<p>ಮಂಡ್ಯ: ಬೋಧನಾ ಹಾಗೂ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿದ್ದನ್ನು ಖಂಡಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಪಿಇಎಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ಮಾಡಿದರು.<br /> <br /> ಕಾಲೇಜಿನ ಆವರಣದಿಂದ ಪ್ರತಿಭಟನಾ ಮೆರವಣಿಗೆ ಹೊರಟ ಸಾವಿರಾರು ವಿದ್ಯಾರ್ಥಿಗಳು ಬೋಧನಾ ಶುಲ್ಕ ಹೆಚ್ಚಳದ ಅಧಿಸೂಚನೆಯನ್ನು ಆಡಳಿತ ಮಂಡಳಿಯು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.<br /> <br /> ಪರೀಕ್ಷಾ ಶುಲ್ಕವನ್ನು ಸರ್ಕಾರ ಮತ್ತೆ ಹೆಚ್ಚಳ ಮಾಡಿದ್ದು, ಇದು ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆ ಉಂಟು ಮಾಡುತ್ತಿದೆ. ಆದ್ದರಿಂದ ಶುಲ್ಕ ಹೆಚ್ಚಳದ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.<br /> <br /> ದಾಖಲಾತಿ ಸಮಯದಲ್ಲಿ 11 ಸಾವಿರ ರೂಪಾಯಿ ಶುಲ್ಕ ಪಾವತಿಸಿದ್ದರೂ ಕಾಲೇಜು ಆಡಳಿತ ಮಂಡಳಿ ಈಗ ಬಿ.ಎ., ಬಿ.ಕಾಂ. ವಿದ್ಯಾರ್ಥಿಗಳು ₨ 1,720, ಬಿ.ಎಸ್ಸಿ ವಿದ್ಯಾರ್ಥಿಗಳು ₨ 2,190 ಮತ್ತು ಬಿ.ಬಿ.ಎಂ. ವಿದ್ಯಾರ್ಥಿಗಳು ₨ 1,800 ಹೆಚ್ಚುವರಿ ಪಾವತಿಸಿಬೇಕು ಎಂದು ಸೂಚಿಸಿದೆ. ವಿಶ್ವವಿದ್ಯಾಲಯ ಮತ್ತು ಸರ್ಕಾರದ ಆದೇಶ ಇರದಿದ್ದರೂ ಹೆಚ್ಚಿನ ಶುಲ್ಕ ಕೇಳುತ್ತಿರುವುದನ್ನು ಖಂಡಿಸಿದರು.<br /> <br /> ಕಳೆದ ವರ್ಷ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿದ್ದ ಸರ್ಕಾರ ಈ ವರ್ಷ ಮತ್ತೆ ಶುಲ್ಕ ಹೆಚ್ಚಳ ಮಾಡಿದೆ. ಇದನ್ನು ಪ್ರಶ್ನಿಸಿದರೆ, ನಿಮ್ಮ ಬ್ಯಾಂಕ್ ಖಾತೆಗೆ ಹಣ ಮರು ಪಾವತಿಯಾಗುತ್ತದೆ ಎಂದು ಸಬೂಬು ಹೇಳುತ್ತಿದ್ದಾರೆ, 2012ರಲ್ಲಿ ನಾವು ಕಟ್ಟಿದ್ದ ಪರೀಕ್ಷಾ ಶುಲ್ಕ ಮರು ಪಾವತಿಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಶಿಕ್ಷಣವನ್ನು ಸರ್ಕಾರ ವ್ಯಾಪಾರೀಕರಣ ಮಾಡುತ್ತಿದೆ. ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ. ಕಾನೂನು ಮೀರಿ ಶುಲ್ಕ ಸಂಗ್ರಹಿಸುತ್ತಿರುವುದನ್ನು ಸರ್ಕಾರ ತಡೆಯಬೇಕು ಎಂದು ವಿದ್ಯಾರ್ಥಿ ಮುಖಂಡ ಮುತ್ತುರಾಜ್ ಆಗ್ರಹಿಸಿದರು.<br /> <br /> ಶಿಕ್ಷಣ ಸಂಸ್ಥೆ ಅಧ್ಯಕ್ಷರೊಂದಿಗೆ ಚರ್ಚಿಸಿ ವಿದ್ಯಾರ್ಥಿಗಳ ಪರವಾಗಿ ಕ್ರಮ ಕೈಗೊಳ್ಳುವುದಾಗಿ ಕಾಲೇಜಿನ ಪ್ರಾಂಶುಪಾಲರು ಹೆಚ್ಚುವರಿ ಜಿಲ್ಲಾಧಿಕಾರಿ ಎನ್್. ಶಂಕರಪ್ಪ ಅವರಿಗೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.<br /> <br /> ಸಂಘಟನೆಯ ರವಿ ಮೋಹನ್, ಕಾಲೇಜು ವಿದ್ಯಾರ್ಥಿಗಳಾದ ಪ್ರಸನ್ನ, ಮಹೇಶ್, ತೌಶಿಕ್, ಹೇಮಂತ್, ದೇವರಾಜ್, ದಿವ್ಯಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಬೋಧನಾ ಹಾಗೂ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿದ್ದನ್ನು ಖಂಡಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಪಿಇಎಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ಮಾಡಿದರು.<br /> <br /> ಕಾಲೇಜಿನ ಆವರಣದಿಂದ ಪ್ರತಿಭಟನಾ ಮೆರವಣಿಗೆ ಹೊರಟ ಸಾವಿರಾರು ವಿದ್ಯಾರ್ಥಿಗಳು ಬೋಧನಾ ಶುಲ್ಕ ಹೆಚ್ಚಳದ ಅಧಿಸೂಚನೆಯನ್ನು ಆಡಳಿತ ಮಂಡಳಿಯು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.<br /> <br /> ಪರೀಕ್ಷಾ ಶುಲ್ಕವನ್ನು ಸರ್ಕಾರ ಮತ್ತೆ ಹೆಚ್ಚಳ ಮಾಡಿದ್ದು, ಇದು ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆ ಉಂಟು ಮಾಡುತ್ತಿದೆ. ಆದ್ದರಿಂದ ಶುಲ್ಕ ಹೆಚ್ಚಳದ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.<br /> <br /> ದಾಖಲಾತಿ ಸಮಯದಲ್ಲಿ 11 ಸಾವಿರ ರೂಪಾಯಿ ಶುಲ್ಕ ಪಾವತಿಸಿದ್ದರೂ ಕಾಲೇಜು ಆಡಳಿತ ಮಂಡಳಿ ಈಗ ಬಿ.ಎ., ಬಿ.ಕಾಂ. ವಿದ್ಯಾರ್ಥಿಗಳು ₨ 1,720, ಬಿ.ಎಸ್ಸಿ ವಿದ್ಯಾರ್ಥಿಗಳು ₨ 2,190 ಮತ್ತು ಬಿ.ಬಿ.ಎಂ. ವಿದ್ಯಾರ್ಥಿಗಳು ₨ 1,800 ಹೆಚ್ಚುವರಿ ಪಾವತಿಸಿಬೇಕು ಎಂದು ಸೂಚಿಸಿದೆ. ವಿಶ್ವವಿದ್ಯಾಲಯ ಮತ್ತು ಸರ್ಕಾರದ ಆದೇಶ ಇರದಿದ್ದರೂ ಹೆಚ್ಚಿನ ಶುಲ್ಕ ಕೇಳುತ್ತಿರುವುದನ್ನು ಖಂಡಿಸಿದರು.<br /> <br /> ಕಳೆದ ವರ್ಷ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿದ್ದ ಸರ್ಕಾರ ಈ ವರ್ಷ ಮತ್ತೆ ಶುಲ್ಕ ಹೆಚ್ಚಳ ಮಾಡಿದೆ. ಇದನ್ನು ಪ್ರಶ್ನಿಸಿದರೆ, ನಿಮ್ಮ ಬ್ಯಾಂಕ್ ಖಾತೆಗೆ ಹಣ ಮರು ಪಾವತಿಯಾಗುತ್ತದೆ ಎಂದು ಸಬೂಬು ಹೇಳುತ್ತಿದ್ದಾರೆ, 2012ರಲ್ಲಿ ನಾವು ಕಟ್ಟಿದ್ದ ಪರೀಕ್ಷಾ ಶುಲ್ಕ ಮರು ಪಾವತಿಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಶಿಕ್ಷಣವನ್ನು ಸರ್ಕಾರ ವ್ಯಾಪಾರೀಕರಣ ಮಾಡುತ್ತಿದೆ. ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ. ಕಾನೂನು ಮೀರಿ ಶುಲ್ಕ ಸಂಗ್ರಹಿಸುತ್ತಿರುವುದನ್ನು ಸರ್ಕಾರ ತಡೆಯಬೇಕು ಎಂದು ವಿದ್ಯಾರ್ಥಿ ಮುಖಂಡ ಮುತ್ತುರಾಜ್ ಆಗ್ರಹಿಸಿದರು.<br /> <br /> ಶಿಕ್ಷಣ ಸಂಸ್ಥೆ ಅಧ್ಯಕ್ಷರೊಂದಿಗೆ ಚರ್ಚಿಸಿ ವಿದ್ಯಾರ್ಥಿಗಳ ಪರವಾಗಿ ಕ್ರಮ ಕೈಗೊಳ್ಳುವುದಾಗಿ ಕಾಲೇಜಿನ ಪ್ರಾಂಶುಪಾಲರು ಹೆಚ್ಚುವರಿ ಜಿಲ್ಲಾಧಿಕಾರಿ ಎನ್್. ಶಂಕರಪ್ಪ ಅವರಿಗೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.<br /> <br /> ಸಂಘಟನೆಯ ರವಿ ಮೋಹನ್, ಕಾಲೇಜು ವಿದ್ಯಾರ್ಥಿಗಳಾದ ಪ್ರಸನ್ನ, ಮಹೇಶ್, ತೌಶಿಕ್, ಹೇಮಂತ್, ದೇವರಾಜ್, ದಿವ್ಯಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>