<p><strong>ಚಿತ್ರದುರ್ಗ:</strong> ಹೊಳಲ್ಕೆರೆ ತಾಲ್ಲೂಕು ನಾರಾಯಣಗೊಂಡನಹಳ್ಳಿಯ ದಲಿತ ಕಾಲೊನಿಯಲ್ಲಿ ಮಂಗಳವಾರ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಶೈಕ್ಷಣಿಕ ಜಾಗೃತಿ ಪಾದಯಾತ್ರೆ ನಡೆಸಿದರು.<br /> <br /> ಶಿವಶರಣ ಮಾದಾರ ಚನ್ನಯ್ಯ ಗುರುಪೀಠ ಹಾಗೂ ಇನ್ನರ್ವ್ಹೀಲ್ ಕ್ಲಬ್ ಸಹಯೋಗದಲ್ಲಿ ಪಾದಯಾತ್ರೆ ಆಯೋಜಿಸಲಾಗಿತ್ತು. <br /> <br /> ಇಲ್ಲಿನ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಸ್ವಾಮೀಜಿ, ಶಾಲೆ ಬಿಟ್ಟಿರುವ ದಲಿತರ ಮಕ್ಕಳ ವಿವರಗಳನ್ನು ಪಡೆದು ಮನೆಗಳಿಗೆ ಭೇಟಿ ನೀಡಿ ಶಾಲೆಗೆ ಮಕ್ಕಳನ್ನು ಕಳುಹಿಸುವಂತೆ ಪೋಷಕರ ಮನವೊಲಿಸಿದರು. <br /> <br /> ಗ್ರಾಮದಲ್ಲಿ ಸುಮಾರು 160 ದಲಿತ ಕುಟುಂಬಗಳು ವಾಸಿಸುತ್ತಿದ್ದು, ಅವರಿಗೆ ಉಳುಮೆಗೆ ಭೂಮಿ ಇಲ್ಲ ಹಾಗೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಕಾಳಜಿ ಇಲ್ಲ ಎಂಬುದನ್ನು ತಿಳಿದುಕೊಂಡ ಸ್ವಾಮೀಜಿ ಪೋಷಕರ ಮನವೊಲಿಸಲು ಗ್ರಾಮಕ್ಕೆ ಆಗಮಿಸಿದ್ದರು.<br /> <br /> ಮಕ್ಕಳಿಗೆ ಶಿಕ್ಷಣ ಕೊಡಿಸದಿದ್ದರೆ ದಲಿತರ ಅಭಿವೃದ್ಧಿ ಅಸಾಧ್ಯ. ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ ವಿದ್ಯಾವಂತರಾಗಿ ಮಾಡಬೇಕು ಎಂದು ಸಲಹೆ ನೀಡಿದರು.<br /> <br /> ಮಕ್ಕಳನ್ನು ಶಾಲೆಗೆ ಕಳುಹಿಸುತ್ತೇವೆ ಎಂದು ಪೋಷಕರು ಸ್ವಾಮೀಜಿಗೆ ವಾಗ್ದಾನ ಮಾಡಿದರು. <br /> ಶೋಷಿತರ ಸಮುದಾಯಗಳಲ್ಲಿರುವ ಶಿಕ್ಷಣದ ಬಗ್ಗೆ ಅಸಡ್ಡೆ ತೊಲಗಿಸಲು ರಾಜ್ಯದ ವಿವಿಧೆಡೆ ಶೈಕ್ಷಣಿಕ ಜಾಗೃತಿ ಪಾದಯಾತ್ರೆ ನಡೆಸಲಾಗುವುದು ಎಂದರು.<br /> <br /> ಇದೇ ಸಂದರ್ಭದಲ್ಲಿ 180 ಮಕ್ಕಳಿಗೆ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ವತಿಯಿಂದ ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. <br /> <br /> ಇನ್ನರ್ವ್ಹೀಲ್ ಕ್ಲಬ್ ಅಧ್ಯಕ್ಷೆ ಸೌಮ್ಯಾ ರವಿಶಂಕರ್, ಸದಸ್ಯರಾದ ರೂಪಾ ಜನಾರ್ದನ್, ಭಾಗ್ಯ, ಫರ್ನಾಜ್ ಇಸಾಕ್, ಶೀಲಾ ನರೇಂದ್ರ, ಯುವ ಕಾಂಗ್ರೆಸ್ ಮುಖಂಡ ಪಾಡಿಗಟ್ಟೆ ಸುರೇಶ್, ಗ್ರಾಮ ಪಂಚಾಯ್ತಿ ಸದಸ್ಯ ರಂಗಪ್ಪ, ವರ್ತಕ ರವಿಶಂಕರ್ ಇತರರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಹೊಳಲ್ಕೆರೆ ತಾಲ್ಲೂಕು ನಾರಾಯಣಗೊಂಡನಹಳ್ಳಿಯ ದಲಿತ ಕಾಲೊನಿಯಲ್ಲಿ ಮಂಗಳವಾರ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಶೈಕ್ಷಣಿಕ ಜಾಗೃತಿ ಪಾದಯಾತ್ರೆ ನಡೆಸಿದರು.<br /> <br /> ಶಿವಶರಣ ಮಾದಾರ ಚನ್ನಯ್ಯ ಗುರುಪೀಠ ಹಾಗೂ ಇನ್ನರ್ವ್ಹೀಲ್ ಕ್ಲಬ್ ಸಹಯೋಗದಲ್ಲಿ ಪಾದಯಾತ್ರೆ ಆಯೋಜಿಸಲಾಗಿತ್ತು. <br /> <br /> ಇಲ್ಲಿನ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಸ್ವಾಮೀಜಿ, ಶಾಲೆ ಬಿಟ್ಟಿರುವ ದಲಿತರ ಮಕ್ಕಳ ವಿವರಗಳನ್ನು ಪಡೆದು ಮನೆಗಳಿಗೆ ಭೇಟಿ ನೀಡಿ ಶಾಲೆಗೆ ಮಕ್ಕಳನ್ನು ಕಳುಹಿಸುವಂತೆ ಪೋಷಕರ ಮನವೊಲಿಸಿದರು. <br /> <br /> ಗ್ರಾಮದಲ್ಲಿ ಸುಮಾರು 160 ದಲಿತ ಕುಟುಂಬಗಳು ವಾಸಿಸುತ್ತಿದ್ದು, ಅವರಿಗೆ ಉಳುಮೆಗೆ ಭೂಮಿ ಇಲ್ಲ ಹಾಗೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಕಾಳಜಿ ಇಲ್ಲ ಎಂಬುದನ್ನು ತಿಳಿದುಕೊಂಡ ಸ್ವಾಮೀಜಿ ಪೋಷಕರ ಮನವೊಲಿಸಲು ಗ್ರಾಮಕ್ಕೆ ಆಗಮಿಸಿದ್ದರು.<br /> <br /> ಮಕ್ಕಳಿಗೆ ಶಿಕ್ಷಣ ಕೊಡಿಸದಿದ್ದರೆ ದಲಿತರ ಅಭಿವೃದ್ಧಿ ಅಸಾಧ್ಯ. ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ ವಿದ್ಯಾವಂತರಾಗಿ ಮಾಡಬೇಕು ಎಂದು ಸಲಹೆ ನೀಡಿದರು.<br /> <br /> ಮಕ್ಕಳನ್ನು ಶಾಲೆಗೆ ಕಳುಹಿಸುತ್ತೇವೆ ಎಂದು ಪೋಷಕರು ಸ್ವಾಮೀಜಿಗೆ ವಾಗ್ದಾನ ಮಾಡಿದರು. <br /> ಶೋಷಿತರ ಸಮುದಾಯಗಳಲ್ಲಿರುವ ಶಿಕ್ಷಣದ ಬಗ್ಗೆ ಅಸಡ್ಡೆ ತೊಲಗಿಸಲು ರಾಜ್ಯದ ವಿವಿಧೆಡೆ ಶೈಕ್ಷಣಿಕ ಜಾಗೃತಿ ಪಾದಯಾತ್ರೆ ನಡೆಸಲಾಗುವುದು ಎಂದರು.<br /> <br /> ಇದೇ ಸಂದರ್ಭದಲ್ಲಿ 180 ಮಕ್ಕಳಿಗೆ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ವತಿಯಿಂದ ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. <br /> <br /> ಇನ್ನರ್ವ್ಹೀಲ್ ಕ್ಲಬ್ ಅಧ್ಯಕ್ಷೆ ಸೌಮ್ಯಾ ರವಿಶಂಕರ್, ಸದಸ್ಯರಾದ ರೂಪಾ ಜನಾರ್ದನ್, ಭಾಗ್ಯ, ಫರ್ನಾಜ್ ಇಸಾಕ್, ಶೀಲಾ ನರೇಂದ್ರ, ಯುವ ಕಾಂಗ್ರೆಸ್ ಮುಖಂಡ ಪಾಡಿಗಟ್ಟೆ ಸುರೇಶ್, ಗ್ರಾಮ ಪಂಚಾಯ್ತಿ ಸದಸ್ಯ ರಂಗಪ್ಪ, ವರ್ತಕ ರವಿಶಂಕರ್ ಇತರರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>