<p>ಬೆಂಗಳೂರು: ವೈಮಾನಿಕ ಕ್ಷೇತ್ರದಲ್ಲಿ ಜಾಗತಿಕ ಸ್ಪರ್ಧೆ ಎದುರಿಸಲು ಭಾರತ, ಶ್ರೇಷ್ಠ ದರ್ಜೆಯ ವಿಶ್ವವಿದ್ಯಾಲಯಗಳು ಹಾಗೂ ಸಂಶೋಧನಾ ಸಂಸ್ಥೆಗಳನ್ನು ಸ್ಥಾಪಿಸಬೇಕು ಎಂದು ಗುಡ್ರಿಚ್ ಏರೋಸ್ಪೇಸ್ ಸರ್ವಿಸಸ್ನ ಉಪಾಧ್ಯಕ್ಷ ಕ್ರಿಸ್ ರಾವ್ ಸಲಹೆ ನೀಡಿದರು.<br /> <br /> ಜಾಗತಿಕ ಹೂಡಿಕೆದಾರರ ಸಮಾವೇಶದ ಎರಡನೆಯ ದಿನವಾದ ಶುಕ್ರವಾರ ಆಯೋಜಿಸಿದ್ದ `ವೈಮಾನಿಕ ಹಾಗೂ ರಕ್ಷಣಾ ಕ್ಷೇತ್ರದಲ್ಲಿ ಹೂಡಿಕೆಗೆ ಇರುವ ಅವಕಾಶಗಳು~ ಕುರಿತ ಸಭೆಯಲ್ಲಿ ಮಾತನಾಡಿದ ಅವರು, `ವೈಮಾನಿಕ ಹಾಗೂ ರಕ್ಷಣಾ ಕ್ಷೇತ್ರದ ವಹಿವಾಟಿನಲ್ಲಿ ಜಾಗತಿಕ ಮಟ್ಟದಲ್ಲಿ ಭಾರತದ ಪಾಲು ಶೇಕಡ 1ರಷ್ಟು ಮಾತ್ರ. ವಿಶ್ವದ ಎಲ್ಲ ರಾಷ್ಟ್ರಗಳು ರಕ್ಷಣಾ ಸಾಮಗ್ರಿಗಳ ಖರೀದಿಗೆ ವಿನಿಯೋಗಿಸುವ ಒಟ್ಟು ಮೊತ್ತದಲ್ಲಿ ಭಾರತದ ಪಾಲು ಶೇಕಡ 2ರಷ್ಟು ಮಾತ್ರ~ ಎಂದು ತಿಳಿಸಿದರು.<br /> <br /> ದೇಶದಲ್ಲಿ ಅಗತ್ಯ ಮಾನವ ಸಂಪನ್ಮೂಲ, ಕೌಶಲ್ಯ ಇದೆ. ಆದರೆ ಐರೋಪ್ಯ ರಾಷ್ಟ್ರಗಳ ಜೊತೆ ಸ್ಪರ್ಧಿಸಲು ಈಗಿರುವ ಸಂಪನ್ಮೂಲ ಸಾಲದು. ಕರ್ನಾಟಕ ಕೂಡ ಈ ಕ್ಷೇತ್ರಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಸಂಶೋಧನೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.<br /> <br /> ಪ್ರಯಾಣಿಕ ವಿಮಾನಗಳು ಹಾಗೂ ಯುದ್ಧ ವಿಮಾನಗಳಿಗೆ ಬೇಡಿಕೆ ಪ್ರತಿ ವರ್ಷ ಹೆಚ್ಚುತ್ತಿದೆ. ಆದರೆ ಈ ಕ್ಷೇತ್ರದಲ್ಲಿ ಪ್ರತಿಭಾವಂತ ತಂತ್ರಜ್ಞರ ಕೊರತೆ ಎದುರಾಗಿದೆ ಎಂದು ಅವರು ವಿವರಿಸಿದರು.<br /> <br /> `ಅಮೆರಿಕ ಹಾಗೂ ಐರೋಪ್ಯ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ, ಭಾರತದಲ್ಲಿ ವಿಮಾನದ ಬಳಕೆ ತೀರಾ ಕಡಿಮೆ. ದೇಶದ ಆರ್ಥಿಕತೆ ಬೆಳೆದಂತೆ ಇಲ್ಲಿನ ವೈಮಾನಿಕ ಕ್ಷೇತ್ರದಲ್ಲೂ ಭಾರಿ ಪ್ರಮಾಣದ ಬೆಳವಣಿಗೆ ಕಂಡುಬರಲಿದೆ~ ಎಂದು ಏರ್ಬಸ್ ಕಂಪೆನಿಯ ಭಾರತದ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಡೇವಿಡ್ ಡಫ್ರಿನಾಯ್ಸ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ವೈಮಾನಿಕ ಕ್ಷೇತ್ರದಲ್ಲಿ ಜಾಗತಿಕ ಸ್ಪರ್ಧೆ ಎದುರಿಸಲು ಭಾರತ, ಶ್ರೇಷ್ಠ ದರ್ಜೆಯ ವಿಶ್ವವಿದ್ಯಾಲಯಗಳು ಹಾಗೂ ಸಂಶೋಧನಾ ಸಂಸ್ಥೆಗಳನ್ನು ಸ್ಥಾಪಿಸಬೇಕು ಎಂದು ಗುಡ್ರಿಚ್ ಏರೋಸ್ಪೇಸ್ ಸರ್ವಿಸಸ್ನ ಉಪಾಧ್ಯಕ್ಷ ಕ್ರಿಸ್ ರಾವ್ ಸಲಹೆ ನೀಡಿದರು.<br /> <br /> ಜಾಗತಿಕ ಹೂಡಿಕೆದಾರರ ಸಮಾವೇಶದ ಎರಡನೆಯ ದಿನವಾದ ಶುಕ್ರವಾರ ಆಯೋಜಿಸಿದ್ದ `ವೈಮಾನಿಕ ಹಾಗೂ ರಕ್ಷಣಾ ಕ್ಷೇತ್ರದಲ್ಲಿ ಹೂಡಿಕೆಗೆ ಇರುವ ಅವಕಾಶಗಳು~ ಕುರಿತ ಸಭೆಯಲ್ಲಿ ಮಾತನಾಡಿದ ಅವರು, `ವೈಮಾನಿಕ ಹಾಗೂ ರಕ್ಷಣಾ ಕ್ಷೇತ್ರದ ವಹಿವಾಟಿನಲ್ಲಿ ಜಾಗತಿಕ ಮಟ್ಟದಲ್ಲಿ ಭಾರತದ ಪಾಲು ಶೇಕಡ 1ರಷ್ಟು ಮಾತ್ರ. ವಿಶ್ವದ ಎಲ್ಲ ರಾಷ್ಟ್ರಗಳು ರಕ್ಷಣಾ ಸಾಮಗ್ರಿಗಳ ಖರೀದಿಗೆ ವಿನಿಯೋಗಿಸುವ ಒಟ್ಟು ಮೊತ್ತದಲ್ಲಿ ಭಾರತದ ಪಾಲು ಶೇಕಡ 2ರಷ್ಟು ಮಾತ್ರ~ ಎಂದು ತಿಳಿಸಿದರು.<br /> <br /> ದೇಶದಲ್ಲಿ ಅಗತ್ಯ ಮಾನವ ಸಂಪನ್ಮೂಲ, ಕೌಶಲ್ಯ ಇದೆ. ಆದರೆ ಐರೋಪ್ಯ ರಾಷ್ಟ್ರಗಳ ಜೊತೆ ಸ್ಪರ್ಧಿಸಲು ಈಗಿರುವ ಸಂಪನ್ಮೂಲ ಸಾಲದು. ಕರ್ನಾಟಕ ಕೂಡ ಈ ಕ್ಷೇತ್ರಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಸಂಶೋಧನೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.<br /> <br /> ಪ್ರಯಾಣಿಕ ವಿಮಾನಗಳು ಹಾಗೂ ಯುದ್ಧ ವಿಮಾನಗಳಿಗೆ ಬೇಡಿಕೆ ಪ್ರತಿ ವರ್ಷ ಹೆಚ್ಚುತ್ತಿದೆ. ಆದರೆ ಈ ಕ್ಷೇತ್ರದಲ್ಲಿ ಪ್ರತಿಭಾವಂತ ತಂತ್ರಜ್ಞರ ಕೊರತೆ ಎದುರಾಗಿದೆ ಎಂದು ಅವರು ವಿವರಿಸಿದರು.<br /> <br /> `ಅಮೆರಿಕ ಹಾಗೂ ಐರೋಪ್ಯ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ, ಭಾರತದಲ್ಲಿ ವಿಮಾನದ ಬಳಕೆ ತೀರಾ ಕಡಿಮೆ. ದೇಶದ ಆರ್ಥಿಕತೆ ಬೆಳೆದಂತೆ ಇಲ್ಲಿನ ವೈಮಾನಿಕ ಕ್ಷೇತ್ರದಲ್ಲೂ ಭಾರಿ ಪ್ರಮಾಣದ ಬೆಳವಣಿಗೆ ಕಂಡುಬರಲಿದೆ~ ಎಂದು ಏರ್ಬಸ್ ಕಂಪೆನಿಯ ಭಾರತದ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಡೇವಿಡ್ ಡಫ್ರಿನಾಯ್ಸ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>