<p><strong>ಶಿವಮೊಗ್ಗ: </strong> ದೇಶೀಯ ವಿದ್ಯಾ ಶಾಲಾ ಸಮಿತಿ (ಡಿವಿಎಸ್) ಆವರಣದಲ್ಲಿ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆ ಮಾಡುತ್ತಿರುವುದನ್ನು ತಡೆ ಹಿಡಿಯುವಂತೆ ಆಗ್ರಹಿಸಿ ಡಿವಿಎಸ್ ಸಂಸ್ಥೆ ಪದಾಧಿಕಾರಿಗಳು, ಬೋಧಕ ಸಿಬ್ಬಂದಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.<br /> <br /> ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಉನ್ನತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ರಾಜ್ಯದಲ್ಲಿಯೇ ಡಿವಿಎಸ್ ಸಂಸ್ಥೆ ವಿಶಿಷ್ಟ ಸ್ಥಾನ ಗಳಿಸಿದೆ. ಪ್ರಥಮ ಪಿಯುಸಿ ಪ್ರವೇಶಾತಿಯನ್ನು ಇಲಾಖಾ ನಿಯಮಾನುಸಾರ ಕಳೆದ 6 ವರ್ಷಗಳಿಂದ ಅತ್ಯಂತ ಪಾರದರ್ಶಕ ವ್ಯವಸ್ಥೆಯಡಿ ನಡೆಸಲಾಗುತ್ತಿದೆ. ಈ ವ್ಯವಸ್ಥೆ ಜಾರಿಗೆ ತಂದ ಮೇಲೆ ಸೀಟು ಕೊಡಿಸುವ ದಂಧೆ ಮಾಡುವ ಕೆಲವರಿಗೆ ತೊಂದರೆಯಾಗುತ್ತಿದೆ. ಅಂತಹವರಿಂದ ಶೈಕ್ಷಣಿಕ ವಾತಾವರಣಕ್ಕೆ ತೊಂದರೆ ಯಾಗುತ್ತಿದೆ ಎಂದು ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಜೂನ್ 22ರಂದು ಕೆಲ ವ್ಯಕ್ತಿಗಳು ಸಂಸ್ಥೆಗೆ ಆಗಮಿಸಿ, ಸಂಸ್ಥೆಯ ಪದಾಧಿಕಾರಿಗಳನ್ನು ಏಕವಚನ ಬಳಸಿ ಬೈದಿರುವುದು ಖಂಡನಾರ್ಹ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ದೂರಿನ್ವಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.<br /> <br /> ಅಧ್ಯಕ್ಷ ಕೆ.ಜಿ. ಸುಬ್ರಹ್ಮಣ್ಯ, ಕಾರ್ಯದರ್ಶಿ ವಿ.ಕೆ. ಸುಬ್ರಹ್ಮಣ್ಯ, ಸಂಸ್ಥೆ ಹಿರಿಯ ಪದಾಧಿಕಾರಿ ಶ್ರೀರಂಗರಾಜು ಮತ್ತಿತರರು ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong> ದೇಶೀಯ ವಿದ್ಯಾ ಶಾಲಾ ಸಮಿತಿ (ಡಿವಿಎಸ್) ಆವರಣದಲ್ಲಿ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆ ಮಾಡುತ್ತಿರುವುದನ್ನು ತಡೆ ಹಿಡಿಯುವಂತೆ ಆಗ್ರಹಿಸಿ ಡಿವಿಎಸ್ ಸಂಸ್ಥೆ ಪದಾಧಿಕಾರಿಗಳು, ಬೋಧಕ ಸಿಬ್ಬಂದಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.<br /> <br /> ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಉನ್ನತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ರಾಜ್ಯದಲ್ಲಿಯೇ ಡಿವಿಎಸ್ ಸಂಸ್ಥೆ ವಿಶಿಷ್ಟ ಸ್ಥಾನ ಗಳಿಸಿದೆ. ಪ್ರಥಮ ಪಿಯುಸಿ ಪ್ರವೇಶಾತಿಯನ್ನು ಇಲಾಖಾ ನಿಯಮಾನುಸಾರ ಕಳೆದ 6 ವರ್ಷಗಳಿಂದ ಅತ್ಯಂತ ಪಾರದರ್ಶಕ ವ್ಯವಸ್ಥೆಯಡಿ ನಡೆಸಲಾಗುತ್ತಿದೆ. ಈ ವ್ಯವಸ್ಥೆ ಜಾರಿಗೆ ತಂದ ಮೇಲೆ ಸೀಟು ಕೊಡಿಸುವ ದಂಧೆ ಮಾಡುವ ಕೆಲವರಿಗೆ ತೊಂದರೆಯಾಗುತ್ತಿದೆ. ಅಂತಹವರಿಂದ ಶೈಕ್ಷಣಿಕ ವಾತಾವರಣಕ್ಕೆ ತೊಂದರೆ ಯಾಗುತ್ತಿದೆ ಎಂದು ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಜೂನ್ 22ರಂದು ಕೆಲ ವ್ಯಕ್ತಿಗಳು ಸಂಸ್ಥೆಗೆ ಆಗಮಿಸಿ, ಸಂಸ್ಥೆಯ ಪದಾಧಿಕಾರಿಗಳನ್ನು ಏಕವಚನ ಬಳಸಿ ಬೈದಿರುವುದು ಖಂಡನಾರ್ಹ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ದೂರಿನ್ವಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.<br /> <br /> ಅಧ್ಯಕ್ಷ ಕೆ.ಜಿ. ಸುಬ್ರಹ್ಮಣ್ಯ, ಕಾರ್ಯದರ್ಶಿ ವಿ.ಕೆ. ಸುಬ್ರಹ್ಮಣ್ಯ, ಸಂಸ್ಥೆ ಹಿರಿಯ ಪದಾಧಿಕಾರಿ ಶ್ರೀರಂಗರಾಜು ಮತ್ತಿತರರು ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>