<p><strong>ನವದೆಹಲಿ (ಪಿಟಿಐ):</strong> ಜಾಗತಿಕ ಆರ್ಥಿಕ ಅಸ್ಥಿರತೆ ಮತ್ತು ಹಣದುಬ್ಬರ ಏರಿಕೆಯಿಂದ ಸೃಷ್ಟಿಯಾಗಿರುವ ಆತಂಕಗಳನ್ನು ಅಲ್ಲಗಳೆದಿರುವ ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ, ದೇಶವು ಅಲ್ಪಾವಧಿ ಮತ್ತು ದೀರ್ಘಾವಧಿಯಲ್ಲಿ ಶೇ 8.5 ರಿಂದ ಶೇ 9ರಷ್ಟು ಆರ್ಥಿಕ ವೃದ್ಧಿ ದರ (ಜಿಡಿಪಿ) ಕಾಯ್ದುಕೊಳ್ಳಲಿದೆ ಎಂದು ಹೇಳಿದ್ದಾರೆ. <br /> <br /> ಸೋಮವಾರ ಇಲ್ಲಿ `ಏಷ್ಯಾ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಮತ್ತು ಭಾರತದ ನಡುವಿನ ಪಾಲುದಾರಿಕೆಯ ಬೆಳ್ಳಿ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೇಶದ ಆರ್ಥಿಕ ವೃದ್ಧಿ ದರ ತ್ವರಿತವಾಗಿ ಬೆಳೆಯುತ್ತಿದ್ದು, ಶೇ 8.5ರಿಂದ ಶೇ 9ರಷ್ಟು ಸರಾಸರಿ ಗುರಿ ಕಾಯ್ದುಕೊಳ್ಳಲಿದೆ.<br /> <br /> ಆದರೆ, ಸದ್ಯ ಪ್ರವರ್ಧಮಾನಕ್ಕೆ ಬರುತ್ತಿರುವ ಹೊಸ ಸಮಸ್ಯೆಗಳು ಮತ್ತು ಸವಾಲುಗಳ ಕುರಿತು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದರು.`ಇತರ ದೇಶಗಳಂತೆ ಅಗತ್ಯ ಸರಕುಗಳ ಬೆಲೆ ಏರಿಕೆ ಮತ್ತು ಆಹಾರ ಭದ್ರತೆಗೆ ಸಂಬಂಧಿಸಿದ ಸಮಸ್ಯೆಗಳು ದೇಶದಲ್ಲಿಯೂ ಇವೆ. <br /> <br /> ಸುಸ್ಥಿರ ಪ್ರಗತಿ ಆಧಾರದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.<br /> <br /> 12ನೇ ಪಂಚವಾರ್ಷಿಕ ಯೋಜನೆ ಅವಧಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗಾಗಿ ಒಟ್ಟು ರೂ1 ಲಕ್ಷ ಕೋಟಿ ಹೂಡಿಕೆ ಮಾಡಲಾಗುವುದು. ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ಮೂಲಸೌಕರ್ಯ ವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು `ಎಡಿಬಿ~ ನೆರವು ನೀಡಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಜಾಗತಿಕ ಆರ್ಥಿಕ ಅಸ್ಥಿರತೆ ಮತ್ತು ಹಣದುಬ್ಬರ ಏರಿಕೆಯಿಂದ ಸೃಷ್ಟಿಯಾಗಿರುವ ಆತಂಕಗಳನ್ನು ಅಲ್ಲಗಳೆದಿರುವ ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ, ದೇಶವು ಅಲ್ಪಾವಧಿ ಮತ್ತು ದೀರ್ಘಾವಧಿಯಲ್ಲಿ ಶೇ 8.5 ರಿಂದ ಶೇ 9ರಷ್ಟು ಆರ್ಥಿಕ ವೃದ್ಧಿ ದರ (ಜಿಡಿಪಿ) ಕಾಯ್ದುಕೊಳ್ಳಲಿದೆ ಎಂದು ಹೇಳಿದ್ದಾರೆ. <br /> <br /> ಸೋಮವಾರ ಇಲ್ಲಿ `ಏಷ್ಯಾ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಮತ್ತು ಭಾರತದ ನಡುವಿನ ಪಾಲುದಾರಿಕೆಯ ಬೆಳ್ಳಿ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೇಶದ ಆರ್ಥಿಕ ವೃದ್ಧಿ ದರ ತ್ವರಿತವಾಗಿ ಬೆಳೆಯುತ್ತಿದ್ದು, ಶೇ 8.5ರಿಂದ ಶೇ 9ರಷ್ಟು ಸರಾಸರಿ ಗುರಿ ಕಾಯ್ದುಕೊಳ್ಳಲಿದೆ.<br /> <br /> ಆದರೆ, ಸದ್ಯ ಪ್ರವರ್ಧಮಾನಕ್ಕೆ ಬರುತ್ತಿರುವ ಹೊಸ ಸಮಸ್ಯೆಗಳು ಮತ್ತು ಸವಾಲುಗಳ ಕುರಿತು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದರು.`ಇತರ ದೇಶಗಳಂತೆ ಅಗತ್ಯ ಸರಕುಗಳ ಬೆಲೆ ಏರಿಕೆ ಮತ್ತು ಆಹಾರ ಭದ್ರತೆಗೆ ಸಂಬಂಧಿಸಿದ ಸಮಸ್ಯೆಗಳು ದೇಶದಲ್ಲಿಯೂ ಇವೆ. <br /> <br /> ಸುಸ್ಥಿರ ಪ್ರಗತಿ ಆಧಾರದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.<br /> <br /> 12ನೇ ಪಂಚವಾರ್ಷಿಕ ಯೋಜನೆ ಅವಧಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗಾಗಿ ಒಟ್ಟು ರೂ1 ಲಕ್ಷ ಕೋಟಿ ಹೂಡಿಕೆ ಮಾಡಲಾಗುವುದು. ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ಮೂಲಸೌಕರ್ಯ ವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು `ಎಡಿಬಿ~ ನೆರವು ನೀಡಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>