<p>ಬೆಂಗಳೂರು: `ಶಿಕ್ಷಣ ವ್ಯವಸ್ಥೆಯಲ್ಲಿ ವಿಶ್ವದರ್ಜೆಯ ಪ್ರಾಧ್ಯಾಪಕರು ರೂಪುಗೊಳ್ಳದೇ ಹೋದರೆ ಉತ್ತಮ ವಿದ್ಯಾರ್ಥಿಗಳನ್ನು ನೀಡಲು ಸಾಧ್ಯವಿಲ್ಲ. ಭಾರತೀಯ ವಿದ್ಯಾಭವನವು ವಿಶ್ವದರ್ಜೆಯ ಪ್ರಾಧ್ಯಾಪಕರನ್ನು ರೂಪುಗೊಳಿಸುವತ್ತ ಹೆಜ್ಜೆ ಇಡಬೇಕು~ ಎಂದು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವ ಎಂ.ವೀರಪ್ಪ ಮೊಯಿಲಿ ಸಲಹೆ ನೀಡಿದರು. <br /> <br /> ಭಾರತೀಯ ವಿದ್ಯಾಭವನವು ನಗರದಲ್ಲಿ ಶನಿವಾರ ಆಯೋಜಿಸಿದ್ದ ಭವನದ ಅಮೃತಮಹೋತ್ಸವ ಮತ್ತು ಸಂಸ್ಥಾಪಕ ಡಾ.ಕೆ.ಎಂ. ಮುನ್ಷಿ ಅವರ 125ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಹಿರಿಯ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ, `ವಿಶ್ವಕವಿ ಟ್ಯಾಗೋರ್ ಸ್ಥಾಪಿಸಿದ `ಶಾಂತಿನಿಕೇತನ~ ದಂತಹ ಶಿಕ್ಷಣ ಸಂಸ್ಥೆಯು ಆರಂಭದಲ್ಲಿದ್ದ ವರ್ಚಸ್ಸನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಮುನ್ಷಿ ಅವರು ಸ್ಥಾಪಿಸಿರುವ ವಿದ್ಯಾಭವನವು 75 ವರ್ಷಗಳ ನಂತರವೂ ದಿನಹೊಸ ಬಗೆಯ ಚಿಂತನೆಗೆ ಪ್ರೇರಣೆಯಾಗುತ್ತಿದೆ~ ಎಂದು ಬಣ್ಣಿಸಿದರು.<br /> <br /> ಕನ್ನಡಕ್ಕೆ ಅನುವಾದಗೊಂಡಿರುವ ಮುನ್ಷಿ ಅವರ 26 ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ವಿದ್ಯಾಭವನದ ಲೋಗೋವನ್ನು ಲೋಕಾರ್ಪಣೆ ಮಾಡಲಾಯಿತು. ಹಿರಿಯ ನಟಿ ಬಿ.ಸರೋಜಾ ದೇವಿ, ಅನುವಾದಕ ಪ್ರೊ.ಎ.ವಿ.ನರಸಿಂಹಮೂರ್ತಿ, ವಿದ್ಯಾಭವನದ ಅಧ್ಯಕ್ಷ ಎನ್.ರಾಮಾನುಜ ಇತರರು ಇದ್ದರು.</p>.<p><strong>`ಅತಂತ್ರದೆಡೆಗೆ ಹೆಜ್ಜೆ~</strong></p>.<p>`ಭ್ರಷ್ಟಾಚಾರವನ್ನು ಮುಂದುವರಿಸುವ ಸಲುವಾಗಿಯೇ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿರುವ ಬೆಳವಣಿಗೆಯೇ ರಾಜ್ಯದಲ್ಲಿ ಬಿಜೆಪಿಯು ಅತಂತ್ರದಿಂದ ಅತಂತ್ರದೆಡೆಗೆ ತೆರಳುತ್ತಿದೆ ಎಂಬುದರ ಸೂಚಕ~ ಎಂದು ಸಚಿವ ವೀರಪ್ಪ ಮೊಯಿಲಿ ಅವರು ವಿಶ್ಲೇಷಿಸಿದರು.<br /> <br /> ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಮುಖ್ಯಮಂತ್ರಿ ಬದಲಾವಣೆ ಬಿಜೆಪಿ ಪಕ್ಷದ ಹೈಕಮಾಂಡ್ಗೆ ಬಿಟ್ಟಿರುವ ವಿಚಾರ. ಆದರೆ ಅರ್ಹತೆಯನ್ನು ಬದಿಗಿಟ್ಟು ಜಾತಿಯನ್ನೇ ಬಂಡವಾಳ ಮಾಡಿಕೊಂಡು ಮುಖ್ಯಮಂತ್ರಿಯನ್ನು ಬದಲಾಯಿಸಲಾಗುತ್ತಿದೆ. ರಾಜ್ಯದ ಅಭಿವೃದ್ಧಿಗೆ ಒತ್ತು ನೀಡದ ಬಿಜೆಪಿ ಸರ್ಕಾರ ಜನರಿಗೆ ಅನ್ಯಾಯ ಮಾಡುತ್ತಿದೆ~ ಎಂದು ದೂರಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಶಿಕ್ಷಣ ವ್ಯವಸ್ಥೆಯಲ್ಲಿ ವಿಶ್ವದರ್ಜೆಯ ಪ್ರಾಧ್ಯಾಪಕರು ರೂಪುಗೊಳ್ಳದೇ ಹೋದರೆ ಉತ್ತಮ ವಿದ್ಯಾರ್ಥಿಗಳನ್ನು ನೀಡಲು ಸಾಧ್ಯವಿಲ್ಲ. ಭಾರತೀಯ ವಿದ್ಯಾಭವನವು ವಿಶ್ವದರ್ಜೆಯ ಪ್ರಾಧ್ಯಾಪಕರನ್ನು ರೂಪುಗೊಳಿಸುವತ್ತ ಹೆಜ್ಜೆ ಇಡಬೇಕು~ ಎಂದು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವ ಎಂ.ವೀರಪ್ಪ ಮೊಯಿಲಿ ಸಲಹೆ ನೀಡಿದರು. <br /> <br /> ಭಾರತೀಯ ವಿದ್ಯಾಭವನವು ನಗರದಲ್ಲಿ ಶನಿವಾರ ಆಯೋಜಿಸಿದ್ದ ಭವನದ ಅಮೃತಮಹೋತ್ಸವ ಮತ್ತು ಸಂಸ್ಥಾಪಕ ಡಾ.ಕೆ.ಎಂ. ಮುನ್ಷಿ ಅವರ 125ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಹಿರಿಯ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ, `ವಿಶ್ವಕವಿ ಟ್ಯಾಗೋರ್ ಸ್ಥಾಪಿಸಿದ `ಶಾಂತಿನಿಕೇತನ~ ದಂತಹ ಶಿಕ್ಷಣ ಸಂಸ್ಥೆಯು ಆರಂಭದಲ್ಲಿದ್ದ ವರ್ಚಸ್ಸನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಮುನ್ಷಿ ಅವರು ಸ್ಥಾಪಿಸಿರುವ ವಿದ್ಯಾಭವನವು 75 ವರ್ಷಗಳ ನಂತರವೂ ದಿನಹೊಸ ಬಗೆಯ ಚಿಂತನೆಗೆ ಪ್ರೇರಣೆಯಾಗುತ್ತಿದೆ~ ಎಂದು ಬಣ್ಣಿಸಿದರು.<br /> <br /> ಕನ್ನಡಕ್ಕೆ ಅನುವಾದಗೊಂಡಿರುವ ಮುನ್ಷಿ ಅವರ 26 ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ವಿದ್ಯಾಭವನದ ಲೋಗೋವನ್ನು ಲೋಕಾರ್ಪಣೆ ಮಾಡಲಾಯಿತು. ಹಿರಿಯ ನಟಿ ಬಿ.ಸರೋಜಾ ದೇವಿ, ಅನುವಾದಕ ಪ್ರೊ.ಎ.ವಿ.ನರಸಿಂಹಮೂರ್ತಿ, ವಿದ್ಯಾಭವನದ ಅಧ್ಯಕ್ಷ ಎನ್.ರಾಮಾನುಜ ಇತರರು ಇದ್ದರು.</p>.<p><strong>`ಅತಂತ್ರದೆಡೆಗೆ ಹೆಜ್ಜೆ~</strong></p>.<p>`ಭ್ರಷ್ಟಾಚಾರವನ್ನು ಮುಂದುವರಿಸುವ ಸಲುವಾಗಿಯೇ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿರುವ ಬೆಳವಣಿಗೆಯೇ ರಾಜ್ಯದಲ್ಲಿ ಬಿಜೆಪಿಯು ಅತಂತ್ರದಿಂದ ಅತಂತ್ರದೆಡೆಗೆ ತೆರಳುತ್ತಿದೆ ಎಂಬುದರ ಸೂಚಕ~ ಎಂದು ಸಚಿವ ವೀರಪ್ಪ ಮೊಯಿಲಿ ಅವರು ವಿಶ್ಲೇಷಿಸಿದರು.<br /> <br /> ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಮುಖ್ಯಮಂತ್ರಿ ಬದಲಾವಣೆ ಬಿಜೆಪಿ ಪಕ್ಷದ ಹೈಕಮಾಂಡ್ಗೆ ಬಿಟ್ಟಿರುವ ವಿಚಾರ. ಆದರೆ ಅರ್ಹತೆಯನ್ನು ಬದಿಗಿಟ್ಟು ಜಾತಿಯನ್ನೇ ಬಂಡವಾಳ ಮಾಡಿಕೊಂಡು ಮುಖ್ಯಮಂತ್ರಿಯನ್ನು ಬದಲಾಯಿಸಲಾಗುತ್ತಿದೆ. ರಾಜ್ಯದ ಅಭಿವೃದ್ಧಿಗೆ ಒತ್ತು ನೀಡದ ಬಿಜೆಪಿ ಸರ್ಕಾರ ಜನರಿಗೆ ಅನ್ಯಾಯ ಮಾಡುತ್ತಿದೆ~ ಎಂದು ದೂರಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>