<p><strong>ಶ್ರೀರಂಗಪಟ್ಟಣ: </strong>ಬದ್ಧ ವೈರಿಗಳು ಎಂದೇ ಜನ ಜನಿತವಾಗಿರುವ ಜೆಡಿಎಸ್- ಬಿಜೆಪಿ ಪಕ್ಷಗಳು ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ದೋಸ್ತಿ ಮಾಡಿಕೊಂಡು ಅಧಿಕಾರ ಹಿಡಿಯುವ ಮೂಲಕ ಅಚ್ಚರಿ ಮೂಡಿಸಿವೆ.<br /> <br /> ಶುಕ್ರವಾರ ನಡೆದ ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯ ಟಿ.ಶ್ರೀಧರ್ ಹಾಗೂ ಜೆಡಿಎಸ್ನ ರಾಜೇಶ್ವರಿ ಕ್ರಮವಾಗಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧಿಕಾರ ಹಿಡಿಯಲು ಜೆಡಿಎಸ್ಗೆ ಒಬ್ಬ ಸದಸ್ಯರ ಕೊರತೆ ಇತ್ತು. 7 ಸದಸ್ಯರನ್ನು ಹೊಂದಿರುವ ಜೆಡಿಎಸ್ 3 ಸದಸ್ಯರಿರುವ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ನಿರೀಕ್ಷೆ ಹುಸಿಯಾಯಿತು. 15 ಸದಸ್ಯ ಬಲದ ತಾ.ಪಂ.ನಲ್ಲಿ ಅಧಿಕಾರ ಹಿಡಿಯಲು 8 ಸದಸ್ಯರ ಅಗತ್ಯವಿತ್ತು. ಕಾಂಗ್ರೆಸ್ ಜತೆ ಮಾತುಕತೆ ವಿಫಲವಾದ ಕಾರಣ ಬಿಜೆಪಿಯ ಏಕೈಕ ಸದಸ್ಯ, ಚಂದಗಾಲು ಕ್ಷೇತ್ರದ ಟಿ.ಶ್ರೀಧರ್ ಬೆಂಬಲದೊಡನೆ ಜೆಡಿಎಸ್ ಅಧಿಕಾರ ಹಿಡಿಯಿತು. ಅದರೆ ಅಧ್ಯಕ್ಷ ಪದವಿಯನ್ನು ಅಧಿಕಾರ ಹಂಚಿಕೆ ಸೂತ್ರದ ಅನ್ವಯ ಬಿಜೆಪಿಗೆ ಬಿಟ್ಟುಕೊಟ್ಟಿದೆ.<br /> <br /> ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಟಿ.ಶ್ರೀಧರ್ ಜೆಡಿಎಸ್ ಬೆಂಬಲದೊಡನೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ನಿಂದ ಹುಲಿಕೆರೆ ಜಯರಾಂ ಹಾಗೂ ಪಕ್ಷೇತರ ಸದಸ್ಯ ಕೆ.ಸಿ.ಸೋಮಶೇಖರ್ ಕೂಡ ನಾಮಪತ್ರ ಸಲ್ಲಿಸಿದರು. ಕೈ ಎತ್ತಿಸುವ ಮೂಲಕ ಬಲಾಬಲ ಪ್ರದರ್ಶನ ನಡೆಯಿತು. ಟಿ.ಶ್ರೀಧರ್-8, ಕೆ.ಸಿ.ಸೋಮಶೇಖರ್-4 ಹಾಗೂ ಜಯರಾಂ-3 ಮತಗಳನ್ನು ಪಡೆದರು. ಉಪಾಧ್ಯಕ್ಷ ಸ್ಥಾನ ಪ/ಜಾಗೆ ಮೀಸಲಾಗಿತ್ತು. 15 ಸದಸ್ಯರಲ್ಲಿ ಕೆ.ಶೆಟ್ಟಹಳ್ಳಿ ಕ್ಷೇತ್ರದ ಜೆಡಿಎಸ್ ಸದಸ್ಯೆ ರಾಜೇಶ್ವರಿ ಮಾತ್ರ ಈ ವರ್ಗಕ್ಕೆ ಸೇರಿದ್ದು, ಅವಿರೋಧವಾಗಿ ಆಯ್ಕೆಯಾದರು. ಪಾಂಡವಪುರ ಉಪ ವಿಭಾಗಾಧಿಕಾರಿ ಜಿ.ಪ್ರಭು ಚುನಾವಣಾಧಿ ಕಾರಿಯಾಗಿ ಕಾರ್ಯ ನಿರ್ವಹಿಸಿದರು.<br /> <br /> ಕಾಡಾ ಅಧ್ಯಕ್ಷ ಡಿ.ರಾಮಲಿಂಗಯ್ಯ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ‘ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಹಿಡಿತ ಸಾಧಿಸಬೇಕು ಎಂಬ ನಮ್ಮ ಆಸೆ ಈಡೇರಿದೆ. ಇದರಿಂದ ನಮಗೆ ಸಹಜವಾಗಿ ಸಂತೋಷವಾಗಿದೆ. ಜೆಡಿಎಸ್ ಅಗತ್ಯ ಸಹಕಾರ ನೀಡಿದರೆ ಒಂದಷ್ಟು ಅಭಿವೃದ್ಧಿ ಕೆಲಸ ಮಾಡಬಹುದು’ ಎಂದು ಹೇಳಿದರು.<br /> <br /> <strong>ಕಾಂಗ್ರೆಸ್ ಟೀಕೆ: </strong>ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕುರಿತು ಶಾಸಕರು ಮತ್ತು ಆ ಪಕ್ಷದ ಮುಖಂಡರ ಜತೆ ಚರ್ಚೆ ನಡೆದಿತ್ತು. ಕಾಂಗ್ರೆಸ್ಗೆ ಕೇವಲ 3 ತಿಂಗಳು ಅಧಿಕಾರ ನೀಡುವಂತೆ ಪ್ರಸ್ತಾಪ ಮುಂದಿಡಲಾಗಿತ್ತು. ಸಮಯಾವಕಾಶ ಕೇಳಿದ್ದ ಶಾಸಕ ಮತ್ತು ಆ ಪಕ್ಷದ ಮುಖಂಡರು ಕಾಂಗ್ರೆಸ್ಗೆ ದ್ರೋಹ ಬಗೆದಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎಲ್.ಲಿಂಗರಾಜು ಟೀಕಿಸಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಪಿ.ಎಚ್. ಚಂದ್ರಶೇಖರ್, ಕೆ.ಬಲರಾಂ, ಉಮಾಶಂಕರ್, ಎಸ್.ದೇವರಾಜು, ಎಸ್.ಜೆ. ಆನಂದ್, ಗ್ರಾ.ಪಂ. ಅಧ್ಯಕ್ಷ ಜೆ.ರಾಜು, ಜೆಡಿಎಸ್ ಅಧ್ಯಕ್ಷ ಎನ್.ವಿ.ಚಲುವರಾಜು ಇತರರು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ: </strong>ಬದ್ಧ ವೈರಿಗಳು ಎಂದೇ ಜನ ಜನಿತವಾಗಿರುವ ಜೆಡಿಎಸ್- ಬಿಜೆಪಿ ಪಕ್ಷಗಳು ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ದೋಸ್ತಿ ಮಾಡಿಕೊಂಡು ಅಧಿಕಾರ ಹಿಡಿಯುವ ಮೂಲಕ ಅಚ್ಚರಿ ಮೂಡಿಸಿವೆ.<br /> <br /> ಶುಕ್ರವಾರ ನಡೆದ ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯ ಟಿ.ಶ್ರೀಧರ್ ಹಾಗೂ ಜೆಡಿಎಸ್ನ ರಾಜೇಶ್ವರಿ ಕ್ರಮವಾಗಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧಿಕಾರ ಹಿಡಿಯಲು ಜೆಡಿಎಸ್ಗೆ ಒಬ್ಬ ಸದಸ್ಯರ ಕೊರತೆ ಇತ್ತು. 7 ಸದಸ್ಯರನ್ನು ಹೊಂದಿರುವ ಜೆಡಿಎಸ್ 3 ಸದಸ್ಯರಿರುವ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ನಿರೀಕ್ಷೆ ಹುಸಿಯಾಯಿತು. 15 ಸದಸ್ಯ ಬಲದ ತಾ.ಪಂ.ನಲ್ಲಿ ಅಧಿಕಾರ ಹಿಡಿಯಲು 8 ಸದಸ್ಯರ ಅಗತ್ಯವಿತ್ತು. ಕಾಂಗ್ರೆಸ್ ಜತೆ ಮಾತುಕತೆ ವಿಫಲವಾದ ಕಾರಣ ಬಿಜೆಪಿಯ ಏಕೈಕ ಸದಸ್ಯ, ಚಂದಗಾಲು ಕ್ಷೇತ್ರದ ಟಿ.ಶ್ರೀಧರ್ ಬೆಂಬಲದೊಡನೆ ಜೆಡಿಎಸ್ ಅಧಿಕಾರ ಹಿಡಿಯಿತು. ಅದರೆ ಅಧ್ಯಕ್ಷ ಪದವಿಯನ್ನು ಅಧಿಕಾರ ಹಂಚಿಕೆ ಸೂತ್ರದ ಅನ್ವಯ ಬಿಜೆಪಿಗೆ ಬಿಟ್ಟುಕೊಟ್ಟಿದೆ.<br /> <br /> ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಟಿ.ಶ್ರೀಧರ್ ಜೆಡಿಎಸ್ ಬೆಂಬಲದೊಡನೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ನಿಂದ ಹುಲಿಕೆರೆ ಜಯರಾಂ ಹಾಗೂ ಪಕ್ಷೇತರ ಸದಸ್ಯ ಕೆ.ಸಿ.ಸೋಮಶೇಖರ್ ಕೂಡ ನಾಮಪತ್ರ ಸಲ್ಲಿಸಿದರು. ಕೈ ಎತ್ತಿಸುವ ಮೂಲಕ ಬಲಾಬಲ ಪ್ರದರ್ಶನ ನಡೆಯಿತು. ಟಿ.ಶ್ರೀಧರ್-8, ಕೆ.ಸಿ.ಸೋಮಶೇಖರ್-4 ಹಾಗೂ ಜಯರಾಂ-3 ಮತಗಳನ್ನು ಪಡೆದರು. ಉಪಾಧ್ಯಕ್ಷ ಸ್ಥಾನ ಪ/ಜಾಗೆ ಮೀಸಲಾಗಿತ್ತು. 15 ಸದಸ್ಯರಲ್ಲಿ ಕೆ.ಶೆಟ್ಟಹಳ್ಳಿ ಕ್ಷೇತ್ರದ ಜೆಡಿಎಸ್ ಸದಸ್ಯೆ ರಾಜೇಶ್ವರಿ ಮಾತ್ರ ಈ ವರ್ಗಕ್ಕೆ ಸೇರಿದ್ದು, ಅವಿರೋಧವಾಗಿ ಆಯ್ಕೆಯಾದರು. ಪಾಂಡವಪುರ ಉಪ ವಿಭಾಗಾಧಿಕಾರಿ ಜಿ.ಪ್ರಭು ಚುನಾವಣಾಧಿ ಕಾರಿಯಾಗಿ ಕಾರ್ಯ ನಿರ್ವಹಿಸಿದರು.<br /> <br /> ಕಾಡಾ ಅಧ್ಯಕ್ಷ ಡಿ.ರಾಮಲಿಂಗಯ್ಯ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ‘ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಹಿಡಿತ ಸಾಧಿಸಬೇಕು ಎಂಬ ನಮ್ಮ ಆಸೆ ಈಡೇರಿದೆ. ಇದರಿಂದ ನಮಗೆ ಸಹಜವಾಗಿ ಸಂತೋಷವಾಗಿದೆ. ಜೆಡಿಎಸ್ ಅಗತ್ಯ ಸಹಕಾರ ನೀಡಿದರೆ ಒಂದಷ್ಟು ಅಭಿವೃದ್ಧಿ ಕೆಲಸ ಮಾಡಬಹುದು’ ಎಂದು ಹೇಳಿದರು.<br /> <br /> <strong>ಕಾಂಗ್ರೆಸ್ ಟೀಕೆ: </strong>ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕುರಿತು ಶಾಸಕರು ಮತ್ತು ಆ ಪಕ್ಷದ ಮುಖಂಡರ ಜತೆ ಚರ್ಚೆ ನಡೆದಿತ್ತು. ಕಾಂಗ್ರೆಸ್ಗೆ ಕೇವಲ 3 ತಿಂಗಳು ಅಧಿಕಾರ ನೀಡುವಂತೆ ಪ್ರಸ್ತಾಪ ಮುಂದಿಡಲಾಗಿತ್ತು. ಸಮಯಾವಕಾಶ ಕೇಳಿದ್ದ ಶಾಸಕ ಮತ್ತು ಆ ಪಕ್ಷದ ಮುಖಂಡರು ಕಾಂಗ್ರೆಸ್ಗೆ ದ್ರೋಹ ಬಗೆದಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎಲ್.ಲಿಂಗರಾಜು ಟೀಕಿಸಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಪಿ.ಎಚ್. ಚಂದ್ರಶೇಖರ್, ಕೆ.ಬಲರಾಂ, ಉಮಾಶಂಕರ್, ಎಸ್.ದೇವರಾಜು, ಎಸ್.ಜೆ. ಆನಂದ್, ಗ್ರಾ.ಪಂ. ಅಧ್ಯಕ್ಷ ಜೆ.ರಾಜು, ಜೆಡಿಎಸ್ ಅಧ್ಯಕ್ಷ ಎನ್.ವಿ.ಚಲುವರಾಜು ಇತರರು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>