<p><strong>ಶ್ರೀನಗರ:</strong> ಸ್ವಾತಂತ್ಯ ದಿನಾಚರಣೆಯಂದೇ ಶ್ರೀನಗರದ ನೌಹಟ್ಟಾದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ ಉಗ್ರರ ಗುಂಪೊಂದು ದಾಳಿ ನಡೆಸಿದ್ದು, ಈ ಕಾಳಗದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.</p>.<p>ಬೆಳಗ್ಗೆ 8 ಗಂಟೆಯ ವೇಳೆ ಸಿಆರ್ಪಿಎಫ್ ಪಡೆ ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಸಿಆರ್ಪಿಎಫ್ ಸಿಬಂದಿಗಳು ಪ್ರತಿದಾಳಿ ನಡೆಸಿದಾಗ ಉಗ್ರರು ಅಲ್ಲಿರುವ ಮನೆಗಳಿಗೆ ನುಗ್ಗಿದ್ದಾರೆ.<br /> <br /> ಇಬ್ಬರಿಗಿಂತ ಹೆಚ್ಚು ಉಗ್ರರು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು. ಗುಂಡಿನ ಕಾಳಗದಲ್ಲಿ ಅವರು ಸತ್ತಿದ್ದಾರೆಯೇ? ಅಥವಾ ತಪ್ಪಿಸಿಕೊಂಡು ಹೋಗಿದ್ದಾರೆಯೇ? ಎಂಬುದರ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.|<br /> <br /> ಘಟನಾ ಸ್ಥಳದಿಂದ ಮೃತದೇಹಗಳನ್ನು ಪತ್ತೆ ಹಚ್ಚಿರುವ ಬಗ್ಗೆಯೂ ಮಾಹಿತಿ ಲಭಿಸಿಲ್ಲ.<br /> <br /> 8 ಸಿಆರ್ಪಿಎಫ್ ಸಿಬಂದಿ ಮತ್ತು ಓರ್ವ ಪೊಲೀಸ್ ಅಧಿಕಾರಿ ಈ ಕಾಳಗದಲ್ಲಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.<br /> <br /> ಸ್ವಾತಂತ್ರ್ಯ ದಿನಾಚರಣೆ ವೇಳೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮೆಹ್ಬೂಬ ಮುಫ್ತಿ ಭಾಷಣ ಮಾಡಿದ್ದ ಬಕ್ಷೀ ಸ್ಟೇಡಿಯಂನ ಸಮೀಪದಲ್ಲೇ ಇರುವ ನೌಹಾಟ್ಟದಲ್ಲಿ ಈ ದಾಳಿ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಸ್ವಾತಂತ್ಯ ದಿನಾಚರಣೆಯಂದೇ ಶ್ರೀನಗರದ ನೌಹಟ್ಟಾದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ ಉಗ್ರರ ಗುಂಪೊಂದು ದಾಳಿ ನಡೆಸಿದ್ದು, ಈ ಕಾಳಗದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.</p>.<p>ಬೆಳಗ್ಗೆ 8 ಗಂಟೆಯ ವೇಳೆ ಸಿಆರ್ಪಿಎಫ್ ಪಡೆ ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಸಿಆರ್ಪಿಎಫ್ ಸಿಬಂದಿಗಳು ಪ್ರತಿದಾಳಿ ನಡೆಸಿದಾಗ ಉಗ್ರರು ಅಲ್ಲಿರುವ ಮನೆಗಳಿಗೆ ನುಗ್ಗಿದ್ದಾರೆ.<br /> <br /> ಇಬ್ಬರಿಗಿಂತ ಹೆಚ್ಚು ಉಗ್ರರು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು. ಗುಂಡಿನ ಕಾಳಗದಲ್ಲಿ ಅವರು ಸತ್ತಿದ್ದಾರೆಯೇ? ಅಥವಾ ತಪ್ಪಿಸಿಕೊಂಡು ಹೋಗಿದ್ದಾರೆಯೇ? ಎಂಬುದರ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.|<br /> <br /> ಘಟನಾ ಸ್ಥಳದಿಂದ ಮೃತದೇಹಗಳನ್ನು ಪತ್ತೆ ಹಚ್ಚಿರುವ ಬಗ್ಗೆಯೂ ಮಾಹಿತಿ ಲಭಿಸಿಲ್ಲ.<br /> <br /> 8 ಸಿಆರ್ಪಿಎಫ್ ಸಿಬಂದಿ ಮತ್ತು ಓರ್ವ ಪೊಲೀಸ್ ಅಧಿಕಾರಿ ಈ ಕಾಳಗದಲ್ಲಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.<br /> <br /> ಸ್ವಾತಂತ್ರ್ಯ ದಿನಾಚರಣೆ ವೇಳೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮೆಹ್ಬೂಬ ಮುಫ್ತಿ ಭಾಷಣ ಮಾಡಿದ್ದ ಬಕ್ಷೀ ಸ್ಟೇಡಿಯಂನ ಸಮೀಪದಲ್ಲೇ ಇರುವ ನೌಹಾಟ್ಟದಲ್ಲಿ ಈ ದಾಳಿ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>