<p>ಮೈಸೂರು: `ಶೋಷಿತರಿಗೆ ದನಿಯಾಗಿದ್ದ ಬಸವಣ್ಣವರು ಜಾತ್ಯತೀತ ಸಮಾಜ ನಿರ್ಮಾಣ ಮಾಡಲು ಶ್ರಮಿಸಿದ್ದರು~ ಎಂದು ರಾಜ್ಯ ಕೃಷಿ ಮಾರಾಟ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಸೋಮಶೇಖರ್ ಹೇಳಿದರು.<br /> <br /> ನಗರದ ನಟರಾಜ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶರಣ ಮಂಡಲಿ ಭಾನುವಾರ ಏರ್ಪಡಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.<br /> <br /> `ಸ್ವಾತಂತ್ರ, ಸ್ವಾಭಿಮಾನದ ಕಡೆಗೆ ಬಸವಣ್ಣನವರ ಧರ್ಮ ಕರೆದೊಯ್ತು. ಕಾಯಕವೇ ಕೈಲಾಸ. ಕಾಯಕ-ಕಾಯಕಗಳ ನಡುವೆ ಸಮನ್ವಯ ಇರಬೇಕು ಎಂಬುದನ್ನು ಬಸವಣ್ಣ ಪ್ರತಿಪಾದಿಸಿದರು. ಶರಣ ಧರ್ಮ ಸ್ಥಿತಪ್ರಜ್ಞ, ಸಂಯಮದಿಂದ ಕೂಡಿದೆ. ಬಸವ ಧರ್ಮಕ್ಕೆ ಸೇರಿದವರು ಎಂದು ಹೇಳಿಕೊಳ್ಳಲು ಯಾರೂ ಸಂಕೋಚ ಪಡಬೇಕಾದ ಅಗತ್ಯ ಇಲ್ಲ~ ಎಂದು ಹೇಳಿದರು.<br /> <br /> `ಅಂಬೇಡ್ಕರ್ ದೇಶಕ್ಕೆ ಸಂವಿಧಾನ ಕೊಟ್ಟರೆ, ಬಸವಣ್ಣನವರು ಜೀವನ ಸಂವಿಧಾನವನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ದಯೆ ಇರಬೇಕು ಸಕಲ ಜೀವಚರಗಳ ಬಗ್ಗೆ ಎಂಬುದನ್ನು ತಿಳಿಸಿಕೊಟ್ಟಿದ್ದಾರೆ. ಸಮಾಜದಲ್ಲಿ ಯಾರೂ ಮೇಲು-ಕೀಳು ಅಲ್ಲ. ಎಲ್ಲರು ಸರಿಸಮಾನರು ಎಂಬುದನ್ನು ಪ್ರತಿಪಾದಿಸಿದ್ದಾರೆ. <br /> <br /> ಬಸವಣ್ಣನ ತತ್ವ-ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು~ ಎಂದು ಕರೆ ನೀಡಿದರು.<br /> <br /> ಮಾಜಿ ಮೇಯರ್ ವಾಸು ಮಾತನಾಡಿ, `ಪ್ರಶಸ್ತಿಗಳನ್ನು ಪಡೆಯಬೇಕಿದ್ದರೆ ಅರ್ಜಿಗಳನ್ನು ಹಾಕುವ ಅನಿವಾರ್ಯತೆ ಸಮಾಜದಲ್ಲಿ ಇದೆ. ಆದರೆ ಬಸವ ಮಂಡಳಿಯು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ~ ಎಂದು ಪ್ರಶಂಸೆ ವ್ಯಕ್ತಪಡಿಸಿದರು.<br /> <br /> ಹೊಸಮಠದ ಚಿದಾನಂದ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಎಚ್.ಎಸ್.ಮಹದೇವ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.<br /> <br /> ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಾ.ಪು.ಸಿದ್ದಲಿಂಗಸ್ವಾಮಿ, ಶರಣ ಮಂಡಲಿಯ ವಿ.ಎಸ್.ವಿರೂಪಾಕ್ಷಶೆಟ್ಟಿ, ಎಂ.ಬಿ.ವೀರಭದ್ರಪ್ಪ, ಪಿ.ಶಿವಶಂಕರ್, ಚಂದ್ರಮೌಳಿ ಉಪಸ್ಥಿತರಿದ್ದರು. ಮಂಡಲಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ ಪ್ರಾಸ್ತಾವಿಕ ಭಾಷಣ ಮಾಡಿದರು.<br /> <br /> ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಎ.ಎಸ್.ಸದಾಶಿವಯ್ಯ, ಸಿ.ಸೋಮೇಖರ್, ಪತ್ರಿಕೋದ್ಯಮಿ ರಾಜಶೇಖರ ಕೋಟಿ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಸಂಸ್ಥಾಪಕ ಡಾ.ಆರ್.ಬಾಲಸುಬ್ರಹ್ಮಣ್ಯಂ, ರಂಗಭೂಮಿ ಹಿರಿಯ ಕಲಾವಿದ ಬಸವರಾಜು, ಮಂಡಳಿ ಕಾರ್ಯದರ್ಶಿ ಎಸ್.ಶಿವಮೂರ್ತಿ ಕಾನ್ಯ ಅವರಿಗೆ `ಬಸವ~ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: `ಶೋಷಿತರಿಗೆ ದನಿಯಾಗಿದ್ದ ಬಸವಣ್ಣವರು ಜಾತ್ಯತೀತ ಸಮಾಜ ನಿರ್ಮಾಣ ಮಾಡಲು ಶ್ರಮಿಸಿದ್ದರು~ ಎಂದು ರಾಜ್ಯ ಕೃಷಿ ಮಾರಾಟ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಸೋಮಶೇಖರ್ ಹೇಳಿದರು.<br /> <br /> ನಗರದ ನಟರಾಜ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶರಣ ಮಂಡಲಿ ಭಾನುವಾರ ಏರ್ಪಡಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.<br /> <br /> `ಸ್ವಾತಂತ್ರ, ಸ್ವಾಭಿಮಾನದ ಕಡೆಗೆ ಬಸವಣ್ಣನವರ ಧರ್ಮ ಕರೆದೊಯ್ತು. ಕಾಯಕವೇ ಕೈಲಾಸ. ಕಾಯಕ-ಕಾಯಕಗಳ ನಡುವೆ ಸಮನ್ವಯ ಇರಬೇಕು ಎಂಬುದನ್ನು ಬಸವಣ್ಣ ಪ್ರತಿಪಾದಿಸಿದರು. ಶರಣ ಧರ್ಮ ಸ್ಥಿತಪ್ರಜ್ಞ, ಸಂಯಮದಿಂದ ಕೂಡಿದೆ. ಬಸವ ಧರ್ಮಕ್ಕೆ ಸೇರಿದವರು ಎಂದು ಹೇಳಿಕೊಳ್ಳಲು ಯಾರೂ ಸಂಕೋಚ ಪಡಬೇಕಾದ ಅಗತ್ಯ ಇಲ್ಲ~ ಎಂದು ಹೇಳಿದರು.<br /> <br /> `ಅಂಬೇಡ್ಕರ್ ದೇಶಕ್ಕೆ ಸಂವಿಧಾನ ಕೊಟ್ಟರೆ, ಬಸವಣ್ಣನವರು ಜೀವನ ಸಂವಿಧಾನವನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ದಯೆ ಇರಬೇಕು ಸಕಲ ಜೀವಚರಗಳ ಬಗ್ಗೆ ಎಂಬುದನ್ನು ತಿಳಿಸಿಕೊಟ್ಟಿದ್ದಾರೆ. ಸಮಾಜದಲ್ಲಿ ಯಾರೂ ಮೇಲು-ಕೀಳು ಅಲ್ಲ. ಎಲ್ಲರು ಸರಿಸಮಾನರು ಎಂಬುದನ್ನು ಪ್ರತಿಪಾದಿಸಿದ್ದಾರೆ. <br /> <br /> ಬಸವಣ್ಣನ ತತ್ವ-ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು~ ಎಂದು ಕರೆ ನೀಡಿದರು.<br /> <br /> ಮಾಜಿ ಮೇಯರ್ ವಾಸು ಮಾತನಾಡಿ, `ಪ್ರಶಸ್ತಿಗಳನ್ನು ಪಡೆಯಬೇಕಿದ್ದರೆ ಅರ್ಜಿಗಳನ್ನು ಹಾಕುವ ಅನಿವಾರ್ಯತೆ ಸಮಾಜದಲ್ಲಿ ಇದೆ. ಆದರೆ ಬಸವ ಮಂಡಳಿಯು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ~ ಎಂದು ಪ್ರಶಂಸೆ ವ್ಯಕ್ತಪಡಿಸಿದರು.<br /> <br /> ಹೊಸಮಠದ ಚಿದಾನಂದ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಎಚ್.ಎಸ್.ಮಹದೇವ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.<br /> <br /> ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಾ.ಪು.ಸಿದ್ದಲಿಂಗಸ್ವಾಮಿ, ಶರಣ ಮಂಡಲಿಯ ವಿ.ಎಸ್.ವಿರೂಪಾಕ್ಷಶೆಟ್ಟಿ, ಎಂ.ಬಿ.ವೀರಭದ್ರಪ್ಪ, ಪಿ.ಶಿವಶಂಕರ್, ಚಂದ್ರಮೌಳಿ ಉಪಸ್ಥಿತರಿದ್ದರು. ಮಂಡಲಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ ಪ್ರಾಸ್ತಾವಿಕ ಭಾಷಣ ಮಾಡಿದರು.<br /> <br /> ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಎ.ಎಸ್.ಸದಾಶಿವಯ್ಯ, ಸಿ.ಸೋಮೇಖರ್, ಪತ್ರಿಕೋದ್ಯಮಿ ರಾಜಶೇಖರ ಕೋಟಿ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಸಂಸ್ಥಾಪಕ ಡಾ.ಆರ್.ಬಾಲಸುಬ್ರಹ್ಮಣ್ಯಂ, ರಂಗಭೂಮಿ ಹಿರಿಯ ಕಲಾವಿದ ಬಸವರಾಜು, ಮಂಡಳಿ ಕಾರ್ಯದರ್ಶಿ ಎಸ್.ಶಿವಮೂರ್ತಿ ಕಾನ್ಯ ಅವರಿಗೆ `ಬಸವ~ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>