<p><strong>ಸಿದ್ದಾಪುರ:</strong> ಶೋಷಣೆ ರಹಿತ ಜೀವನವೇ ಸ್ವಾತಂತ್ರ್ಯದ ತಿರುಳು ಎಂಬುದನ್ನು ಸಾಧಿಸಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ತಹಶೀಲ್ದಾರ ಗಣಪತಿ ಕಟ್ಟಿನಕೆರೆ ಹೇಳಿದರು. ಪಟ್ಟಣದ ನೆಹರೂ ಮೈದಾನದಲ್ಲಿ ಬುಧವಾರ ನಡೆದ 66ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಅವರು ಶುಭ ಸಂದೇಶ ನೀಡಿದರು.<br /> <br /> `ನಾವು ಭಾರತೀಯರಾಗಿ ಭಾರತೀಯತೆಯನ್ನು ಉಳಿಸಿಕೊಳ್ಳುವುದಕ್ಕೆ ಮಹತ್ವ ನೀಡಬೇಕು.ದೇಶದ ಏಕತೆ, ರಕ್ಷಣೆ, ಸಾಮಾಜಿಕ ನ್ಯಾಯ, ಆಹಾರ ಭದ್ರತೆಗೆ ದುಡಿಯುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯತತ್ಪರರಾಗಬೇಕು~ ಎಂದರು.<br /> <br /> `ಕ್ಷಿಪಣಿ ಅಭಿವೃದ್ಧಿಯಲ್ಲಿ ಮಹತ್ವದ ಸಾಧನೆಗೈಯುವ ಮೂಲಕ ದೇಶ ಕ್ಷಿಪಣಿ ಪ್ರತಿರೋಧಕ ವ್ಯವಸ್ಥೆ ಹೊಂದಿರುವ ನಾಲ್ಕನೇ ರಾಷ್ಟ್ರವಾಗಿರುವುದು ಹೆಮ್ಮೆಯ ಸಂಗತಿ. ಬರದಿಂದ ರಾಜ್ಯ ತತ್ತರಿಸುತ್ತಿರುವ ಸಂದರ್ಭದಲ್ಲಿ ಸಾಲಮನ್ನಾ ಕ್ರಮ ರೈತರಿಗೆ ಆಶಾಕಿರಣವಾಗಿದೆ~ ಎಂದರು.<br /> <br /> ಪೊಲೀಸ್, ಗೃಹರಕ್ಷಕ ದಳ, ಸ್ಕೌಟ್ಸ್ ಹಾಗೂ ಗೈಡ್ಸ್ಗಳಿಂದ ಗೌರವ ರಕ್ಷೆ ನೀಡಲಾಯಿತು. ಪ.ಪಂ.ಅಧ್ಯಕ್ಷ ಕೆ.ಜಿ.ನಾಯ್ಕ,ಉಪಾಧ್ಯಕ್ಷೆ ನೇತ್ರಾವತಿ ನಾಯ್ಕ, ತಾ.ಪಂ.ಅಧ್ಯಕ್ಷೆ ಶಾಂತಿ ಹಸ್ಲರ್, ಉಪಾಧ್ಯಕ್ಷ ಪ್ರಸನ್ನ ಹೆಗಡೆ, ಜನ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್.ಆರ್. ಹೆಗಡೆಕರ ನಿರೂಪಿಸಿದರು.<br /> <br /> <strong>ನ್ಯಾಯಾಲಯದಲ್ಲಿ: </strong>ಸ್ಥಳೀಯ ನ್ಯಾಯಾಲಯದಲ್ಲಿ ನ್ಯಾಯಾಧೀಶೆ ವಿಮಲಾ ಆರ್. ನಂದಗಾಂವ್ ಧ್ವಜಾರೋಹಣ ನೆರವೇರಿಸಿದರು. ವಕೀಲರ ಸಂಘದ ಅಧ್ಯಕ್ಷ ಎ.ಪಿ.ಭಟ್ಟ ಮುತ್ತಿಗೆ ಮತ್ತು ಇತರ ವಕೀಲರು ಉಪಸ್ಥಿತರಿದ್ದರು.<br /> <br /> <strong>ಪ.ಪಂ: </strong>ಸ್ಥಳೀಯ ಪಟ್ಟಣ ಪಂಚಾಯಿತಿಯಲ್ಲಿ ಪ.ಪಂ. ಅಧ್ಯಕ್ಷ ಕೆ.ಜಿ.ನಾಯ್ಕ ಹಣಜಿಬೈಲ್ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷೆ ನೇತ್ರಾವತಿ ನಾಯ್ಕ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.<br /> <br /> <strong>ನಿವೃತ್ತ ನೌಕರರ ಸಂಘ: </strong>ರಾಜ್ಯ ನಿವೃತ್ತ ನೌಕರರ ಸಂಘದ ತಾಲ್ಲೂಕು ಶಾಖೆಯ ಆಶ್ರಯದಲ್ಲಿ ಪಟ್ಟಣದ ಐಶ್ವರ್ಯ ಕಂಪೂಟರ್ಸ್ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಸಂಘದ ಪದಾಧಿಕಾರಿಗಳಾದ ಡಿ.ಸಿ. ನಾಯ್ಕ ಅವರಗುಪ್ಪ, ಜಿ.ಎಂ.ಕುಮಟಾಕರ್,ಪಿ.ವಿ.ಹೆಗಡೆ, ಜಿ.ಐ.ನಾಯ್ಕ, ಎನ್.ಐ.ನಾಯ್ಕ ಕೋಲಸಿರ್ಸಿ, ಎಸ್.ಎಸ್.ರೋಜಾರಿಯೋ ಉಪಸ್ಥಿತರಿದ್ದರು.<br /> <br /> <strong>ನಿವೇದಿತಾ ಮಹಿಳಾ ಮಂಡಳ: </strong>ಪಟ್ಟಣದ ನಿವೇದಿತಾ ಮಹಿಳಾ ಮಂಡಳದಲ್ಲಿ ಅಧ್ಯಕ್ಷೆ ಗಾಯತ್ರಿ ವಿ. ಭಟ್ಟ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಸುರೇಖಾ ಅಂಬೇಕರ್ ಮತ್ತು ಇತರ ಸದಸ್ಯರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ಶೋಷಣೆ ರಹಿತ ಜೀವನವೇ ಸ್ವಾತಂತ್ರ್ಯದ ತಿರುಳು ಎಂಬುದನ್ನು ಸಾಧಿಸಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ತಹಶೀಲ್ದಾರ ಗಣಪತಿ ಕಟ್ಟಿನಕೆರೆ ಹೇಳಿದರು. ಪಟ್ಟಣದ ನೆಹರೂ ಮೈದಾನದಲ್ಲಿ ಬುಧವಾರ ನಡೆದ 66ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಅವರು ಶುಭ ಸಂದೇಶ ನೀಡಿದರು.<br /> <br /> `ನಾವು ಭಾರತೀಯರಾಗಿ ಭಾರತೀಯತೆಯನ್ನು ಉಳಿಸಿಕೊಳ್ಳುವುದಕ್ಕೆ ಮಹತ್ವ ನೀಡಬೇಕು.ದೇಶದ ಏಕತೆ, ರಕ್ಷಣೆ, ಸಾಮಾಜಿಕ ನ್ಯಾಯ, ಆಹಾರ ಭದ್ರತೆಗೆ ದುಡಿಯುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯತತ್ಪರರಾಗಬೇಕು~ ಎಂದರು.<br /> <br /> `ಕ್ಷಿಪಣಿ ಅಭಿವೃದ್ಧಿಯಲ್ಲಿ ಮಹತ್ವದ ಸಾಧನೆಗೈಯುವ ಮೂಲಕ ದೇಶ ಕ್ಷಿಪಣಿ ಪ್ರತಿರೋಧಕ ವ್ಯವಸ್ಥೆ ಹೊಂದಿರುವ ನಾಲ್ಕನೇ ರಾಷ್ಟ್ರವಾಗಿರುವುದು ಹೆಮ್ಮೆಯ ಸಂಗತಿ. ಬರದಿಂದ ರಾಜ್ಯ ತತ್ತರಿಸುತ್ತಿರುವ ಸಂದರ್ಭದಲ್ಲಿ ಸಾಲಮನ್ನಾ ಕ್ರಮ ರೈತರಿಗೆ ಆಶಾಕಿರಣವಾಗಿದೆ~ ಎಂದರು.<br /> <br /> ಪೊಲೀಸ್, ಗೃಹರಕ್ಷಕ ದಳ, ಸ್ಕೌಟ್ಸ್ ಹಾಗೂ ಗೈಡ್ಸ್ಗಳಿಂದ ಗೌರವ ರಕ್ಷೆ ನೀಡಲಾಯಿತು. ಪ.ಪಂ.ಅಧ್ಯಕ್ಷ ಕೆ.ಜಿ.ನಾಯ್ಕ,ಉಪಾಧ್ಯಕ್ಷೆ ನೇತ್ರಾವತಿ ನಾಯ್ಕ, ತಾ.ಪಂ.ಅಧ್ಯಕ್ಷೆ ಶಾಂತಿ ಹಸ್ಲರ್, ಉಪಾಧ್ಯಕ್ಷ ಪ್ರಸನ್ನ ಹೆಗಡೆ, ಜನ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್.ಆರ್. ಹೆಗಡೆಕರ ನಿರೂಪಿಸಿದರು.<br /> <br /> <strong>ನ್ಯಾಯಾಲಯದಲ್ಲಿ: </strong>ಸ್ಥಳೀಯ ನ್ಯಾಯಾಲಯದಲ್ಲಿ ನ್ಯಾಯಾಧೀಶೆ ವಿಮಲಾ ಆರ್. ನಂದಗಾಂವ್ ಧ್ವಜಾರೋಹಣ ನೆರವೇರಿಸಿದರು. ವಕೀಲರ ಸಂಘದ ಅಧ್ಯಕ್ಷ ಎ.ಪಿ.ಭಟ್ಟ ಮುತ್ತಿಗೆ ಮತ್ತು ಇತರ ವಕೀಲರು ಉಪಸ್ಥಿತರಿದ್ದರು.<br /> <br /> <strong>ಪ.ಪಂ: </strong>ಸ್ಥಳೀಯ ಪಟ್ಟಣ ಪಂಚಾಯಿತಿಯಲ್ಲಿ ಪ.ಪಂ. ಅಧ್ಯಕ್ಷ ಕೆ.ಜಿ.ನಾಯ್ಕ ಹಣಜಿಬೈಲ್ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷೆ ನೇತ್ರಾವತಿ ನಾಯ್ಕ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.<br /> <br /> <strong>ನಿವೃತ್ತ ನೌಕರರ ಸಂಘ: </strong>ರಾಜ್ಯ ನಿವೃತ್ತ ನೌಕರರ ಸಂಘದ ತಾಲ್ಲೂಕು ಶಾಖೆಯ ಆಶ್ರಯದಲ್ಲಿ ಪಟ್ಟಣದ ಐಶ್ವರ್ಯ ಕಂಪೂಟರ್ಸ್ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಸಂಘದ ಪದಾಧಿಕಾರಿಗಳಾದ ಡಿ.ಸಿ. ನಾಯ್ಕ ಅವರಗುಪ್ಪ, ಜಿ.ಎಂ.ಕುಮಟಾಕರ್,ಪಿ.ವಿ.ಹೆಗಡೆ, ಜಿ.ಐ.ನಾಯ್ಕ, ಎನ್.ಐ.ನಾಯ್ಕ ಕೋಲಸಿರ್ಸಿ, ಎಸ್.ಎಸ್.ರೋಜಾರಿಯೋ ಉಪಸ್ಥಿತರಿದ್ದರು.<br /> <br /> <strong>ನಿವೇದಿತಾ ಮಹಿಳಾ ಮಂಡಳ: </strong>ಪಟ್ಟಣದ ನಿವೇದಿತಾ ಮಹಿಳಾ ಮಂಡಳದಲ್ಲಿ ಅಧ್ಯಕ್ಷೆ ಗಾಯತ್ರಿ ವಿ. ಭಟ್ಟ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಸುರೇಖಾ ಅಂಬೇಕರ್ ಮತ್ತು ಇತರ ಸದಸ್ಯರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>