<p><strong>ಬೆಂಗಳೂರು: </strong>`ಜನಸೇವೆ ಮಾಡಬೇಕು, ಅವರ ಕಷ್ಟಸುಖಗಳಲ್ಲಿ ಭಾಗಿಯಾಗಬೇಕು ಎಂಬ ಹಂಬಲದಿಂದ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದೇನೆ~ ಎಂದು ನಟಿ ರಕ್ಷಿತಾ ಹೇಳಿದರು.<br /> <br /> ಮಾಜಿ ಸಚಿವ ಬಿ.ಶ್ರೀರಾಮುಲು ಅವರ `ಬಿಎಸ್ಆರ್~ ಪಕ್ಷಕ್ಕೆ ಶುಕ್ರವಾರ ಇಲ್ಲಿ ಸೇರ್ಪಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಹಿಂದೆ ರಾಷ್ಟ್ರೀಯ ಪಕ್ಷಗಳಿಂದ ಆಹ್ವಾನ ಬಂದಿತ್ತು. ಆಗ ನನಗೆ ಆಸಕ್ತಿ ಇರಲಿಲ್ಲ. ಶ್ರೀರಾಮುಲು ಬಡಜನರ ಬಗ್ಗೆ ತೋರುವ ಕಾಳಜಿ, ಪ್ರೀತಿ ಬಿಎಸ್ಆರ್ ಪಕ್ಷಕ್ಕೆ ಸೇರ್ಪಡೆಯಾಗಲು ಪ್ರೇರಣೆಯಾಯಿತು~ ಎಂದರು.<br /> <br /> `ಈಚೆಗೆ ಪ್ರಾದೇಶಿಕ ಪಕ್ಷಗಳ ಬಗ್ಗೆ ಜನರ ಒಲವು ಹೆಚ್ಚಾಗುತ್ತಿದ್ದು, ಬಿಎಸ್ಆರ್ ಪಕ್ಷ ರಾಜ್ಯದಲ್ಲಿ ಹೊಸ ಅಲೆ ಸೃಷ್ಟಿಸಲಿದೆ. ಸದ್ಯಕ್ಕೆ ಚುನಾವಣೆಗೆ ಸ್ಪರ್ಧಿಸುವ ಆಸಕ್ತಿ ಇಲ್ಲ. ರಾಜಕೀಯದಲ್ಲಿ ಮೊದಲ ಹೆಜ್ಜೆ ಪಕ್ಷ ಸಂಘಟನೆ. ಸದ್ಯಕ್ಕೆ ಸಂಘಟನೆಯಲ್ಲಿ ತೊಡಗುತ್ತೇನೆ. ಮುಂದೆ ನೋಡೋಣ~ ಎಂದರು. ಇದೇ ತಿಂಗಳ 13ರಂದು ಶ್ರೀರಾಮುಲು ಅವರು ಗದಗದಲ್ಲಿ ನಡೆಸುವ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವುದಾಗಿ ತಿಳಿಸಿದರು.<br /> <br /> ನಟ, ನಿರ್ದೇಶಕ ಪ್ರೇಮ್ ಮಾತನಾಡಿ, `ನಾನು ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದೇನೆ. ಸದ್ಯಕ್ಕೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವ ಆಸಕ್ತಿ ಇಲ್ಲ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಜನಸೇವೆ ಮಾಡಬೇಕು, ಅವರ ಕಷ್ಟಸುಖಗಳಲ್ಲಿ ಭಾಗಿಯಾಗಬೇಕು ಎಂಬ ಹಂಬಲದಿಂದ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದೇನೆ~ ಎಂದು ನಟಿ ರಕ್ಷಿತಾ ಹೇಳಿದರು.<br /> <br /> ಮಾಜಿ ಸಚಿವ ಬಿ.ಶ್ರೀರಾಮುಲು ಅವರ `ಬಿಎಸ್ಆರ್~ ಪಕ್ಷಕ್ಕೆ ಶುಕ್ರವಾರ ಇಲ್ಲಿ ಸೇರ್ಪಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಹಿಂದೆ ರಾಷ್ಟ್ರೀಯ ಪಕ್ಷಗಳಿಂದ ಆಹ್ವಾನ ಬಂದಿತ್ತು. ಆಗ ನನಗೆ ಆಸಕ್ತಿ ಇರಲಿಲ್ಲ. ಶ್ರೀರಾಮುಲು ಬಡಜನರ ಬಗ್ಗೆ ತೋರುವ ಕಾಳಜಿ, ಪ್ರೀತಿ ಬಿಎಸ್ಆರ್ ಪಕ್ಷಕ್ಕೆ ಸೇರ್ಪಡೆಯಾಗಲು ಪ್ರೇರಣೆಯಾಯಿತು~ ಎಂದರು.<br /> <br /> `ಈಚೆಗೆ ಪ್ರಾದೇಶಿಕ ಪಕ್ಷಗಳ ಬಗ್ಗೆ ಜನರ ಒಲವು ಹೆಚ್ಚಾಗುತ್ತಿದ್ದು, ಬಿಎಸ್ಆರ್ ಪಕ್ಷ ರಾಜ್ಯದಲ್ಲಿ ಹೊಸ ಅಲೆ ಸೃಷ್ಟಿಸಲಿದೆ. ಸದ್ಯಕ್ಕೆ ಚುನಾವಣೆಗೆ ಸ್ಪರ್ಧಿಸುವ ಆಸಕ್ತಿ ಇಲ್ಲ. ರಾಜಕೀಯದಲ್ಲಿ ಮೊದಲ ಹೆಜ್ಜೆ ಪಕ್ಷ ಸಂಘಟನೆ. ಸದ್ಯಕ್ಕೆ ಸಂಘಟನೆಯಲ್ಲಿ ತೊಡಗುತ್ತೇನೆ. ಮುಂದೆ ನೋಡೋಣ~ ಎಂದರು. ಇದೇ ತಿಂಗಳ 13ರಂದು ಶ್ರೀರಾಮುಲು ಅವರು ಗದಗದಲ್ಲಿ ನಡೆಸುವ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವುದಾಗಿ ತಿಳಿಸಿದರು.<br /> <br /> ನಟ, ನಿರ್ದೇಶಕ ಪ್ರೇಮ್ ಮಾತನಾಡಿ, `ನಾನು ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದೇನೆ. ಸದ್ಯಕ್ಕೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವ ಆಸಕ್ತಿ ಇಲ್ಲ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>