<p><strong>ರಾಯಚೂರು:</strong> ಸರ್ಕಾರಿ ನೌಕರರಿಂದ ಜನತೆ ಹೆಚ್ಚಿನ ಸೇವೆ ನಿರೀಕ್ಷಿಸುತ್ತಿದ್ದು, ಶೋಷಣೆ ಮುಕ್ತ ಸೇವೆಯನ್ನು ಬಯಸುತ್ತಿದ್ದಾರೆ. ಹೆಚ್ಚು ಉತ್ಸುಕತೆಯಿಂದ ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸಿ ಉತ್ತಮ ಸೇವೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ ಹೇಳಿದರು.<br /> <br /> ಇಲ್ಲಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗುಲ್ಬರ್ಗ ವಿಭಾಗ ಮಟ್ಟದ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ನೌಕರಿ ಪಡೆಯಲು ಸಾಕಷ್ಟು ಸ್ಪರ್ಧೆ ಇರುವ ಈ ದಿನಗಳಲ್ಲಿ ಸರ್ಕಾರಿ ನೌಕರ ಎಂಬುದೇ ಹೆಮ್ಮೆಯ ವಿಷಯ ಎಂದರು.<br /> <br /> ಸರ್ಕಾರಿ ನೌಕರರ ಮೇಲಿನ ಹಲ್ಲೆ ಪ್ರಕರಣ ಸೇರಿದಂತೆ ಹಲವು ಸಂಗತಿಗಳು ನೌಕರರು ಉತ್ತಮ ಸೇವೆ ಕಲ್ಪಿಸಲು ಅಡ್ಡಿಯಾಗಿವೆ. ಈ ಸಮ್ಮೇಳನದ ಮೂಲಕ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಆಗಬೇಕು ಎಂದು ಆಶಯ ವ್ಯಕ್ತಪಡಿಸಿದರು.<br /> <br /> ನೌಕರರ ಒಗ್ಗಟ್ಟು ಬಲಗೊಳಿಸುವುದು, ಕಾರ್ಯಕ್ಷಮತೆ ಹೆಚ್ಚಿಸಿ ಉತ್ಸುಕತೆಯಿಂದ ಕೆಲಸ ಮಾಡಲು ಇಂಥ ಸಮ್ಮೇಳನ ಅವಶ್ಯ ಎಂದರು.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮನೋಜಕುಮಾರ ಜೈನ್, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಎಲ್. ಭೈರಪ್ಪ, ಗುಲ್ಬರ್ಗ ವಿಭಾಗೀಯ ಉಪಾಧ್ಯಕ್ಷ ಎ ಬಾಲಸ್ವಾಮಿ ಕೊಡ್ಲಿ, ರಾಜ್ಯ ಉಪಾಧ್ಯಕ್ಷ ಶಂಭುಲಿಂಗನಗೌಡ, ಜಿಲ್ಲಾ ಅಧ್ಯಕ್ಷರಾದ ಬಿ.ಎಸ್. ದೇಸಾಯಿ (ಗುಲ್ಬರ್ಗ), ಬಸವರಾಜ ಭರಶೆಟ್ಟಿ (ಬೀದರ್), ಲಿಂಗಣ್ಣನವರ (ಬಾಗಲಕೋಟೆ), ಚಂದ್ರಶೇಖರ (ಬಳ್ಳಾರಿ) ಮತ್ತಿತರರು ವೇದಿಕೆಯಲ್ಲಿದ್ದರು. ರಾಯಚೂರು ಜಿಲ್ಲಾ ಘಟಕದ ಅಧ್ಯಕ್ಷ ಮೆಹಬೂಬ್ ಪಾಷಾ ಮೂಲಿಮನಿ ಪ್ರಾಸ್ತಾವಿಕ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಸರ್ಕಾರಿ ನೌಕರರಿಂದ ಜನತೆ ಹೆಚ್ಚಿನ ಸೇವೆ ನಿರೀಕ್ಷಿಸುತ್ತಿದ್ದು, ಶೋಷಣೆ ಮುಕ್ತ ಸೇವೆಯನ್ನು ಬಯಸುತ್ತಿದ್ದಾರೆ. ಹೆಚ್ಚು ಉತ್ಸುಕತೆಯಿಂದ ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸಿ ಉತ್ತಮ ಸೇವೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ ಹೇಳಿದರು.<br /> <br /> ಇಲ್ಲಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗುಲ್ಬರ್ಗ ವಿಭಾಗ ಮಟ್ಟದ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ನೌಕರಿ ಪಡೆಯಲು ಸಾಕಷ್ಟು ಸ್ಪರ್ಧೆ ಇರುವ ಈ ದಿನಗಳಲ್ಲಿ ಸರ್ಕಾರಿ ನೌಕರ ಎಂಬುದೇ ಹೆಮ್ಮೆಯ ವಿಷಯ ಎಂದರು.<br /> <br /> ಸರ್ಕಾರಿ ನೌಕರರ ಮೇಲಿನ ಹಲ್ಲೆ ಪ್ರಕರಣ ಸೇರಿದಂತೆ ಹಲವು ಸಂಗತಿಗಳು ನೌಕರರು ಉತ್ತಮ ಸೇವೆ ಕಲ್ಪಿಸಲು ಅಡ್ಡಿಯಾಗಿವೆ. ಈ ಸಮ್ಮೇಳನದ ಮೂಲಕ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಆಗಬೇಕು ಎಂದು ಆಶಯ ವ್ಯಕ್ತಪಡಿಸಿದರು.<br /> <br /> ನೌಕರರ ಒಗ್ಗಟ್ಟು ಬಲಗೊಳಿಸುವುದು, ಕಾರ್ಯಕ್ಷಮತೆ ಹೆಚ್ಚಿಸಿ ಉತ್ಸುಕತೆಯಿಂದ ಕೆಲಸ ಮಾಡಲು ಇಂಥ ಸಮ್ಮೇಳನ ಅವಶ್ಯ ಎಂದರು.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮನೋಜಕುಮಾರ ಜೈನ್, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಎಲ್. ಭೈರಪ್ಪ, ಗುಲ್ಬರ್ಗ ವಿಭಾಗೀಯ ಉಪಾಧ್ಯಕ್ಷ ಎ ಬಾಲಸ್ವಾಮಿ ಕೊಡ್ಲಿ, ರಾಜ್ಯ ಉಪಾಧ್ಯಕ್ಷ ಶಂಭುಲಿಂಗನಗೌಡ, ಜಿಲ್ಲಾ ಅಧ್ಯಕ್ಷರಾದ ಬಿ.ಎಸ್. ದೇಸಾಯಿ (ಗುಲ್ಬರ್ಗ), ಬಸವರಾಜ ಭರಶೆಟ್ಟಿ (ಬೀದರ್), ಲಿಂಗಣ್ಣನವರ (ಬಾಗಲಕೋಟೆ), ಚಂದ್ರಶೇಖರ (ಬಳ್ಳಾರಿ) ಮತ್ತಿತರರು ವೇದಿಕೆಯಲ್ಲಿದ್ದರು. ರಾಯಚೂರು ಜಿಲ್ಲಾ ಘಟಕದ ಅಧ್ಯಕ್ಷ ಮೆಹಬೂಬ್ ಪಾಷಾ ಮೂಲಿಮನಿ ಪ್ರಾಸ್ತಾವಿಕ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>