<p><strong>ಹೆಡ್ಲಿಗೆ ಅಭಿನಂದನೆ ಸಲ್ಲಿಸಿದ್ದ ಪತ್ನಿ<br /> ನವದೆಹಲಿ (ಪಿಟಿಐ):</strong> ಮುಂಬೈ ಮೇಲಿನ ದಾಳಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಸಂಚುಕೋರರಲ್ಲಿ ಒಬ್ಬನಾದ ಪಾಕ್ ಮೂಲದ ಅಮೆರಿಕ ಪ್ರಜೆ ಡೇವಿಡ್ ಹೆಡ್ಲಿಗೆ ಆತನ ಪತ್ನಿ ಅಭಿನಂದನೆ ಸಲ್ಲಿಸಿದ್ದಳು. ರಾಷ್ಟ್ರೀಯ ತನಿಖಾ ದಳ (ಎನ್ಐಎ) ಇಲ್ಲಿನ ನ್ಯಾಯಾಲಯಕ್ಕೆ ಶನಿವಾರ ಈ ವಿಷಯವನ್ನು ತಿಳಿಸಿದೆ. <br /> <br /> `ನಾನು ಇಡೀ ದಿನ ಮುಂಬೈ ಮೇಲೆ ಉಗ್ರರು ನಡೆಸಿದ ದಾಳಿ ಹಾಗೂ ನಂತರ ಬೆಳವಣಿಗೆಯನ್ನು ಟೀವಿಯಲ್ಲಿ ವೀಕ್ಷಿಸಿದ್ದೇನೆ~ ಎಂದು ಆಕೆ ತಿಳಿಸಿದ್ದಾಳೆ ಎಂದು ತನಿಖಾ ಸಂಸ್ಥೆ ಹೇಳಿದೆ.<br /> <br /> <strong>ಬಾನೋಟ್, ಜಯಚಂದ್ರನ್ಗೆ ಜಾಮೀನು<br /> ನವದೆಹಲಿ (ಐಎಎನ್ಎಸ್):</strong> ಕಾಮನ್ವೆಲ್ತ್ ಕ್ರೀಡಾಕೂಟಗಳ (ಸಿಡಬ್ಲ್ಯುಜಿ) ಸಂಘಟನಾ ಸಮಿತಿಯ ಮಹಾ ಕಾರ್ಯದರ್ಶಿ ಲಲಿತ್ ಬಾನೋಟ್ ಮತ್ತು ಮಾಜಿ ಖಜಾಂಚಿ ಎಂ. ಜಯಚಂದ್ರನ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಶನಿವಾರ ಇಲ್ಲಿ ಜಾಮೀನು ಮಂಜೂರು ಮಾಡಿದೆ.<br /> <br /> ಸಂಘಟನಾ ಸಮಿತಿಯ ಮಾಜಿ ಅಧ್ಯಕ್ಷ ಸುರೇಶ್ ಕಲ್ಮಾಡಿ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಎರಡು ದಿನಗಳ ತರುವಾಯ ಈ ಇಬ್ಬರಿಗೂ ಸಿಬಿಐ ವಿಶೇಷ ನ್ಯಾಯಾಧೀಶ ತಲ್ವಂತ್ ಸಿಂಗ್ ಜಾಮೀನು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಡ್ಲಿಗೆ ಅಭಿನಂದನೆ ಸಲ್ಲಿಸಿದ್ದ ಪತ್ನಿ<br /> ನವದೆಹಲಿ (ಪಿಟಿಐ):</strong> ಮುಂಬೈ ಮೇಲಿನ ದಾಳಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಸಂಚುಕೋರರಲ್ಲಿ ಒಬ್ಬನಾದ ಪಾಕ್ ಮೂಲದ ಅಮೆರಿಕ ಪ್ರಜೆ ಡೇವಿಡ್ ಹೆಡ್ಲಿಗೆ ಆತನ ಪತ್ನಿ ಅಭಿನಂದನೆ ಸಲ್ಲಿಸಿದ್ದಳು. ರಾಷ್ಟ್ರೀಯ ತನಿಖಾ ದಳ (ಎನ್ಐಎ) ಇಲ್ಲಿನ ನ್ಯಾಯಾಲಯಕ್ಕೆ ಶನಿವಾರ ಈ ವಿಷಯವನ್ನು ತಿಳಿಸಿದೆ. <br /> <br /> `ನಾನು ಇಡೀ ದಿನ ಮುಂಬೈ ಮೇಲೆ ಉಗ್ರರು ನಡೆಸಿದ ದಾಳಿ ಹಾಗೂ ನಂತರ ಬೆಳವಣಿಗೆಯನ್ನು ಟೀವಿಯಲ್ಲಿ ವೀಕ್ಷಿಸಿದ್ದೇನೆ~ ಎಂದು ಆಕೆ ತಿಳಿಸಿದ್ದಾಳೆ ಎಂದು ತನಿಖಾ ಸಂಸ್ಥೆ ಹೇಳಿದೆ.<br /> <br /> <strong>ಬಾನೋಟ್, ಜಯಚಂದ್ರನ್ಗೆ ಜಾಮೀನು<br /> ನವದೆಹಲಿ (ಐಎಎನ್ಎಸ್):</strong> ಕಾಮನ್ವೆಲ್ತ್ ಕ್ರೀಡಾಕೂಟಗಳ (ಸಿಡಬ್ಲ್ಯುಜಿ) ಸಂಘಟನಾ ಸಮಿತಿಯ ಮಹಾ ಕಾರ್ಯದರ್ಶಿ ಲಲಿತ್ ಬಾನೋಟ್ ಮತ್ತು ಮಾಜಿ ಖಜಾಂಚಿ ಎಂ. ಜಯಚಂದ್ರನ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಶನಿವಾರ ಇಲ್ಲಿ ಜಾಮೀನು ಮಂಜೂರು ಮಾಡಿದೆ.<br /> <br /> ಸಂಘಟನಾ ಸಮಿತಿಯ ಮಾಜಿ ಅಧ್ಯಕ್ಷ ಸುರೇಶ್ ಕಲ್ಮಾಡಿ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಎರಡು ದಿನಗಳ ತರುವಾಯ ಈ ಇಬ್ಬರಿಗೂ ಸಿಬಿಐ ವಿಶೇಷ ನ್ಯಾಯಾಧೀಶ ತಲ್ವಂತ್ ಸಿಂಗ್ ಜಾಮೀನು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>