<p><strong>ರಾಜರಾಜೇಶ್ವರಿನಗರ</strong>: `ನಿತ್ಯ ವಿಷಯುಕ್ತ ಆಹಾರ, ನೀರು, ಗಾಳಿ ಸೇವನೆ ಮಾಡುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಮಾನವ ಕುಲಕ್ಕೆ ಅಪಾಯಕಾರಿ ಪರಿಸ್ಥಿತಿ ಬಂದೊದಗಲಿದೆ~ ಎಂದು ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಆತಂಕ ವ್ಯಕ್ತಪಡಿಸಿದರು.<br /> <br /> ಸ್ನೇಹರಂಗ, ಗ್ರಾಮೀಣ ನ್ಯಾಚುರಲ್, ರಾಜರಾಜೇಶ್ವರಿನಗರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ರಾಜರಾಜೇಶ್ವರಿನಗರದಲ್ಲಿ ಹಮ್ಮಿಕೊಂಡಿದ್ದ `ಸಂಕ್ರಾಂತಿ ಸಂತೆ~ಗೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> `ಮಾನವನ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳನ್ನು ತಡೆಯಲು ಸರ್ಕಾರ ರಾಸಾಯನಿಕ ಗೊಬ್ಬರ ತಿರಸ್ಕರಿಸಿ ನೈಸರ್ಗಿಕ ಬೆಳೆಗಳನ್ನು ಬೆಳೆಯಲು ಅವಕಾಶ ಮಾಡಕೊಡಬೇಕು~ ಎಂದು ಮನವಿ ಮಾಡಿದರು.<br /> <br /> ಪಾಲಿಕೆಯ ಬೃಹತ್ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಎಚ್. ರಾಮಚಂದ್ರ, `ಯುವ ಪೀಳಿಗೆ ಗ್ರಾಮೀಣ ಸಂಸ್ಕೃತಿ, ಕಲೆ, ಹಬ್ಬಗಳನ್ನು ಮರೆಯುತ್ತಿರುವುದರಿಂದ ಎಲ್ಲ ಜನರನ್ನು ಒಟ್ಟಿಗೆ ಬೆಸೆಯುವ ಮೂಲಕ ನೈಸರ್ಗಿಕವಾಗಿ ಬೆಳೆದಿರುವ ಆಹಾರ ಪದಾರ್ಥಗಳನ್ನು ಪರಿಚಯಿಸಲು ಸಂಕ್ರಾಂತಿ ಸಂತೆ ಹಮ್ಮಿಕೊಳ್ಳಲಾಗಿದೆ~ ಎಂದರು.<br /> <br /> ಸ್ನೇಹರಂಗ ಅಧ್ಯಕ್ಷ ಟಿ.ರಘು, ಗ್ರಾಮೀಣ ನ್ಯಾಚುರಲ್ ಮುಖ್ಯಸ್ಥ ಎಂ.ಎಸ್.ಶ್ರೀಧರಮೂರ್ತಿ, ಚಿತ್ರ ಕಲಾವಿದ ಬಾಬುರಾವ್ ಮಾರ್ಕಂಡೇಯ, ಸಂಗೀತ ನಿರ್ದೇಶಕ ಬಿ.ವಿ. ಶ್ರೀನಿವಾಸ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ</strong>: `ನಿತ್ಯ ವಿಷಯುಕ್ತ ಆಹಾರ, ನೀರು, ಗಾಳಿ ಸೇವನೆ ಮಾಡುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಮಾನವ ಕುಲಕ್ಕೆ ಅಪಾಯಕಾರಿ ಪರಿಸ್ಥಿತಿ ಬಂದೊದಗಲಿದೆ~ ಎಂದು ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಆತಂಕ ವ್ಯಕ್ತಪಡಿಸಿದರು.<br /> <br /> ಸ್ನೇಹರಂಗ, ಗ್ರಾಮೀಣ ನ್ಯಾಚುರಲ್, ರಾಜರಾಜೇಶ್ವರಿನಗರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ರಾಜರಾಜೇಶ್ವರಿನಗರದಲ್ಲಿ ಹಮ್ಮಿಕೊಂಡಿದ್ದ `ಸಂಕ್ರಾಂತಿ ಸಂತೆ~ಗೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> `ಮಾನವನ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳನ್ನು ತಡೆಯಲು ಸರ್ಕಾರ ರಾಸಾಯನಿಕ ಗೊಬ್ಬರ ತಿರಸ್ಕರಿಸಿ ನೈಸರ್ಗಿಕ ಬೆಳೆಗಳನ್ನು ಬೆಳೆಯಲು ಅವಕಾಶ ಮಾಡಕೊಡಬೇಕು~ ಎಂದು ಮನವಿ ಮಾಡಿದರು.<br /> <br /> ಪಾಲಿಕೆಯ ಬೃಹತ್ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಎಚ್. ರಾಮಚಂದ್ರ, `ಯುವ ಪೀಳಿಗೆ ಗ್ರಾಮೀಣ ಸಂಸ್ಕೃತಿ, ಕಲೆ, ಹಬ್ಬಗಳನ್ನು ಮರೆಯುತ್ತಿರುವುದರಿಂದ ಎಲ್ಲ ಜನರನ್ನು ಒಟ್ಟಿಗೆ ಬೆಸೆಯುವ ಮೂಲಕ ನೈಸರ್ಗಿಕವಾಗಿ ಬೆಳೆದಿರುವ ಆಹಾರ ಪದಾರ್ಥಗಳನ್ನು ಪರಿಚಯಿಸಲು ಸಂಕ್ರಾಂತಿ ಸಂತೆ ಹಮ್ಮಿಕೊಳ್ಳಲಾಗಿದೆ~ ಎಂದರು.<br /> <br /> ಸ್ನೇಹರಂಗ ಅಧ್ಯಕ್ಷ ಟಿ.ರಘು, ಗ್ರಾಮೀಣ ನ್ಯಾಚುರಲ್ ಮುಖ್ಯಸ್ಥ ಎಂ.ಎಸ್.ಶ್ರೀಧರಮೂರ್ತಿ, ಚಿತ್ರ ಕಲಾವಿದ ಬಾಬುರಾವ್ ಮಾರ್ಕಂಡೇಯ, ಸಂಗೀತ ನಿರ್ದೇಶಕ ಬಿ.ವಿ. ಶ್ರೀನಿವಾಸ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>