<p><strong>ಶ್ರೀನಗರ (ಪಿಟಿಐ</strong>) :ಪ್ರಧಾನಿ ಮನಮೋಹನ್ ಸಿಂಗ್ ಅವರ ಜಮ್ಮು ಕಾಶ್ಮೀರ ಭೇಟಿಗೆ ಮೂರು ದಿನಗಳು ಬಾಕಿ ಇರುವಂತೆಯೇ ನಗರದ ಹೃದಯ ಭಾಗವಾದ ಹರಿಸಿಂಗ್ ಮುಖ್ಯಬೀದಿಯ ಮಾರುಕಟ್ಟೆಯಲ್ಲಿ ಉಗ್ರರು ಇಬ್ಬರು ಪೊಲೀಸರನ್ನು ಗುಂಡಿಕ್ಕಿ ಶನಿವಾರ ಹತ್ಯೆ ಮಾಡಿದ್ದಾರೆ<br /> <br /> ಸೈಲೆನ್ಸರ್ ಅಳವಡಿಸಿದ್ದ ಪಿಸ್ತೂಲ್ ಬಳಸಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಗುಂಡೇಟು ತಗುಲಿದ ಮುಖ್ಯ ಪೇದೆ ಮೊಹಮ್ಮದ್ ಮಕ್ಬೂಲ್ ಮತ್ತು ಪೇದೆ ನಜೀರ್ ಅಹಮದ್ ಅವರು ಸಾವನ್ನಪ್ಪಿದರೆಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.<br /> <br /> ಘಟನೆ ವೇಳೆ ಹುಡುಗಿಯೊಬ್ಬಳೂ ಸಹ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.<br /> <br /> ಜನರಿಂದ ತುಂಬಿದ್ದ ಮಾರುಕಟ್ಟೆ ದಿಢೀರನೆ ಎರಗಿದ ಈ ದುರ್ಘಟನೆ ಬಳಿಕ ಬಣಗುಡಲಾರಂಭಸಿತು. ಭದ್ರತಾ ಸಿಬ್ಬಂದಿಗಳು ಸ್ಥಳದಲ್ಲಿ ಉಗ್ರರಿಗಾಗಿ ತೀವ್ರ ಶೋಧ ಕಾರ್ಯ ನಡೆಸಿದರು.ಬನಿಹಾಲ್ ಮತ್ತು ಕ್ವಾಜಿಗುಂಡ್ ಮಧ್ಯೆ ಆರಂಭವಾಗಲಿರುವ ರೈಲು ಸೇವೆಯ ಉದ್ಘಾಟನೆಗಾಗಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಜೂನ್ 25ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಗ್ರರು ದುಷ್ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.<br /> <br /> ಇದುವರೆಗೂ ಯಾವುದೇ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ (ಪಿಟಿಐ</strong>) :ಪ್ರಧಾನಿ ಮನಮೋಹನ್ ಸಿಂಗ್ ಅವರ ಜಮ್ಮು ಕಾಶ್ಮೀರ ಭೇಟಿಗೆ ಮೂರು ದಿನಗಳು ಬಾಕಿ ಇರುವಂತೆಯೇ ನಗರದ ಹೃದಯ ಭಾಗವಾದ ಹರಿಸಿಂಗ್ ಮುಖ್ಯಬೀದಿಯ ಮಾರುಕಟ್ಟೆಯಲ್ಲಿ ಉಗ್ರರು ಇಬ್ಬರು ಪೊಲೀಸರನ್ನು ಗುಂಡಿಕ್ಕಿ ಶನಿವಾರ ಹತ್ಯೆ ಮಾಡಿದ್ದಾರೆ<br /> <br /> ಸೈಲೆನ್ಸರ್ ಅಳವಡಿಸಿದ್ದ ಪಿಸ್ತೂಲ್ ಬಳಸಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಗುಂಡೇಟು ತಗುಲಿದ ಮುಖ್ಯ ಪೇದೆ ಮೊಹಮ್ಮದ್ ಮಕ್ಬೂಲ್ ಮತ್ತು ಪೇದೆ ನಜೀರ್ ಅಹಮದ್ ಅವರು ಸಾವನ್ನಪ್ಪಿದರೆಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.<br /> <br /> ಘಟನೆ ವೇಳೆ ಹುಡುಗಿಯೊಬ್ಬಳೂ ಸಹ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.<br /> <br /> ಜನರಿಂದ ತುಂಬಿದ್ದ ಮಾರುಕಟ್ಟೆ ದಿಢೀರನೆ ಎರಗಿದ ಈ ದುರ್ಘಟನೆ ಬಳಿಕ ಬಣಗುಡಲಾರಂಭಸಿತು. ಭದ್ರತಾ ಸಿಬ್ಬಂದಿಗಳು ಸ್ಥಳದಲ್ಲಿ ಉಗ್ರರಿಗಾಗಿ ತೀವ್ರ ಶೋಧ ಕಾರ್ಯ ನಡೆಸಿದರು.ಬನಿಹಾಲ್ ಮತ್ತು ಕ್ವಾಜಿಗುಂಡ್ ಮಧ್ಯೆ ಆರಂಭವಾಗಲಿರುವ ರೈಲು ಸೇವೆಯ ಉದ್ಘಾಟನೆಗಾಗಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಜೂನ್ 25ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಗ್ರರು ದುಷ್ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.<br /> <br /> ಇದುವರೆಗೂ ಯಾವುದೇ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>