<p><strong>ಬೆಂಗಳೂರು:</strong> ತುಮಕೂರು ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಮೂವರ ಹೆಸರನ್ನು ಶಿಫಾರಸು ಮಾಡಲು ವಿಜಾಪುರ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಡಾ.ಮೀನಾ ಚಂದಾವರಕರ ಅಧ್ಯಕ್ಷತೆಯಲ್ಲಿ ಶೋಧನಾ ಸಮಿತಿ ರಚಿಸಲಾಗಿದೆ.<br /> <br /> ಸಾಮಾನ್ಯವಾಗಿ ವಿಶ್ರಾಂತ ಕುಲಪತಿಗಳ ಅಧ್ಯಕ್ಷತೆಯಲ್ಲಿ ಶೋಧನಾ ಸಮಿತಿ ರಚಿಸಲಾಗುತ್ತದೆ. ಆದರೆ, ಮೊದಲ ಬಾರಿಗೆ ಹಾಲಿ ಕುಲಪತಿಗಳ ಅಧ್ಯಕ್ಷತೆಯಲ್ಲಿ ಶೋಧನಾ ಸಮಿತಿ ರಚಿಸಲಾಗಿದೆ. ಮತ್ತೊಬ್ಬ ಹಾಲಿ ಕುಲಪತಿ ಡಾ.ಎಂ.ಜಿ.ಕೃಷ್ಣನ್ (ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ) ಸದಸ್ಯರಾಗಿದ್ದಾರೆ.<br /> <br /> ಹಾಲಿ ಕುಲಪತಿಗಳನ್ನು ಶೋಧನಾ ಸಮಿತಿಗೆ ನೇಮಕ ಮಾಡಿದ ಉದಾಹರಣೆ ಇಲ್ಲ. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆಯೂ ಇದೆ. ಸಮಿತಿಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದಲೇ ಇಬ್ಬರು ಕುಲಪತಿಗಳನ್ನು ನೇಮಕ ಮಾಡಿದಂತಿದೆ ಎಂಬ ಮಾತು ಕೇಳಿ ಬರುತ್ತಿದೆ.<br /> <br /> ವಿಶ್ವವಿದ್ಯಾಲಯ ಅನುದಾನ ಆಯೋಗದ ಪ್ರತಿನಿಧಿಯಾಗಿ ಆನಂದಕೃಷ್ಣ, ಸಿಂಡಿಕೇಟ್ ಪ್ರತಿನಿಧಿಯಾಗಿ ಬ್ಯಾಥ್ಯೂಸ್ ಅವರು ಶೋಧನಾ ಸಮಿತಿಯಲ್ಲಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತುಮಕೂರು ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಮೂವರ ಹೆಸರನ್ನು ಶಿಫಾರಸು ಮಾಡಲು ವಿಜಾಪುರ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಡಾ.ಮೀನಾ ಚಂದಾವರಕರ ಅಧ್ಯಕ್ಷತೆಯಲ್ಲಿ ಶೋಧನಾ ಸಮಿತಿ ರಚಿಸಲಾಗಿದೆ.<br /> <br /> ಸಾಮಾನ್ಯವಾಗಿ ವಿಶ್ರಾಂತ ಕುಲಪತಿಗಳ ಅಧ್ಯಕ್ಷತೆಯಲ್ಲಿ ಶೋಧನಾ ಸಮಿತಿ ರಚಿಸಲಾಗುತ್ತದೆ. ಆದರೆ, ಮೊದಲ ಬಾರಿಗೆ ಹಾಲಿ ಕುಲಪತಿಗಳ ಅಧ್ಯಕ್ಷತೆಯಲ್ಲಿ ಶೋಧನಾ ಸಮಿತಿ ರಚಿಸಲಾಗಿದೆ. ಮತ್ತೊಬ್ಬ ಹಾಲಿ ಕುಲಪತಿ ಡಾ.ಎಂ.ಜಿ.ಕೃಷ್ಣನ್ (ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ) ಸದಸ್ಯರಾಗಿದ್ದಾರೆ.<br /> <br /> ಹಾಲಿ ಕುಲಪತಿಗಳನ್ನು ಶೋಧನಾ ಸಮಿತಿಗೆ ನೇಮಕ ಮಾಡಿದ ಉದಾಹರಣೆ ಇಲ್ಲ. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆಯೂ ಇದೆ. ಸಮಿತಿಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದಲೇ ಇಬ್ಬರು ಕುಲಪತಿಗಳನ್ನು ನೇಮಕ ಮಾಡಿದಂತಿದೆ ಎಂಬ ಮಾತು ಕೇಳಿ ಬರುತ್ತಿದೆ.<br /> <br /> ವಿಶ್ವವಿದ್ಯಾಲಯ ಅನುದಾನ ಆಯೋಗದ ಪ್ರತಿನಿಧಿಯಾಗಿ ಆನಂದಕೃಷ್ಣ, ಸಿಂಡಿಕೇಟ್ ಪ್ರತಿನಿಧಿಯಾಗಿ ಬ್ಯಾಥ್ಯೂಸ್ ಅವರು ಶೋಧನಾ ಸಮಿತಿಯಲ್ಲಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>