳ ಹಿಂದಿನ ಘಟನೆ. ಕೆಲವರು ದುರುದ್ದೇಶದಿಂದ ಶಾಲೆಗೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನೇಕಲ್: ತಾಲ್ಲೂಕಿನ ಕೊಪ್ಪ ಗೇಟ್ ಸಮೀಪದ ತಪೋವನ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಪ್ರಜಾ ವಿಮೋಚನಾ ಚಳವಳಿ (ಸಮತವಾದ) ಸಂಘಟನೆಯ ಕೊಪ್ಪ ಗೇಟ್ ರವಿ ಆರೋಪಿಸಿದ್ದಾರೆ.<br /> <br /> ಶಾಲೆಯಲ್ಲಿ ಏಕಾಏಕಿ ಶುಲ್ಕ ಏರಿಕೆ ಮಾಡಿರುವುದನ್ನು ವಿರೋಧಿಸಿ ಪೋಷಕರು ಶುಕ್ರವಾರ ಶಾಲಾ ಆವರಣದಲ್ಲಿ ಸಭೆ ಸೇರಿ ಶುಲ್ಕ ಕಡಿಮೆ ಮಾಡುವಂತೆ ಶಾಲೆಯ ಆಡಳಿತ ಮಂಡಳಿಯನ್ನು ಕೋರಿ ಮಾತನಾಡಿದರು.<br /> <br /> ‘ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ಹಿಂದೆಯೇ ದೂರು ನೀಡಲಾಗಿತ್ತು. ಅವರು ಸೂಚನೆ ನೀಡಿದರೂ ಆಡಳಿತ ಮಂಡಳಿ ಯಾವುದೇ ಕಿಮ್ಮತ್ತು ನೀಡದೇ ಉದ್ಧಟತನದಿಂದ ವರ್ತಿಸುತ್ತಿದೆ. ಶಾಲೆಯಲ್ಲಿ ವಸೂಲು ಮಾಡುವ ಶುಲ್ಕಕ್ಕೆ ಪೂರ್ಣ ರಸೀದಿ ಸಹ ನೀಡುವುದಿಲ್ಲ’ ಎಂದು ಆರೋಪಿಸಿದರು.<br /> <br /> ಇದೇ ವೇಳೆಯಲ್ಲಿ ಸ್ಥಳದಲ್ಲಿದ್ದ ಪೋಷಕರೊಬ್ಬರು ಶಿಕ್ಷಕರು ಮಕ್ಕಳಿಗೆ ಸಲ್ಲದ ಶಿಕ್ಷೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.<br /> ನನ್ನ ಮಗುವನ್ನು ಈ ಶಾಲೆಯ ಶಿಕ್ಷಕರೊಬ್ಬರು ಈ ಹಿಂದೆ ಕಂಬಕ್ಕೆ ಕಟ್ಟಿ ಹಾಕಿ ಶಿಕ್ಷೆ ನೀಡಿದ್ದರು. ಈ ಬಗ್ಗೆ ನನ್ನ ಬಳಿ ಫೋಟೊಗಳು ಇವೆ ಎಂದು ದೂರಿದರು.<br /> <br /> ಈ ಕುರಿತು ಶಾಲೆಯ ಆಡಳಿತ ಮಂಡಳಿಯವರನ್ನು ‘ಪ್ರಜಾವಾಣಿ’ ಸಂಪರ್ಕಿಸಿದಾಗ ವಾಣಿ ಶರ್ಮ ಅವರು ಮಾತನಾಡಿ, ‘ಇದು ಮೂರು ನಾಲ್ಕು ತಿಂಗಳ ಹಿಂದಿನ ಘಟನೆ. ಕೆಲವರು ದುರುದ್ದೇಶದಿಂದ ಶಾಲೆಗೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>