<p><strong>ಹುಬ್ಬಳ್ಳಿ:</strong> `ಉತ್ತರ ಕರ್ನಾಟಕದ ಪ್ರಮುಖ ನಾಯಕರೂ ಆದ ಬಹುಕಾಲದ ಹಿರಿಯ ಸ್ನೇಹಿತ ಜಗದೀಶ ಶೆಟ್ಟರ ಮುಖ್ಯಮಂತ್ರಿ ಆಗಬೇಕು ಎಂಬುದು ನಮ್ಮೆಲ್ಲರ ಅಪೇಕ್ಷೆಯಾಗಿದೆ~ ಎಂದು ಸಂಸದ ಪ್ರಹ್ಲಾದ ಜೋಶಿ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ವರದಿಗಾರರ ಮಾತನಾಡಿದ ಅವರು, `ಶೆಟ್ಟರ ಅವರಿಗೆ ಮುಖ್ಯಮಂತ್ರಿ ಪಟ್ಟ ಸಿಗಬೇಕು ಎನ್ನುವ ಅಪೇಕ್ಷೆ ಇಟ್ಟುಕೊಂಡೇ ಮುಖಂಡರ ಜೊತೆ ಮಾತನಾಡಲು ನಾನೂ ನವದೆಹಲಿಗೆ ಹೊರಟಿದ್ದೇನೆ. ಅವರು ಮುಖ್ಯಮಂತ್ರಿಯಾದರೆ ನಮಗೆಲ್ಲ ಅದೇ ಹರ್ಷ~ ಎಂದು ಹೇಳಿದರು.</p>.<p>`ಶೆಟ್ಟರ ಮುಖ್ಯಮಂತ್ರಿ ಆಗಬೇಕೆಂಬುದು ನಮ್ಮ ಬಹುದಿನದ ಆಕಾಂಕ್ಷೆಯಾದರೂ ಅದಕ್ಕೆ ಈವರೆಗೆ ಅವಕಾಶ ಸೃಷ್ಟಿಯಾಗಿರಲಿಲ್ಲ. ಈಗ ಅಂತಹ ಅವಕಾಶ ಗೋಚರಿಸಿದ್ದು, ಅವರನ್ನೇ ಸಿ.ಎಂ ಮಾಡಬೇಕು ಎನ್ನುವ ಒತ್ತಾಯವನ್ನು ನಾವೂ ಮಾಡುತ್ತೇವೆ~ ಎಂದು ಅವರು ತಿಳಿಸಿದರು.</p>.<p>`ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ, ವಿರೋಧ ಪಕ್ಷದ ನಾಯಕನ ಹುದ್ದೆ, ವಿಧಾನಸಭೆ ಅಧ್ಯಕ್ಷ ಪೀಠ ಹಾಗೂ ವಿವಿಧ ಇಲಾಖೆಗಳ ಸಚಿವರಾಗಿ ಅಪಾರ ಅನುಭವ ಹೊಂದಿರುವ ಶೆಟ್ಟರ, ಮುಖ್ಯಮಂತ್ರಿ ಹುದ್ದೆಗೆ ಅರ್ಹವಾದ ವ್ಯಕ್ತಿ ಯಾಗಿದ್ದಾರೆ~ ಎಂದು ಅಭಿಪ್ರಾಯ ಪಟ್ಟರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, `ಡಿ.ವಿ. ಸದಾನಂದಗೌಡರು ಕೂಡ ನಮ್ಮ ನಾಯಕರು. ಮುಖ್ಯಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ~ ಎಂದು ಹೇಳಿದರು.</p>.<p>ಬಿಜೆಪಿಯಲ್ಲಿ ನಡೆದಿರುವ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, `3-4 ದಿನಗಳಲ್ಲಿ ಎಲ್ಲ ಗೊಂದಲವೂ ತಿಳಿಯಾಗಲಿದೆ~ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> `ಉತ್ತರ ಕರ್ನಾಟಕದ ಪ್ರಮುಖ ನಾಯಕರೂ ಆದ ಬಹುಕಾಲದ ಹಿರಿಯ ಸ್ನೇಹಿತ ಜಗದೀಶ ಶೆಟ್ಟರ ಮುಖ್ಯಮಂತ್ರಿ ಆಗಬೇಕು ಎಂಬುದು ನಮ್ಮೆಲ್ಲರ ಅಪೇಕ್ಷೆಯಾಗಿದೆ~ ಎಂದು ಸಂಸದ ಪ್ರಹ್ಲಾದ ಜೋಶಿ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ವರದಿಗಾರರ ಮಾತನಾಡಿದ ಅವರು, `ಶೆಟ್ಟರ ಅವರಿಗೆ ಮುಖ್ಯಮಂತ್ರಿ ಪಟ್ಟ ಸಿಗಬೇಕು ಎನ್ನುವ ಅಪೇಕ್ಷೆ ಇಟ್ಟುಕೊಂಡೇ ಮುಖಂಡರ ಜೊತೆ ಮಾತನಾಡಲು ನಾನೂ ನವದೆಹಲಿಗೆ ಹೊರಟಿದ್ದೇನೆ. ಅವರು ಮುಖ್ಯಮಂತ್ರಿಯಾದರೆ ನಮಗೆಲ್ಲ ಅದೇ ಹರ್ಷ~ ಎಂದು ಹೇಳಿದರು.</p>.<p>`ಶೆಟ್ಟರ ಮುಖ್ಯಮಂತ್ರಿ ಆಗಬೇಕೆಂಬುದು ನಮ್ಮ ಬಹುದಿನದ ಆಕಾಂಕ್ಷೆಯಾದರೂ ಅದಕ್ಕೆ ಈವರೆಗೆ ಅವಕಾಶ ಸೃಷ್ಟಿಯಾಗಿರಲಿಲ್ಲ. ಈಗ ಅಂತಹ ಅವಕಾಶ ಗೋಚರಿಸಿದ್ದು, ಅವರನ್ನೇ ಸಿ.ಎಂ ಮಾಡಬೇಕು ಎನ್ನುವ ಒತ್ತಾಯವನ್ನು ನಾವೂ ಮಾಡುತ್ತೇವೆ~ ಎಂದು ಅವರು ತಿಳಿಸಿದರು.</p>.<p>`ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ, ವಿರೋಧ ಪಕ್ಷದ ನಾಯಕನ ಹುದ್ದೆ, ವಿಧಾನಸಭೆ ಅಧ್ಯಕ್ಷ ಪೀಠ ಹಾಗೂ ವಿವಿಧ ಇಲಾಖೆಗಳ ಸಚಿವರಾಗಿ ಅಪಾರ ಅನುಭವ ಹೊಂದಿರುವ ಶೆಟ್ಟರ, ಮುಖ್ಯಮಂತ್ರಿ ಹುದ್ದೆಗೆ ಅರ್ಹವಾದ ವ್ಯಕ್ತಿ ಯಾಗಿದ್ದಾರೆ~ ಎಂದು ಅಭಿಪ್ರಾಯ ಪಟ್ಟರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, `ಡಿ.ವಿ. ಸದಾನಂದಗೌಡರು ಕೂಡ ನಮ್ಮ ನಾಯಕರು. ಮುಖ್ಯಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ~ ಎಂದು ಹೇಳಿದರು.</p>.<p>ಬಿಜೆಪಿಯಲ್ಲಿ ನಡೆದಿರುವ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, `3-4 ದಿನಗಳಲ್ಲಿ ಎಲ್ಲ ಗೊಂದಲವೂ ತಿಳಿಯಾಗಲಿದೆ~ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>