<p>ಶ್ರೀನಗರ: ಹಿಮ ಕುಸಿತದಲ್ಲಿದಡಿ ಸಿಲುಕಿ ಇಬ್ಬರು ಯುವತಿಯರು ಸಾವನ್ನಪ್ಪಿದ ಘಟನೆ ಉತ್ತರ ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಗುರೆಜ್ ಎಂಬಲ್ಲಿ ಭಾನುವಾರ ನಡೆದಿದೆ.<br /> <br /> ಪಿಟಿಐ ವರದಿ: ಅಧಿಕ ಹಿಮಪಾತದಿಂದಾಗಿ ಜಮ್ಮು – ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. 300 ಕಿ.ಮೀ ಉದ್ದದ ಈ ಮಾರ್ಗವು ಜಮ್ಮು ಕಾಶ್ಮೀರದೊಂದಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ. ಅಧಿಕ ಹಿಮಪಾತದಿಂದಾಗುವ ಅಪಾಯವನ್ನು ಮನಗಂಡು ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು.<br /> <br /> <strong>ಮಂಜು: ಜನಜೀವನ ಅಸ್ತವ್ಯಸ್ತ</strong><br /> ಜೈಪುರ (ಪಿಟಿಐ): ರಾಜಸ್ತಾನದ ಬಹುತೇಕ ಭಾಗಗಳಲ್ಲಿ ಭಾನುವಾರ ಸತತ ಎರಡನೇ ದಿನವೂ ದಟ್ಟ ಮಂಜು ಮುಸುಕಿದ ವಾತಾವರಣ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಸಾರಿಗೆ ಮತ್ತು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಯಿತು.<br /> <br /> <strong>ಮನಾಲಿಯಲ್ಲಿ ಹಿಮಪಾತ</strong><br /> ಶಿಮ್ಲಾ (ಐಎಎನ್ಎಸ್): ಭಾರತದ ಜನಪ್ರಿಯ ಪ್ರವಾಸಿ ತಾಣಗಳಾದ ಶಿಮ್ಲಾ, ಮನಾಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಭಾನುವಾರ ಈ ಋತುವಿನ ಮೊದಲ ಹಿಮಪಾತವಾಗಿದೆ. ಮನಾಲಿಯಲ್ಲಿ ಕನಿಷ್ಠ ತಾಪಮಾನ- ಮೈನಸ್ 1.2 ಡಿಗ್ರಿ ಇತ್ತು.<br /> ಯಾಗಿದ್ದು, 18 ಸೆ.ಮೀ. ಹಿಮಪಾತವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಗರ: ಹಿಮ ಕುಸಿತದಲ್ಲಿದಡಿ ಸಿಲುಕಿ ಇಬ್ಬರು ಯುವತಿಯರು ಸಾವನ್ನಪ್ಪಿದ ಘಟನೆ ಉತ್ತರ ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಗುರೆಜ್ ಎಂಬಲ್ಲಿ ಭಾನುವಾರ ನಡೆದಿದೆ.<br /> <br /> ಪಿಟಿಐ ವರದಿ: ಅಧಿಕ ಹಿಮಪಾತದಿಂದಾಗಿ ಜಮ್ಮು – ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. 300 ಕಿ.ಮೀ ಉದ್ದದ ಈ ಮಾರ್ಗವು ಜಮ್ಮು ಕಾಶ್ಮೀರದೊಂದಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ. ಅಧಿಕ ಹಿಮಪಾತದಿಂದಾಗುವ ಅಪಾಯವನ್ನು ಮನಗಂಡು ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು.<br /> <br /> <strong>ಮಂಜು: ಜನಜೀವನ ಅಸ್ತವ್ಯಸ್ತ</strong><br /> ಜೈಪುರ (ಪಿಟಿಐ): ರಾಜಸ್ತಾನದ ಬಹುತೇಕ ಭಾಗಗಳಲ್ಲಿ ಭಾನುವಾರ ಸತತ ಎರಡನೇ ದಿನವೂ ದಟ್ಟ ಮಂಜು ಮುಸುಕಿದ ವಾತಾವರಣ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಸಾರಿಗೆ ಮತ್ತು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಯಿತು.<br /> <br /> <strong>ಮನಾಲಿಯಲ್ಲಿ ಹಿಮಪಾತ</strong><br /> ಶಿಮ್ಲಾ (ಐಎಎನ್ಎಸ್): ಭಾರತದ ಜನಪ್ರಿಯ ಪ್ರವಾಸಿ ತಾಣಗಳಾದ ಶಿಮ್ಲಾ, ಮನಾಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಭಾನುವಾರ ಈ ಋತುವಿನ ಮೊದಲ ಹಿಮಪಾತವಾಗಿದೆ. ಮನಾಲಿಯಲ್ಲಿ ಕನಿಷ್ಠ ತಾಪಮಾನ- ಮೈನಸ್ 1.2 ಡಿಗ್ರಿ ಇತ್ತು.<br /> ಯಾಗಿದ್ದು, 18 ಸೆ.ಮೀ. ಹಿಮಪಾತವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>