<p><strong>ಲಿಂಗಸುಗೂರ: </strong>ಬಹುಸಂಖ್ಯಾತ ಅನಕ್ಷರತೆ ರಾಷ್ಟ್ರದ ಅಭಿವೃದ್ಧಿಗೆ ಶಾಪವಾಗಿದೆ. ಶೈಕ್ಷಣಿಕ ಪ್ರಗತಿಯಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಮನಗಂಡು ‘ಸಾಕ್ಷರ ಭಾರತ’ ಕಾರ್ಯಕ್ರಮ ಆಯೋಜಿಸಲಾಗಿದೆ. <br /> <br /> ನಾಗರಿಕ ಸಮಾಜದ ಪ್ರತಿಯೊಬ್ಬರೂ ಈ ಕಾರ್ಯಕ್ರಮವನ್ನು ಜನಾಂದೋಲನವಾಗಿ ಮಾರ್ಪಡಿಸಿ ಸಾಕ್ಷರ ನಾಡು ಕಟ್ಟಲು ಮುಂದಾಗಬೇಕು ಎಂದು ತಹಸೀಲ್ದಾರ ಎಂ.ರಾಚಪ್ಪ ಮನವಿ ಮಾಡಿದರು.<br /> <br /> ಗುರುವಾರ ತಾಲ್ಲೂಕು ಲೋಕ ಶಿಕ್ಷಣ ಸಮಿತಿ ಗ್ರಾಪಂ ಅಧ್ಯಕ್ಷರಿಗಾಗಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಅನಕ್ಷರತೆ ನಿವಾರಣೆಗೆ ಸರ್ಕಾರಗಳು ಸಾಕಷ್ಟು ಕಾರ್ಯಕ್ರಮ ರೂಪಿಸುತ್ತಾ ಬಂದಿವೆ. <br /> <br /> ಜನತೆ ಸಹಕಾರ ದೊರೆತರೂ ಕೂಡ ನಿಧಾನಗತಿಯಲ್ಲಿ ಶೈಕ್ಷಣಿಕ ಪ್ರಗತಿ ಕಾಣುತ್ತಿರುವುದು ಅಭಿವೃದ್ಧಿಗೆ ಮಾರಕವಾಗಿದೆ. ಈ ನಿಟ್ಟಿನಲ್ಲಿ ತಾವುಗಳು ಹೆಚ್ಚಿನ ಸಹಕಾರ ನೀಡಬೇಕು” ಎಂದು ಕೋರಿದರು.<br /> <br /> ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಎಚ್ ನಾಗೂರು, ಸಿಡಿಪಿಒ ಪ್ರಭಾಕರ ಮಾತನಾಡಿ, ಹಿಂದಿನ ಕಾಲದ ಬಾಲಕಾರ್ಮಿಕತೆ ಇಂದಿನ ಅನಕ್ಷರತೆಗೆ ಕಾರಣವಾಗಿದೆ. ಅನಕ್ಷರತೆ ಸಾಮಾಜಿಕ ಪಿಡುಗಾಗಿ ಕಾಡುತ್ತಿದೆ. ಇದನ್ನು ಹೋಗಲಾಡಿಸಬೇಕಾದರೆ ಶಿಕ್ಷಣವೊಂದೇ ಮಾರ್ಗ ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಾಕ್ಷರತಾ ಸಮಿತಿ ಕಾರ್ಯದರ್ಶಿ ಇಂದಿರಾ ಮಾತನಾಡಿ, “ಚಿನ್ನಕ್ಕಿಂತ ಅನ್ನ ಲೇಸು, ಅನ್ನಕ್ಕಿಂತ ಅಕ್ಷರ ಲೇಸು ಎಂಬ ಸಿದ್ಧಾಂತದಡಿ ಸಾಕ್ಷರ ಭಾರತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. <br /> <br /> ಸಮಾಜದ ಪ್ರತಿಯೊಬ್ಬರು ಸಾಕ್ಷರತೆ ಪ್ರಮಾಣ ಹೆಚ್ಚಿಸಲು ಕೈಜೋಡಿಸಬೇಕು” ಎಂದು ಮನವಿ ಮಾಡಿದರು. ಗ್ರಾ.ಪಂ. ಅಧ್ಯಕ್ಷರಾದ ಲಕ್ಷ್ಮಮ್ಮ ಉಪ್ಪಾರನಂದಿಹಾಳ, ಶಂಕರಮ್ಮ ನಾಗರಹಾಳ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರ: </strong>ಬಹುಸಂಖ್ಯಾತ ಅನಕ್ಷರತೆ ರಾಷ್ಟ್ರದ ಅಭಿವೃದ್ಧಿಗೆ ಶಾಪವಾಗಿದೆ. ಶೈಕ್ಷಣಿಕ ಪ್ರಗತಿಯಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಮನಗಂಡು ‘ಸಾಕ್ಷರ ಭಾರತ’ ಕಾರ್ಯಕ್ರಮ ಆಯೋಜಿಸಲಾಗಿದೆ. <br /> <br /> ನಾಗರಿಕ ಸಮಾಜದ ಪ್ರತಿಯೊಬ್ಬರೂ ಈ ಕಾರ್ಯಕ್ರಮವನ್ನು ಜನಾಂದೋಲನವಾಗಿ ಮಾರ್ಪಡಿಸಿ ಸಾಕ್ಷರ ನಾಡು ಕಟ್ಟಲು ಮುಂದಾಗಬೇಕು ಎಂದು ತಹಸೀಲ್ದಾರ ಎಂ.ರಾಚಪ್ಪ ಮನವಿ ಮಾಡಿದರು.<br /> <br /> ಗುರುವಾರ ತಾಲ್ಲೂಕು ಲೋಕ ಶಿಕ್ಷಣ ಸಮಿತಿ ಗ್ರಾಪಂ ಅಧ್ಯಕ್ಷರಿಗಾಗಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಅನಕ್ಷರತೆ ನಿವಾರಣೆಗೆ ಸರ್ಕಾರಗಳು ಸಾಕಷ್ಟು ಕಾರ್ಯಕ್ರಮ ರೂಪಿಸುತ್ತಾ ಬಂದಿವೆ. <br /> <br /> ಜನತೆ ಸಹಕಾರ ದೊರೆತರೂ ಕೂಡ ನಿಧಾನಗತಿಯಲ್ಲಿ ಶೈಕ್ಷಣಿಕ ಪ್ರಗತಿ ಕಾಣುತ್ತಿರುವುದು ಅಭಿವೃದ್ಧಿಗೆ ಮಾರಕವಾಗಿದೆ. ಈ ನಿಟ್ಟಿನಲ್ಲಿ ತಾವುಗಳು ಹೆಚ್ಚಿನ ಸಹಕಾರ ನೀಡಬೇಕು” ಎಂದು ಕೋರಿದರು.<br /> <br /> ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಎಚ್ ನಾಗೂರು, ಸಿಡಿಪಿಒ ಪ್ರಭಾಕರ ಮಾತನಾಡಿ, ಹಿಂದಿನ ಕಾಲದ ಬಾಲಕಾರ್ಮಿಕತೆ ಇಂದಿನ ಅನಕ್ಷರತೆಗೆ ಕಾರಣವಾಗಿದೆ. ಅನಕ್ಷರತೆ ಸಾಮಾಜಿಕ ಪಿಡುಗಾಗಿ ಕಾಡುತ್ತಿದೆ. ಇದನ್ನು ಹೋಗಲಾಡಿಸಬೇಕಾದರೆ ಶಿಕ್ಷಣವೊಂದೇ ಮಾರ್ಗ ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಾಕ್ಷರತಾ ಸಮಿತಿ ಕಾರ್ಯದರ್ಶಿ ಇಂದಿರಾ ಮಾತನಾಡಿ, “ಚಿನ್ನಕ್ಕಿಂತ ಅನ್ನ ಲೇಸು, ಅನ್ನಕ್ಕಿಂತ ಅಕ್ಷರ ಲೇಸು ಎಂಬ ಸಿದ್ಧಾಂತದಡಿ ಸಾಕ್ಷರ ಭಾರತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. <br /> <br /> ಸಮಾಜದ ಪ್ರತಿಯೊಬ್ಬರು ಸಾಕ್ಷರತೆ ಪ್ರಮಾಣ ಹೆಚ್ಚಿಸಲು ಕೈಜೋಡಿಸಬೇಕು” ಎಂದು ಮನವಿ ಮಾಡಿದರು. ಗ್ರಾ.ಪಂ. ಅಧ್ಯಕ್ಷರಾದ ಲಕ್ಷ್ಮಮ್ಮ ಉಪ್ಪಾರನಂದಿಹಾಳ, ಶಂಕರಮ್ಮ ನಾಗರಹಾಳ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>