<p>ಶ್ರೀರಂಗಪಟ್ಟಣ: ಟಿಪ್ಪು ಸುಲ್ತಾನ್ ಅವರ ದ್ವಿಶತಮಾನೋತ್ಸವ ಆಚರಣೆ ಅಂಗವಾಗಿ ಪಟ್ಟಣದಲ್ಲಿ ನಡೆಯಬೇಕಿದ್ದ ಧ್ವನಿ- ಬೆಳಕು ಕಾರ್ಯಕ್ರಮ ಮತ್ತಷ್ಟು ತಡವಾಗುವ ಸಾಧ್ಯತೆಗಳಿವೆ. <br /> <br /> ಪಟ್ಟಣದ ಮೈಸೂರು ಗೇಟ್ ಬಳಿ, ಮೂರೂವರೆ ಎಕರೆ ವಿಸ್ತೀರ್ಣದಲ್ಲಿ ಈ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ. ಕಳೆದ ಒಂದು ವರ್ಷದಿಂದ ಈ ಕಾರ್ಯಕ್ರಮ ಕುರಿತು ಚರ್ಚೆಗಳು ಮಾತ್ರ ನಡೆಯುತ್ತಿವೆ. <br /> <br /> ಆದರೆ ಧ್ವನಿ- ಬೆಳಕು ಕುರಿತ ಮಹತ್ವದ ಕಾರ್ಯಕ್ರಮದ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಸ್ಕೃಿಪ್ಟ್ ಕೂಡ ಸಿದ್ಧಗೊಂಡಿಲ್ಲ. ಪುರಾತತ್ವ ಇಲಾಖೆ ಸದ್ಯ 20 ಗುಂಟೆಯಷ್ಟು ಜಮೀನನ್ನು ಪ್ರವಾಸೋದ್ಯಮ ಇಲಾಖೆಗೆ ನೀಡಿದೆ. <br /> <br /> ಉಳಿದ ಜಮೀನು ಹಸ್ತಾಂತರ ಕುರಿತು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಶ್ರೀಧರ್ `ಪ್ರಜಾವಾಣಿ~ಗೆ ತಿಳಿಸಿದ್ದಾರೆ.<br /> <br /> ಕಾರ್ಯಕ್ರಮಕ್ಕಾಗಿ ರೂ.3.45 ಕೋಟಿ ವೆಚ್ಚದ ಪ್ರಸ್ತಾವ ಸಲ್ಲಿಸಲಾಗಿದೆ. ಸಿದ್ಧತಾ ಕಾರ್ಯಗಳಿಗಾಗಿ ಇ-ಟೆಂಡರ್ ಕರೆಯಲಾಗಿದೆ. ಈ ತಿಂಗಳ 23ರ ನಂತರ ಬಿಡ್ ನಡೆಸಲಾಗುತ್ತದೆ. ಈಗ ವಾಹನ ಪಾರ್ಕಿಂಗ್ ಇತರ ಉದ್ದೇಶಗಳಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.<br /> <br /> ಸ್ಮಾರಕಗಳ ಜತೆಗೆ ಹಂಪಿಯಲ್ಲಿ ರೂಪಿಸಿದ್ದ ಮಾದರಿಯಲ್ಲಿ ಕೃತಕ ವೇದಿಕೆ ನಿರ್ಮಾಣವಾಗಲಿದೆ. ಅಧಿಕೃತ ಸ್ಕೃಿಪ್ಟ್ ಸಿದ್ದಗೊಂಡ ಬಳಿಕ ಅಧಿಕೃತ ದಿನಾಂಕವೂ ಗೊತ್ತಾಗಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀರಂಗಪಟ್ಟಣ: ಟಿಪ್ಪು ಸುಲ್ತಾನ್ ಅವರ ದ್ವಿಶತಮಾನೋತ್ಸವ ಆಚರಣೆ ಅಂಗವಾಗಿ ಪಟ್ಟಣದಲ್ಲಿ ನಡೆಯಬೇಕಿದ್ದ ಧ್ವನಿ- ಬೆಳಕು ಕಾರ್ಯಕ್ರಮ ಮತ್ತಷ್ಟು ತಡವಾಗುವ ಸಾಧ್ಯತೆಗಳಿವೆ. <br /> <br /> ಪಟ್ಟಣದ ಮೈಸೂರು ಗೇಟ್ ಬಳಿ, ಮೂರೂವರೆ ಎಕರೆ ವಿಸ್ತೀರ್ಣದಲ್ಲಿ ಈ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ. ಕಳೆದ ಒಂದು ವರ್ಷದಿಂದ ಈ ಕಾರ್ಯಕ್ರಮ ಕುರಿತು ಚರ್ಚೆಗಳು ಮಾತ್ರ ನಡೆಯುತ್ತಿವೆ. <br /> <br /> ಆದರೆ ಧ್ವನಿ- ಬೆಳಕು ಕುರಿತ ಮಹತ್ವದ ಕಾರ್ಯಕ್ರಮದ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಸ್ಕೃಿಪ್ಟ್ ಕೂಡ ಸಿದ್ಧಗೊಂಡಿಲ್ಲ. ಪುರಾತತ್ವ ಇಲಾಖೆ ಸದ್ಯ 20 ಗುಂಟೆಯಷ್ಟು ಜಮೀನನ್ನು ಪ್ರವಾಸೋದ್ಯಮ ಇಲಾಖೆಗೆ ನೀಡಿದೆ. <br /> <br /> ಉಳಿದ ಜಮೀನು ಹಸ್ತಾಂತರ ಕುರಿತು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಶ್ರೀಧರ್ `ಪ್ರಜಾವಾಣಿ~ಗೆ ತಿಳಿಸಿದ್ದಾರೆ.<br /> <br /> ಕಾರ್ಯಕ್ರಮಕ್ಕಾಗಿ ರೂ.3.45 ಕೋಟಿ ವೆಚ್ಚದ ಪ್ರಸ್ತಾವ ಸಲ್ಲಿಸಲಾಗಿದೆ. ಸಿದ್ಧತಾ ಕಾರ್ಯಗಳಿಗಾಗಿ ಇ-ಟೆಂಡರ್ ಕರೆಯಲಾಗಿದೆ. ಈ ತಿಂಗಳ 23ರ ನಂತರ ಬಿಡ್ ನಡೆಸಲಾಗುತ್ತದೆ. ಈಗ ವಾಹನ ಪಾರ್ಕಿಂಗ್ ಇತರ ಉದ್ದೇಶಗಳಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.<br /> <br /> ಸ್ಮಾರಕಗಳ ಜತೆಗೆ ಹಂಪಿಯಲ್ಲಿ ರೂಪಿಸಿದ್ದ ಮಾದರಿಯಲ್ಲಿ ಕೃತಕ ವೇದಿಕೆ ನಿರ್ಮಾಣವಾಗಲಿದೆ. ಅಧಿಕೃತ ಸ್ಕೃಿಪ್ಟ್ ಸಿದ್ದಗೊಂಡ ಬಳಿಕ ಅಧಿಕೃತ ದಿನಾಂಕವೂ ಗೊತ್ತಾಗಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>