<p><strong>ಶನಿವಾರಸಂತೆ</strong>: ಇಲ್ಲಿಯ ಅನೇಕ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿದ್ದಾರೆ. ಇದೀಗ ಅಂಥವರ ಸಾಲಿಗೆ ಪವಿತ್ರ ಹೃದಯ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಸೇರ್ಪಡೆಯಾಗಿದ್ದಾರೆ.<br /> <br /> ಎಸ್.ಕೆ. ಜನನಿ ಮತ್ತು ಎನ್.ಪಿ. ಶಾಲಿನಿ ಷಟಲ್ ಬ್ಯಾಡ್ಮಿಂಟನ್ ಕ್ರೀಡಾ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಡಿ. 5ರಂದು ಗುರುವಾರ ಚಂಡೀಘಡದಲ್ಲಿ ಆರಂಭವಾದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ.<br /> <br /> ಗ್ರಾಮ ಪಂಚಾಯಿತಿ ಸದಸ್ಯ ಆರ್.ವಿ. ಕುಮಾರ್ ಮತ್ತು ಸುಮತಿ ದಂಪತಿಯ ಪುತ್ರಿ ಎಸ್.ಕೆ. ಜನನಿ. ಶಿಕ್ಷಕ ಸಿ.ಎಲ್. ಪುಟ್ಟರಾಜು ಮತ್ತು ಮಂಜುಳಾ ದಂಪತಿಯ ಪುತ್ರಿ ಎನ್.ಪಿ. ಶಾಲಿನಿ ಸತತ 3 ವರ್ಷಗಳಿಂದ ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟದ ಪ್ರಶಸ್ತಿಗಳು, ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಗಣರಾಜ್ಯೋತ್ಸವ ಪ್ರಶಸ್ತಿ, ವಿಭಾಗ ಮಟ್ಟದಲ್ಲಿ ಪ್ರಥಮ, ರಾಜ್ಯಮಟ್ಟದ ಡಬಲ್ಸ್ನಲ್ಲಿ ಪ್ರಥಮ, ಸಿಂಗಲ್ಸ್ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.<br /> <br /> 2013–14ರ ಸಾಲಿನ ಶಿಕ್ಷಣ ಇಲಾಖೆ ನಡೆಸುವ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ನಡೆಸುವ ಸ್ಪರ್ಧೆಯಲ್ಲಿ ಜಿಲ್ಲೆಗೆ. ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.<br /> <br /> ಶನಿವಾರಸಂತೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಈ ಇಬ್ಬರು ಕ್ರೀಡಾಪ್ರತಿಭೆಗಳನ್ನು ಗುರುತಿಸಿ ₨ 7 ಸಾವಿರ ಮೌಲ್ಯದ ಷಟಲ್ ಬ್ಯಾಡ್ಮಿಂಟನ್ ರ್ಯಾಕೆಟ್ಗಳನ್ನು ನೀಡಿ ಗೌರವಿಸಿದ್ದಾರೆ. ಆದರೆ, ಜಿಲ್ಲಾಡಳಿತ ತಮಗೆ ಪ್ರೋತ್ಸಾಹ ನೀಡಲಿಲ್ಲ ಎಂದು ವಿದ್ಯಾರ್ಥಿನಿಯರಿಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.<br /> <br /> ಕ್ರೀಡಾರಂಗದಲ್ಲಿ ಮಿನುಗುತ್ತಿರುವ ಈ ಪುಟ್ಟ ಕ್ರೀಡಾ ಪ್ರತಿಭೆಗಳನ್ನು ಜಿಲ್ಲಾಡಳಿತ ಗುರುತಿಸಿ ಗೌರವಿಸಿದರೆ ಮುಂದೆ ಅಂತರರಾಷ್ಟ್ರೀಯ ಮಟ್ಟದಲ್ಲೂ ಮಿನುಗುವ ಸಾಧ್ಯತೆ ಇದೆ ಎನ್ನುತ್ತಾರೆ ನಾಗರಿಕರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶನಿವಾರಸಂತೆ</strong>: ಇಲ್ಲಿಯ ಅನೇಕ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿದ್ದಾರೆ. ಇದೀಗ ಅಂಥವರ ಸಾಲಿಗೆ ಪವಿತ್ರ ಹೃದಯ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಸೇರ್ಪಡೆಯಾಗಿದ್ದಾರೆ.<br /> <br /> ಎಸ್.ಕೆ. ಜನನಿ ಮತ್ತು ಎನ್.ಪಿ. ಶಾಲಿನಿ ಷಟಲ್ ಬ್ಯಾಡ್ಮಿಂಟನ್ ಕ್ರೀಡಾ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಡಿ. 5ರಂದು ಗುರುವಾರ ಚಂಡೀಘಡದಲ್ಲಿ ಆರಂಭವಾದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ.<br /> <br /> ಗ್ರಾಮ ಪಂಚಾಯಿತಿ ಸದಸ್ಯ ಆರ್.ವಿ. ಕುಮಾರ್ ಮತ್ತು ಸುಮತಿ ದಂಪತಿಯ ಪುತ್ರಿ ಎಸ್.ಕೆ. ಜನನಿ. ಶಿಕ್ಷಕ ಸಿ.ಎಲ್. ಪುಟ್ಟರಾಜು ಮತ್ತು ಮಂಜುಳಾ ದಂಪತಿಯ ಪುತ್ರಿ ಎನ್.ಪಿ. ಶಾಲಿನಿ ಸತತ 3 ವರ್ಷಗಳಿಂದ ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟದ ಪ್ರಶಸ್ತಿಗಳು, ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಗಣರಾಜ್ಯೋತ್ಸವ ಪ್ರಶಸ್ತಿ, ವಿಭಾಗ ಮಟ್ಟದಲ್ಲಿ ಪ್ರಥಮ, ರಾಜ್ಯಮಟ್ಟದ ಡಬಲ್ಸ್ನಲ್ಲಿ ಪ್ರಥಮ, ಸಿಂಗಲ್ಸ್ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.<br /> <br /> 2013–14ರ ಸಾಲಿನ ಶಿಕ್ಷಣ ಇಲಾಖೆ ನಡೆಸುವ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ನಡೆಸುವ ಸ್ಪರ್ಧೆಯಲ್ಲಿ ಜಿಲ್ಲೆಗೆ. ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.<br /> <br /> ಶನಿವಾರಸಂತೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಈ ಇಬ್ಬರು ಕ್ರೀಡಾಪ್ರತಿಭೆಗಳನ್ನು ಗುರುತಿಸಿ ₨ 7 ಸಾವಿರ ಮೌಲ್ಯದ ಷಟಲ್ ಬ್ಯಾಡ್ಮಿಂಟನ್ ರ್ಯಾಕೆಟ್ಗಳನ್ನು ನೀಡಿ ಗೌರವಿಸಿದ್ದಾರೆ. ಆದರೆ, ಜಿಲ್ಲಾಡಳಿತ ತಮಗೆ ಪ್ರೋತ್ಸಾಹ ನೀಡಲಿಲ್ಲ ಎಂದು ವಿದ್ಯಾರ್ಥಿನಿಯರಿಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.<br /> <br /> ಕ್ರೀಡಾರಂಗದಲ್ಲಿ ಮಿನುಗುತ್ತಿರುವ ಈ ಪುಟ್ಟ ಕ್ರೀಡಾ ಪ್ರತಿಭೆಗಳನ್ನು ಜಿಲ್ಲಾಡಳಿತ ಗುರುತಿಸಿ ಗೌರವಿಸಿದರೆ ಮುಂದೆ ಅಂತರರಾಷ್ಟ್ರೀಯ ಮಟ್ಟದಲ್ಲೂ ಮಿನುಗುವ ಸಾಧ್ಯತೆ ಇದೆ ಎನ್ನುತ್ತಾರೆ ನಾಗರಿಕರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>