<p><strong>ಬೆಂಗಳೂರು:‘</strong>ರಾಜ್ಯದಲ್ಲಿ ಶ್ರವಣದೋಷವುಳ್ಳವರನ್ನು ಪತ್ತೆ ಹಚ್ಚಲು ಸರ್ಕಾರ ಜಿಲ್ಲಾ ಮಟ್ಟದ ಸಮೀಕ್ಷೆ ಕೈಗೊಳ್ಳಲು ನಿರ್ಧರಿಸಿದೆ’ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದರು.<br /> <br /> ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು ನಗರದಲ್ಲಿ ಸೋಮವಾರ ಆಯೋಜಿಸಿದ್ದ ‘ವಿಶ್ವ ಕಿವಿ ಆರೈಕೆ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ‘ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಹೀಗೆ ಮೂರು ವಲಯಗಳನ್ನು ರೂಪಿಸಿಕೊಂಡು, ಶ್ರವಣದೋಷ ಇರುವವರನ್ನು ಪತ್ತೆ ಮಾಡಲು ಶೀಘ್ರದಲ್ಲೇ ಸಮಿತಿಯನ್ನು ರಚಿಸಲಾಗುವುದು’ ಎಂದು ಹೇಳಿದರು.<br /> <br /> ‘ಸಮೀಕ್ಷೆ ಪೂರ್ಣಗೊಂಡು ವರದಿ ಬಂದ ನಂತರ ಸರ್ಕಾರದ ಆರೋಗ್ಯ ಯೋಜನೆಗಳಡಿ ಅಗತ್ಯವಿರುವವರಿಗೆ ‘ಕ್ಲಾಕ್ಲಿಯರ್ ಇಂಪ್ಲ್ಯಾಂಟ್’ ಉಪಕರಣದ ಸೌಲಭ್ಯವನ್ನು ಕೂಡ ಒದಗಿಸಲಾಗುವುದು’ ಎಂದು ಹೇಳಿದರು.<br /> <br /> ‘ಬಡ ಹಾಗೂ ಮಧ್ಯಮವರ್ಗದವರಿಗೆ ₨ 12 ಲಕ್ಷ ರೂಪಾಯಿ ವೆಚ್ಚದ ‘ಕ್ಲಾಕ್ಲಿಯರ್ ಇಂಪ್ಲ್ಯಾಂಟ್’ ಬಲು ದುಬಾರಿಯಾಗುತ್ತದೆ. ಹಾಗಾಗಿ ಸರ್ಕಾರ ಕಾರ್ಪೋರೇಟ್ ಸಂಸ್ಥೆಗಳ ನೆರವಿನೊಂದಿಗೆ ಈ ಸೌಲಭ್ಯವನ್ನು ನೀಡಲು ಚಿಂತನೆ ನಡೆಸಿದೆ’ ಎಂದು ತಿಳಿಸಿದರು.<br /> <br /> ‘ಮುಂದಿನ ವರ್ಷದ ಕಿವಿ ಆರೈಕೆ ದಿನಾಚರಣೆಯಂದು ಎಲ್ಲಾ ಜಿಲ್ಲೆಗಳಲ್ಲೂ ಕಿವಿ ತಪಾಸಣಾ ಶಿಬಿರವನ್ನು ಕಡ್ಡಾಯವಾಗಿ ಆಯೋಜಿಸಲಾಗುತ್ತದೆ’ ಎಂದರು.<br /> <br /> ‘ಮೊಬೈಲ್ನ ಹೆಚ್ಚು ಬಳಕೆಯಿಂದಲೂ ಕಿವುಡುತನ ಆವರಿಸಿಕೊಳ್ಳುತ್ತದೆ. ಹಾಗಾಗಿ ಈ ಬಗ್ಗೆಯು ವ್ಯಾಪಕ ಅರಿವು ಮೂಡಿಸಬೇಕಿದೆ’ ಎಂದು ತಿಳಿಸಿದರು. ಶ್ರವಣ ದೋಷವಿರುವ ಮೂರು ಮಂದಿಗೆ ಕಾಲೇಜಿನ ಮೂಲಕ ಶ್ರವಣ ಸಾಧನವನ್ನು ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:‘</strong>ರಾಜ್ಯದಲ್ಲಿ ಶ್ರವಣದೋಷವುಳ್ಳವರನ್ನು ಪತ್ತೆ ಹಚ್ಚಲು ಸರ್ಕಾರ ಜಿಲ್ಲಾ ಮಟ್ಟದ ಸಮೀಕ್ಷೆ ಕೈಗೊಳ್ಳಲು ನಿರ್ಧರಿಸಿದೆ’ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದರು.<br /> <br /> ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು ನಗರದಲ್ಲಿ ಸೋಮವಾರ ಆಯೋಜಿಸಿದ್ದ ‘ವಿಶ್ವ ಕಿವಿ ಆರೈಕೆ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ‘ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಹೀಗೆ ಮೂರು ವಲಯಗಳನ್ನು ರೂಪಿಸಿಕೊಂಡು, ಶ್ರವಣದೋಷ ಇರುವವರನ್ನು ಪತ್ತೆ ಮಾಡಲು ಶೀಘ್ರದಲ್ಲೇ ಸಮಿತಿಯನ್ನು ರಚಿಸಲಾಗುವುದು’ ಎಂದು ಹೇಳಿದರು.<br /> <br /> ‘ಸಮೀಕ್ಷೆ ಪೂರ್ಣಗೊಂಡು ವರದಿ ಬಂದ ನಂತರ ಸರ್ಕಾರದ ಆರೋಗ್ಯ ಯೋಜನೆಗಳಡಿ ಅಗತ್ಯವಿರುವವರಿಗೆ ‘ಕ್ಲಾಕ್ಲಿಯರ್ ಇಂಪ್ಲ್ಯಾಂಟ್’ ಉಪಕರಣದ ಸೌಲಭ್ಯವನ್ನು ಕೂಡ ಒದಗಿಸಲಾಗುವುದು’ ಎಂದು ಹೇಳಿದರು.<br /> <br /> ‘ಬಡ ಹಾಗೂ ಮಧ್ಯಮವರ್ಗದವರಿಗೆ ₨ 12 ಲಕ್ಷ ರೂಪಾಯಿ ವೆಚ್ಚದ ‘ಕ್ಲಾಕ್ಲಿಯರ್ ಇಂಪ್ಲ್ಯಾಂಟ್’ ಬಲು ದುಬಾರಿಯಾಗುತ್ತದೆ. ಹಾಗಾಗಿ ಸರ್ಕಾರ ಕಾರ್ಪೋರೇಟ್ ಸಂಸ್ಥೆಗಳ ನೆರವಿನೊಂದಿಗೆ ಈ ಸೌಲಭ್ಯವನ್ನು ನೀಡಲು ಚಿಂತನೆ ನಡೆಸಿದೆ’ ಎಂದು ತಿಳಿಸಿದರು.<br /> <br /> ‘ಮುಂದಿನ ವರ್ಷದ ಕಿವಿ ಆರೈಕೆ ದಿನಾಚರಣೆಯಂದು ಎಲ್ಲಾ ಜಿಲ್ಲೆಗಳಲ್ಲೂ ಕಿವಿ ತಪಾಸಣಾ ಶಿಬಿರವನ್ನು ಕಡ್ಡಾಯವಾಗಿ ಆಯೋಜಿಸಲಾಗುತ್ತದೆ’ ಎಂದರು.<br /> <br /> ‘ಮೊಬೈಲ್ನ ಹೆಚ್ಚು ಬಳಕೆಯಿಂದಲೂ ಕಿವುಡುತನ ಆವರಿಸಿಕೊಳ್ಳುತ್ತದೆ. ಹಾಗಾಗಿ ಈ ಬಗ್ಗೆಯು ವ್ಯಾಪಕ ಅರಿವು ಮೂಡಿಸಬೇಕಿದೆ’ ಎಂದು ತಿಳಿಸಿದರು. ಶ್ರವಣ ದೋಷವಿರುವ ಮೂರು ಮಂದಿಗೆ ಕಾಲೇಜಿನ ಮೂಲಕ ಶ್ರವಣ ಸಾಧನವನ್ನು ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>