<p><strong>ಬೆಂಗಳೂರು: </strong>`ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಸಮರ್ಥ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಅವರ ಆಡಳಿತದ ಕಾರ್ಯವೈಖರಿಯಲ್ಲಿ ಉತ್ತರ ಕರ್ನಾಟಕದ ಗಡಸುತನ ಕಾಣಿಸುತ್ತಿಲ್ಲ~ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಬುಧವಾರ ಇಲ್ಲಿ ಟೀಕಿಸಿದರು.<br /> <br /> `ಆಡಳಿತದ ಮೇಲೆ ಹಿಡಿತ ಇಲ್ಲದ ಶೆಟ್ಟರ್ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತು ಕುಬ್ಜರಾಗಿದ್ದಾರೆ. ಆ ಕುರ್ಜಿಯಿಂದ ವ್ಯಕ್ತಿಯ ಗೌರವ ಹೆಚ್ಚಾಗುವುದಿಲ್ಲ. ಬದಲಿಗೆ, ಕುರ್ಚಿಗೆ ಗೌರವ ತಂದು ಕೊಡುವ ಕೆಲಸ ಆ ಕುರ್ಚಿಯಲ್ಲಿ ಕುಳಿತವರಿಂದ ಆಗಬೇಕು ಎನ್ನುವುದನ್ನು ಶೆಟ್ಟರ್ ಮರೆತಿದ್ದಾರೆ~ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಛೇಡಿಸಿದರು.<br /> <br /> ಬೆಂಗಳೂರಿನ ಕಸ ಸಮಸ್ಯೆಯಿಂದ ಬರ ನಿರ್ವಹಣೆವರೆಗೆ ಎಲ್ಲ ಹಂತಗಳಲ್ಲೂ ಶೆಟ್ಟರ್ ವಿಫಲರಾಗಿದ್ದಾರೆ. ಅವರ ಸಚಿವ ಸಂಪುಟದ ಸಹೋದ್ಯೋಗಿಗಳಲ್ಲಿ ಹೊಂದಾಣಿಕೆ ಇಲ್ಲ. ಪ್ರತಿನಿತ್ಯ ಸಚಿವರ ನಡುವೆಯೇ ವಾಗ್ವಾದ ನಡೆಯುತ್ತಿದೆ. ಇವರ ಮೇಲೆ ನಿಯಂತ್ರಣ ಸಾಧಿಸಲಾಗದೆ ಶೆಟ್ಟರ್ ಅಸಹಾಯಕರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.<br /> <br /> ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮೊದಲ ಬಾರಿಗೆ ವಿಧಾನಮಂಡಲದ ಅಧಿವೇಶನ (ಡಿ. 5ರಿಂದ) ನಡೆಯುತ್ತಿದೆ. ಕನಿಷ್ಠ 15 ದಿನವಾದರೂ ಅಧಿವೇಶನ ನಡೆಸಿ, ಆ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಿತ್ತು. ಆದರೆ, ಸರ್ಕಾರಕ್ಕೆ ಆ ಇಚ್ಛಾಶಕ್ತಿ ಇಲ್ಲ. ಬರಿ ಏಳು ದಿನ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಟೀಕಿಸಿದರು.<br /> <br /> ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಬಿಜೆಪಿ- ಕೆಜೆಪಿ ಎಂಬ ಗೊಂದಲದಲ್ಲಿ ಆಡಳಿತಾರೂಢ ಶಾಸಕರಿದ್ದಾರೆ. ಬಿಜೆಪಿ ಶಾಸಕರೆಲ್ಲ ಕೆಜೆಪಿ ಜತೆ ಗುರುತಿಸಿಕೊಳ್ಳುತ್ತಿದ್ದಾರೆ. ಸರ್ಕಾರ ಒಂದು ರೀತಿ ಬಹುಮತ ಕಳೆದುಕೊಂಡಿದೆ. ಮುಂದಿನ ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸುವ ಸಂಬಂಧ ಶಾಸಕಾಂಗ ಪಕ್ಷದ ನಾಯಕರ ಜತೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.<br /> <br /> ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಆದರೆ, ರಾಜ್ಯ ಸರ್ಕಾರ, ವಾರ್ಡ್ವಾರು ಮೀಸಲಾತಿ ಪಟ್ಟಿಯನ್ನು ಒದಗಿಸದೆ ತಡ ಮಾಡುತ್ತಿದೆ. ಚುನಾವಣೆ ನಡೆಸುವುದು ಸರ್ಕಾರಕ್ಕೆ ಇಷ್ಟ ಇದ್ದಂತಿಲ್ಲ ಎಂದು ಅವರು ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಸಮರ್ಥ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಅವರ ಆಡಳಿತದ ಕಾರ್ಯವೈಖರಿಯಲ್ಲಿ ಉತ್ತರ ಕರ್ನಾಟಕದ ಗಡಸುತನ ಕಾಣಿಸುತ್ತಿಲ್ಲ~ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಬುಧವಾರ ಇಲ್ಲಿ ಟೀಕಿಸಿದರು.<br /> <br /> `ಆಡಳಿತದ ಮೇಲೆ ಹಿಡಿತ ಇಲ್ಲದ ಶೆಟ್ಟರ್ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತು ಕುಬ್ಜರಾಗಿದ್ದಾರೆ. ಆ ಕುರ್ಜಿಯಿಂದ ವ್ಯಕ್ತಿಯ ಗೌರವ ಹೆಚ್ಚಾಗುವುದಿಲ್ಲ. ಬದಲಿಗೆ, ಕುರ್ಚಿಗೆ ಗೌರವ ತಂದು ಕೊಡುವ ಕೆಲಸ ಆ ಕುರ್ಚಿಯಲ್ಲಿ ಕುಳಿತವರಿಂದ ಆಗಬೇಕು ಎನ್ನುವುದನ್ನು ಶೆಟ್ಟರ್ ಮರೆತಿದ್ದಾರೆ~ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಛೇಡಿಸಿದರು.<br /> <br /> ಬೆಂಗಳೂರಿನ ಕಸ ಸಮಸ್ಯೆಯಿಂದ ಬರ ನಿರ್ವಹಣೆವರೆಗೆ ಎಲ್ಲ ಹಂತಗಳಲ್ಲೂ ಶೆಟ್ಟರ್ ವಿಫಲರಾಗಿದ್ದಾರೆ. ಅವರ ಸಚಿವ ಸಂಪುಟದ ಸಹೋದ್ಯೋಗಿಗಳಲ್ಲಿ ಹೊಂದಾಣಿಕೆ ಇಲ್ಲ. ಪ್ರತಿನಿತ್ಯ ಸಚಿವರ ನಡುವೆಯೇ ವಾಗ್ವಾದ ನಡೆಯುತ್ತಿದೆ. ಇವರ ಮೇಲೆ ನಿಯಂತ್ರಣ ಸಾಧಿಸಲಾಗದೆ ಶೆಟ್ಟರ್ ಅಸಹಾಯಕರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.<br /> <br /> ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮೊದಲ ಬಾರಿಗೆ ವಿಧಾನಮಂಡಲದ ಅಧಿವೇಶನ (ಡಿ. 5ರಿಂದ) ನಡೆಯುತ್ತಿದೆ. ಕನಿಷ್ಠ 15 ದಿನವಾದರೂ ಅಧಿವೇಶನ ನಡೆಸಿ, ಆ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಿತ್ತು. ಆದರೆ, ಸರ್ಕಾರಕ್ಕೆ ಆ ಇಚ್ಛಾಶಕ್ತಿ ಇಲ್ಲ. ಬರಿ ಏಳು ದಿನ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಟೀಕಿಸಿದರು.<br /> <br /> ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಬಿಜೆಪಿ- ಕೆಜೆಪಿ ಎಂಬ ಗೊಂದಲದಲ್ಲಿ ಆಡಳಿತಾರೂಢ ಶಾಸಕರಿದ್ದಾರೆ. ಬಿಜೆಪಿ ಶಾಸಕರೆಲ್ಲ ಕೆಜೆಪಿ ಜತೆ ಗುರುತಿಸಿಕೊಳ್ಳುತ್ತಿದ್ದಾರೆ. ಸರ್ಕಾರ ಒಂದು ರೀತಿ ಬಹುಮತ ಕಳೆದುಕೊಂಡಿದೆ. ಮುಂದಿನ ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸುವ ಸಂಬಂಧ ಶಾಸಕಾಂಗ ಪಕ್ಷದ ನಾಯಕರ ಜತೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.<br /> <br /> ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಆದರೆ, ರಾಜ್ಯ ಸರ್ಕಾರ, ವಾರ್ಡ್ವಾರು ಮೀಸಲಾತಿ ಪಟ್ಟಿಯನ್ನು ಒದಗಿಸದೆ ತಡ ಮಾಡುತ್ತಿದೆ. ಚುನಾವಣೆ ನಡೆಸುವುದು ಸರ್ಕಾರಕ್ಕೆ ಇಷ್ಟ ಇದ್ದಂತಿಲ್ಲ ಎಂದು ಅವರು ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>