<p><strong>ನವದೆಹಲಿ (ಪಿಟಿಐ):</strong> ಅಮಿತ್ ಷಾ ಅವರು ಬಿಜೆಪಿ ಅಧ್ಯಕ್ಷರಾಗಿ ಎರಡನೇ ಅವಧಿಗೂ ಅವಿರೋಧ ಆಯ್ಕೆಯಾಗಿದ್ದಾರೆ. ಭಾನುವಾರ ಆಯ್ಕೆ ಪ್ರಕ್ರಿಯೆ ನಡೆಯಿತು. ಸ್ವತಃ ಪ್ರಧಾನಿ ಮೋದಿ, ಕೇಂದ್ರ ಸಂಪುಟದ ಹಿರಿಯ ಸಚಿವರು ಮತ್ತು ಬಿಜೆಪಿ ಆಡಳಿತದಲ್ಲಿ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಷಾ ಹೆಸರನ್ನು ಸೂಚಿಸಿದ್ದರು.<br /> <br /> ಮೋದಿ, ಪಕ್ಷದ ಪ್ರಭಾವಿ ನಾಯಕರು ಮತ್ತು ಆರ್ಎಸ್ಎಸ್ ಪ್ರಮುಖರು ಷಾ ಅವರೇ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಬಯಸಿದ್ದರಿಂದ ಬೇರೆ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ.<br /> <br /> <strong>ಅಡ್ವಾಣಿ, ಜೋಶಿ ಗೈರು: </strong>ಅಮಿತ್ ಷಾ ಅವರ ಕಾರ್ಯವೈಖರಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಪಕ್ಷದ ಹಿರಿಯ ಧುರೀಣರಾದ ಎಲ್. ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಚುನಾವಣೆ ಸಂದರ್ಭದಲ್ಲಿ ಗೈರು ಹಾಜರಿದ್ದರು.<br /> <br /> 2014ರ ಮೇನಲ್ಲಿ ರಾಜನಾಥ್ ಸಿಂಗ್ ಅವರು ಮೋದಿ ಸಂಪುಟ ಸೇರಿದ ನಂತರ ಮೂರು ವರ್ಷಗಳ ಅವಧಿಯ ಉಳಿದ ಭಾಗಕ್ಕೆ ಷಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಈಗ ಪುನರಾಯ್ಕೆ ಆಗಿರುವುದರಿಂದ 3 ವರ್ಷಗಳ ಅಧ್ಯಕ್ಷರಾಗಿ ಇರುತ್ತಾರೆ.<br /> <br /> <strong>ಅಡ್ವಾಣಿ ಆಶೀರ್ವಾದ:</strong> ಅಮಿತ್ ಷಾ ಅವರು ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು. ಇನ್ನೊಬ್ಬ ಹಿರಿಯ ಮುಖಂಡ ಮುರಳಿ ಮನೋಹರ್ ಜೋಷಿ ಪಶ್ಚಿಮ ಬಂಗಾಳದಿಂದ ವಾಪಸ್ ಆದ ಮೇಲೆ ಅವರನ್ನು ಷಾ ಭೇಟಿ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.<br /> <br /> <strong>ಮೋದಿ ಅಭಿನಂದನೆ:</strong> ಹಂತಹಂತವಾಗಿ ಮೇಲೆ ಬಂದಿರುವ ಷಾ ಅವರಿಗೆ ಅಪಾರ ಸಂಘಟನಾ ಅನುಭವವಿದೆ ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಅಮಿತ್ ಷಾ ಅವರು ಬಿಜೆಪಿ ಅಧ್ಯಕ್ಷರಾಗಿ ಎರಡನೇ ಅವಧಿಗೂ ಅವಿರೋಧ ಆಯ್ಕೆಯಾಗಿದ್ದಾರೆ. ಭಾನುವಾರ ಆಯ್ಕೆ ಪ್ರಕ್ರಿಯೆ ನಡೆಯಿತು. ಸ್ವತಃ ಪ್ರಧಾನಿ ಮೋದಿ, ಕೇಂದ್ರ ಸಂಪುಟದ ಹಿರಿಯ ಸಚಿವರು ಮತ್ತು ಬಿಜೆಪಿ ಆಡಳಿತದಲ್ಲಿ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಷಾ ಹೆಸರನ್ನು ಸೂಚಿಸಿದ್ದರು.<br /> <br /> ಮೋದಿ, ಪಕ್ಷದ ಪ್ರಭಾವಿ ನಾಯಕರು ಮತ್ತು ಆರ್ಎಸ್ಎಸ್ ಪ್ರಮುಖರು ಷಾ ಅವರೇ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಬಯಸಿದ್ದರಿಂದ ಬೇರೆ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ.<br /> <br /> <strong>ಅಡ್ವಾಣಿ, ಜೋಶಿ ಗೈರು: </strong>ಅಮಿತ್ ಷಾ ಅವರ ಕಾರ್ಯವೈಖರಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಪಕ್ಷದ ಹಿರಿಯ ಧುರೀಣರಾದ ಎಲ್. ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಚುನಾವಣೆ ಸಂದರ್ಭದಲ್ಲಿ ಗೈರು ಹಾಜರಿದ್ದರು.<br /> <br /> 2014ರ ಮೇನಲ್ಲಿ ರಾಜನಾಥ್ ಸಿಂಗ್ ಅವರು ಮೋದಿ ಸಂಪುಟ ಸೇರಿದ ನಂತರ ಮೂರು ವರ್ಷಗಳ ಅವಧಿಯ ಉಳಿದ ಭಾಗಕ್ಕೆ ಷಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಈಗ ಪುನರಾಯ್ಕೆ ಆಗಿರುವುದರಿಂದ 3 ವರ್ಷಗಳ ಅಧ್ಯಕ್ಷರಾಗಿ ಇರುತ್ತಾರೆ.<br /> <br /> <strong>ಅಡ್ವಾಣಿ ಆಶೀರ್ವಾದ:</strong> ಅಮಿತ್ ಷಾ ಅವರು ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು. ಇನ್ನೊಬ್ಬ ಹಿರಿಯ ಮುಖಂಡ ಮುರಳಿ ಮನೋಹರ್ ಜೋಷಿ ಪಶ್ಚಿಮ ಬಂಗಾಳದಿಂದ ವಾಪಸ್ ಆದ ಮೇಲೆ ಅವರನ್ನು ಷಾ ಭೇಟಿ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.<br /> <br /> <strong>ಮೋದಿ ಅಭಿನಂದನೆ:</strong> ಹಂತಹಂತವಾಗಿ ಮೇಲೆ ಬಂದಿರುವ ಷಾ ಅವರಿಗೆ ಅಪಾರ ಸಂಘಟನಾ ಅನುಭವವಿದೆ ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>