<p>ಮಂಗಳೂರು: ಭಾರತದಲ್ಲಿ ಉನ್ನತ ಶಿಕ್ಷಣಕ್ಕೆ ಪಾರಂಪರಿಕ ಹಿನ್ನೆಲೆ ಇದೆ. ದೇಶ ಶೈಕ್ಷಣಿಕ ಸುಧಾರಣೆಯಲ್ಲಿ ಪ್ರಪಂಚದಲ್ಲಿ 3ನೇ ಸ್ಥಾನದಲ್ಲಿದೆ ಎಂದು ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಟಿ.ಸಿ.ಶಿವಶಂಕರಮೂರ್ತಿ ಹೇಳಿದರು.<br /> <br /> ನಗರದ ಎಸ್ಡಿಎಂ ವ್ಯವಹಾರ ಆಡಳಿತ ಕಾಲೇಜು ಆಶ್ರಯದಲ್ಲಿ ಬುಧವಾರ ನಡೆದ `ಡಬ್ಲ್ಯೂಟಿಒ ಒಪ್ಪಂದದಿಂದ ಉನ್ನತ ಶಿಕ್ಷಣದಲ್ಲಿ ಬದಲಾವಣೆ~ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದಲ್ಲಿ ಕೇವಲ 28 ವಿಶ್ವವಿದ್ಯಾಲಯ ಮತ್ತು 48 ಕಾಲೇಜು ಇದ್ದವು. ಪ್ರಸ್ತುತ 540 ವಿಶ್ವವಿದ್ಯಾಲಯಗಳಿವೆ. ಆದರೆ ಕೇವಲ ಶೇ. 12.4ರಷ್ಟು ಮಂದಿ ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಶೇ. 26ರಷ್ಟು ಇನ್ನೂ ಅನಕ್ಷರಸ್ಥರಾಗಿಯೇ ಇದ್ದಾರೆ ಎಂದರು. <br /> <br /> ಜ್ಞಾನ ಆಯೋಗದ ವರದಿಯಂತೆ ಭಾರತದಲ್ಲಿ 2020ಕ್ಕೆ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಶೇ. 30ಕ್ಕೆ ಹೆಚ್ಚಬೇಕು ಮತ್ತು ಒಂದು ಸಾವಿರ ವಿಶ್ವವಿದ್ಯಾಲಯ ಸ್ಥಾಪನೆಯಾಗಿ 50 ಸಾವಿರ ಕಾಲೇಜುಗಳಿರಬೇಕು. ಒಂದೊಮ್ಮೆ ಇದಾಗದಿದ್ದರೆ ಉನ್ನತ ಶಿಕ್ಷಣಕ್ಕೆ ಭವಿಷ್ಯವೇ ಇಲ್ಲ ಎಂದೇ ಅರ್ಥ ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಕಾರ್ಪೊರೇಷನ್ ಬ್ಯಾಂಕ್ ಮುಖ್ಯ ಮಹಾಪ್ರಬಂಧಕ ಬಿ.ಆರ್.ಭಟ್ ಮಾತನಾಡಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಡಬ್ಲ್ಯೂಟಿಒ ಒಪ್ಪಂದದಿಂದ ಉನ್ನತ ಶಿಕ್ಷಣದ ಮೇಲೆ ಮಹತ್ತರವಾದ ಪರಿಣಾಮವಾಗಿದೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣಕ್ಕೆ ಬಹಳ ಪ್ರಾಮುಖ್ಯತೆ ನೀಡುತ್ತಿದೆ ಎಂದರು.<br /> <br /> ಬಳ್ಳಾರಿ ವಿಜಯ ನಗರ ವಿಶ್ವವಿದ್ಯಾಲಯ ಕುಲಸಚಿವ ಯಶವಂತ್ ಡೋಂಗ್ರೆ ದಿಕ್ಸೂಚಿ ಭಾಷಣ ಮಾಡಿದರು. ಶ್ರೀದೇವಿ ಕಾಲೇಜು ವ್ಯವಹಾರ ಆಡಳಿತ ವಿಭಾಗ ಮುಖ್ಯಸ್ಥೆ ಶರ್ಮಿಳಾ ಮುಖ್ಯ ಅತಿಥಿಯಾಗಿದ್ದರು. ಕಾಲೇಜು ಪ್ರಾಚಾರ್ಯ ದೇವರಾಜ್, ಅರುಣಾ ಕಾಮತ್ ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಭಾರತದಲ್ಲಿ ಉನ್ನತ ಶಿಕ್ಷಣಕ್ಕೆ ಪಾರಂಪರಿಕ ಹಿನ್ನೆಲೆ ಇದೆ. ದೇಶ ಶೈಕ್ಷಣಿಕ ಸುಧಾರಣೆಯಲ್ಲಿ ಪ್ರಪಂಚದಲ್ಲಿ 3ನೇ ಸ್ಥಾನದಲ್ಲಿದೆ ಎಂದು ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಟಿ.ಸಿ.ಶಿವಶಂಕರಮೂರ್ತಿ ಹೇಳಿದರು.<br /> <br /> ನಗರದ ಎಸ್ಡಿಎಂ ವ್ಯವಹಾರ ಆಡಳಿತ ಕಾಲೇಜು ಆಶ್ರಯದಲ್ಲಿ ಬುಧವಾರ ನಡೆದ `ಡಬ್ಲ್ಯೂಟಿಒ ಒಪ್ಪಂದದಿಂದ ಉನ್ನತ ಶಿಕ್ಷಣದಲ್ಲಿ ಬದಲಾವಣೆ~ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದಲ್ಲಿ ಕೇವಲ 28 ವಿಶ್ವವಿದ್ಯಾಲಯ ಮತ್ತು 48 ಕಾಲೇಜು ಇದ್ದವು. ಪ್ರಸ್ತುತ 540 ವಿಶ್ವವಿದ್ಯಾಲಯಗಳಿವೆ. ಆದರೆ ಕೇವಲ ಶೇ. 12.4ರಷ್ಟು ಮಂದಿ ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಶೇ. 26ರಷ್ಟು ಇನ್ನೂ ಅನಕ್ಷರಸ್ಥರಾಗಿಯೇ ಇದ್ದಾರೆ ಎಂದರು. <br /> <br /> ಜ್ಞಾನ ಆಯೋಗದ ವರದಿಯಂತೆ ಭಾರತದಲ್ಲಿ 2020ಕ್ಕೆ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಶೇ. 30ಕ್ಕೆ ಹೆಚ್ಚಬೇಕು ಮತ್ತು ಒಂದು ಸಾವಿರ ವಿಶ್ವವಿದ್ಯಾಲಯ ಸ್ಥಾಪನೆಯಾಗಿ 50 ಸಾವಿರ ಕಾಲೇಜುಗಳಿರಬೇಕು. ಒಂದೊಮ್ಮೆ ಇದಾಗದಿದ್ದರೆ ಉನ್ನತ ಶಿಕ್ಷಣಕ್ಕೆ ಭವಿಷ್ಯವೇ ಇಲ್ಲ ಎಂದೇ ಅರ್ಥ ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಕಾರ್ಪೊರೇಷನ್ ಬ್ಯಾಂಕ್ ಮುಖ್ಯ ಮಹಾಪ್ರಬಂಧಕ ಬಿ.ಆರ್.ಭಟ್ ಮಾತನಾಡಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಡಬ್ಲ್ಯೂಟಿಒ ಒಪ್ಪಂದದಿಂದ ಉನ್ನತ ಶಿಕ್ಷಣದ ಮೇಲೆ ಮಹತ್ತರವಾದ ಪರಿಣಾಮವಾಗಿದೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣಕ್ಕೆ ಬಹಳ ಪ್ರಾಮುಖ್ಯತೆ ನೀಡುತ್ತಿದೆ ಎಂದರು.<br /> <br /> ಬಳ್ಳಾರಿ ವಿಜಯ ನಗರ ವಿಶ್ವವಿದ್ಯಾಲಯ ಕುಲಸಚಿವ ಯಶವಂತ್ ಡೋಂಗ್ರೆ ದಿಕ್ಸೂಚಿ ಭಾಷಣ ಮಾಡಿದರು. ಶ್ರೀದೇವಿ ಕಾಲೇಜು ವ್ಯವಹಾರ ಆಡಳಿತ ವಿಭಾಗ ಮುಖ್ಯಸ್ಥೆ ಶರ್ಮಿಳಾ ಮುಖ್ಯ ಅತಿಥಿಯಾಗಿದ್ದರು. ಕಾಲೇಜು ಪ್ರಾಚಾರ್ಯ ದೇವರಾಜ್, ಅರುಣಾ ಕಾಮತ್ ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>