<p><strong>ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ</strong><br /> <strong>ಚೆನ್ನೈ(ಪಿಟಿಐ):</strong> ರಾಜ್ಯಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷದ ಅಭ್ಯರ್ಥಿ ಕನಿಮೊಳಿ ಅವರನ್ನು ಬೆಂಬಲಿಸುವುದಾಗಿ ಭರವಸೆ ನೀಡಿದ್ದ ಪಟ್ಟಾಳಿ ಮಕ್ಕಳ್ ಕಚ್ಚಿ(ಪಿಎಂಕೆ) ಪಕ್ಷ ಚುನಾವಣೆಯನ್ನು ಬಹಿಷ್ಕರಿಸುವ ಬೆದರಿಕೆ ಹಾಕಿ ಆಂತಕವನ್ನುಂಟು ಮಾಡಿದೆ.<br /> <br /> `ಪಿಎಂಕೆ ಪಕ್ಷದ ಕಾರ್ಯಕಾರಿಣಿಯಲ್ಲಿ ರಾಜ್ಯಸಭಾ ಚುನಾವಣೆಯನ್ನು ಬಹಿಷ್ಕರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ' ಎಂದು ಪಿಎಂಕೆ ಪ್ರಕಟಣೆಯಲ್ಲಿ ತಿಳಿಸಿದೆ.<br /> <br /> <strong>ಮೇವು ಹಗರಣ: ಜು. 15ಕ್ಕೆ ತೀರ್ಪು</strong><br /> <strong>ರಾಂಚಿ (ಐಎಎನ್ಎಸ್): </strong>ಬಿಹಾರದ ಮೇವು ಹಗರಣಕ್ಕೆ ಸಂಬಂಧಿಸಿದ ತೀರ್ಪು ಜುಲೈ 15ರಂದು ಪ್ರಕಟವಾಗಲಿದೆ. ಇದರಲ್ಲಿ ಪ್ರಮುಖ ಆರೋಪಿಗಳಾಗಿರುವ ಮಾಜಿ ಮುಖ್ಯ ಮಂತ್ರಿಗಳಾದ ಲಾಲೂ ಪ್ರಸಾದ್ ಮತ್ತು ಜಗನ್ನಾಥ್ ಮಿಶ್ರಾ ಅವರ ಹಣೆಬರಹ ಆ ದಿನ ನಿರ್ಧಾರವಾಗಲಿದೆ.<br /> <br /> <strong>ಮೊಯಿಲಿ ರಾಜೀನಾಮೆಗೆ ಸಿಪಿಐ ಆಗ್ರಹ</strong><br /> <strong>ನವದೆಹಲಿ (ಪಿಟಿಐ):</strong> ದೇಶದ ಹಿತಾಸಕ್ತಿಯನ್ನು ಬಲಿ ಕೊಟ್ಟು ಕಾರ್ಪೊರೇಟ್ ವಲಯಕ್ಕೆ ಲಾಭ ಮಾಡಿಕೊಡುವ ಉದ್ದೇಶದಿಂದ ನೈಸರ್ಗಿಕ ಅನಿಲದ ಬೆಲೆ ಹೆಚ್ಚಿಸುವ ಪ್ರಸ್ತಾಪ ಮಾಡಲಾಗಿದೆ. ಆದ್ದರಿಂದ ಪೆಟ್ರೋಲಿಯಂ ಖಾತೆಯ ಸಚಿವ ವೀರಪ್ಪ ಮೊಯಿಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿಪಿಐ ಆಗ್ರಪಡಿಸಿದೆ.<br /> <br /> ಇದೊಂದು ಗಂಭೀರ ವಿಚಾರವಾಗಿರುವುದರಿಂದ ಸುಪ್ರೀಂಕೋರ್ಟ್ ನ್ಯಾಯ ಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಬೇಕು ಎಂದು ಸಿಪಿಐ ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ</strong><br /> <strong>ಚೆನ್ನೈ(ಪಿಟಿಐ):</strong> ರಾಜ್ಯಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷದ ಅಭ್ಯರ್ಥಿ ಕನಿಮೊಳಿ ಅವರನ್ನು ಬೆಂಬಲಿಸುವುದಾಗಿ ಭರವಸೆ ನೀಡಿದ್ದ ಪಟ್ಟಾಳಿ ಮಕ್ಕಳ್ ಕಚ್ಚಿ(ಪಿಎಂಕೆ) ಪಕ್ಷ ಚುನಾವಣೆಯನ್ನು ಬಹಿಷ್ಕರಿಸುವ ಬೆದರಿಕೆ ಹಾಕಿ ಆಂತಕವನ್ನುಂಟು ಮಾಡಿದೆ.<br /> <br /> `ಪಿಎಂಕೆ ಪಕ್ಷದ ಕಾರ್ಯಕಾರಿಣಿಯಲ್ಲಿ ರಾಜ್ಯಸಭಾ ಚುನಾವಣೆಯನ್ನು ಬಹಿಷ್ಕರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ' ಎಂದು ಪಿಎಂಕೆ ಪ್ರಕಟಣೆಯಲ್ಲಿ ತಿಳಿಸಿದೆ.<br /> <br /> <strong>ಮೇವು ಹಗರಣ: ಜು. 15ಕ್ಕೆ ತೀರ್ಪು</strong><br /> <strong>ರಾಂಚಿ (ಐಎಎನ್ಎಸ್): </strong>ಬಿಹಾರದ ಮೇವು ಹಗರಣಕ್ಕೆ ಸಂಬಂಧಿಸಿದ ತೀರ್ಪು ಜುಲೈ 15ರಂದು ಪ್ರಕಟವಾಗಲಿದೆ. ಇದರಲ್ಲಿ ಪ್ರಮುಖ ಆರೋಪಿಗಳಾಗಿರುವ ಮಾಜಿ ಮುಖ್ಯ ಮಂತ್ರಿಗಳಾದ ಲಾಲೂ ಪ್ರಸಾದ್ ಮತ್ತು ಜಗನ್ನಾಥ್ ಮಿಶ್ರಾ ಅವರ ಹಣೆಬರಹ ಆ ದಿನ ನಿರ್ಧಾರವಾಗಲಿದೆ.<br /> <br /> <strong>ಮೊಯಿಲಿ ರಾಜೀನಾಮೆಗೆ ಸಿಪಿಐ ಆಗ್ರಹ</strong><br /> <strong>ನವದೆಹಲಿ (ಪಿಟಿಐ):</strong> ದೇಶದ ಹಿತಾಸಕ್ತಿಯನ್ನು ಬಲಿ ಕೊಟ್ಟು ಕಾರ್ಪೊರೇಟ್ ವಲಯಕ್ಕೆ ಲಾಭ ಮಾಡಿಕೊಡುವ ಉದ್ದೇಶದಿಂದ ನೈಸರ್ಗಿಕ ಅನಿಲದ ಬೆಲೆ ಹೆಚ್ಚಿಸುವ ಪ್ರಸ್ತಾಪ ಮಾಡಲಾಗಿದೆ. ಆದ್ದರಿಂದ ಪೆಟ್ರೋಲಿಯಂ ಖಾತೆಯ ಸಚಿವ ವೀರಪ್ಪ ಮೊಯಿಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿಪಿಐ ಆಗ್ರಪಡಿಸಿದೆ.<br /> <br /> ಇದೊಂದು ಗಂಭೀರ ವಿಚಾರವಾಗಿರುವುದರಿಂದ ಸುಪ್ರೀಂಕೋರ್ಟ್ ನ್ಯಾಯ ಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಬೇಕು ಎಂದು ಸಿಪಿಐ ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>