<p><strong>ಬೆಂಗಳೂರು:</strong> `ಶ್ರೀರಾಮ ಸೇವಾ ಮಂಡಳಿಯು ನಡೆಸುತ್ತಿರುವ ಸಂಗೀತೋತ್ಸವ ಕಾರ್ಯಕ್ರಮಕ್ಕೆ ಮುಂದಿನ ವರ್ಷ 25 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಭರವಸೆ ನೀಡಿದರು.</p>.<p>ಶ್ರೀರಾಮಸೇವಾ ಮಂಡಳಿಯು ನಗರದ ಕೋಟೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ 74ನೇ ಶ್ರೀರಾಮನವಮಿ ರಾಷ್ಟ್ರೀಯ ಸಂಗೀತೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>`ಸಂಗೀತ ಸರಸ್ವತಿಯೇ ಭುವಿಗೆ ಇಳಿದು ಬರುವಂತೆ ಕದ್ರಿ ಗೋಪಾಲನಾಥ್ ಅವರು ಸ್ಯಾಕ್ಸೋಫೋನ್ ನುಡಿಸುತ್ತಿದ್ದರೆ, ಅರೆಕ್ಷಣ ಮುಖ್ಯಮಂತ್ರಿ ಪದವಿ ಬದಿಗಿಟ್ಟು, ಆನಂದದಲ್ಲಿ ತೇಲಿದೆ~ ಎಂದು ಹರ್ಷ ವ್ಯಕ್ತಪಡಿಸಿದ ಅವರು, `ಸದಾ ಸ್ಪರ್ಧಾತ್ಮಕ ಮತ್ತು ಯಾಂತ್ರಿಕ ಬದುಕಿಗೆ ಒಡ್ಡಿಕೊಂಡಿರುವ ಮನುಷ್ಯನ ಜೀವನದಲ್ಲಿ ಸಂಗೀತವೆಂಬುದು ನೆಮ್ಮದಿಯನ್ನು ನೀಡುತ್ತದೆ. ದೇಶದ ಸಂಸ್ಕೃತಿಯನ್ನು ಸಾರುವ ಇಂತಹ ಉತ್ಸವಗಳು ಇನ್ನಷ್ಟು ನಡೆಯಬೇಕು~ ಎಂದು ಆಶಿಸಿದರು.</p>.<p>`ಹಣ ಮತ್ತು ಅಧಿಕಾರ ಗಳಿಕೆಯ ಕುರಿತು ದುರಾಲೋಚನೆ ನಡೆಸುವ ಮನಸ್ಸನ್ನು ಹತೋಟಿಯಲ್ಲಿಡಲು ಸಂಗೀತವೆಂಬುದು ರಾಮಬಾಣ. ಸಂಗೀತ ಉತ್ಸವಗಳಲ್ಲಿ ವಿವಿಧ ಸಂಸ್ಕೃತಿಗಳ ಸಂಗಮವಾಗಿ ಕೇಳುಗರಿಗೆ ಹೊಸ ಹುರುಪು ನೀಡುತ್ತದೆ~ ಎಂದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯುಕ್ತ ಮನು ಬಳಿಗಾರ್, `ನಶಿಸುತ್ತಿರುವ ದೇಸಿ ಮತ್ತು ಶಾಸ್ತ್ರೀಯ ಸಂಗೀತವನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಸಂಗೀತೋತ್ಸವಗಳು ಸಹಕಾರಿಯಾಗಿದ್ದು, ಇದು ಹೀಗೆ ಮುಂದುವರಿಯಲಿ~ ಎಂದು ಆಶಿಸಿದರು.</p>.<p>ಕದ್ರಿ ಗೋಪಾಲನಾಥ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಮಂಡಳಿಯ ಎ.ರವೀಂದ್ರ, ಮುನಿನಾರಾಯಣಸ್ವಾಮಿ ಇತರರು ಉಪಸ್ಥಿತರಿದ್ದರು. ಉತ್ಸವವು ಮೇ 6ರವರೆಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಶ್ರೀರಾಮ ಸೇವಾ ಮಂಡಳಿಯು ನಡೆಸುತ್ತಿರುವ ಸಂಗೀತೋತ್ಸವ ಕಾರ್ಯಕ್ರಮಕ್ಕೆ ಮುಂದಿನ ವರ್ಷ 25 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಭರವಸೆ ನೀಡಿದರು.</p>.<p>ಶ್ರೀರಾಮಸೇವಾ ಮಂಡಳಿಯು ನಗರದ ಕೋಟೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ 74ನೇ ಶ್ರೀರಾಮನವಮಿ ರಾಷ್ಟ್ರೀಯ ಸಂಗೀತೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>`ಸಂಗೀತ ಸರಸ್ವತಿಯೇ ಭುವಿಗೆ ಇಳಿದು ಬರುವಂತೆ ಕದ್ರಿ ಗೋಪಾಲನಾಥ್ ಅವರು ಸ್ಯಾಕ್ಸೋಫೋನ್ ನುಡಿಸುತ್ತಿದ್ದರೆ, ಅರೆಕ್ಷಣ ಮುಖ್ಯಮಂತ್ರಿ ಪದವಿ ಬದಿಗಿಟ್ಟು, ಆನಂದದಲ್ಲಿ ತೇಲಿದೆ~ ಎಂದು ಹರ್ಷ ವ್ಯಕ್ತಪಡಿಸಿದ ಅವರು, `ಸದಾ ಸ್ಪರ್ಧಾತ್ಮಕ ಮತ್ತು ಯಾಂತ್ರಿಕ ಬದುಕಿಗೆ ಒಡ್ಡಿಕೊಂಡಿರುವ ಮನುಷ್ಯನ ಜೀವನದಲ್ಲಿ ಸಂಗೀತವೆಂಬುದು ನೆಮ್ಮದಿಯನ್ನು ನೀಡುತ್ತದೆ. ದೇಶದ ಸಂಸ್ಕೃತಿಯನ್ನು ಸಾರುವ ಇಂತಹ ಉತ್ಸವಗಳು ಇನ್ನಷ್ಟು ನಡೆಯಬೇಕು~ ಎಂದು ಆಶಿಸಿದರು.</p>.<p>`ಹಣ ಮತ್ತು ಅಧಿಕಾರ ಗಳಿಕೆಯ ಕುರಿತು ದುರಾಲೋಚನೆ ನಡೆಸುವ ಮನಸ್ಸನ್ನು ಹತೋಟಿಯಲ್ಲಿಡಲು ಸಂಗೀತವೆಂಬುದು ರಾಮಬಾಣ. ಸಂಗೀತ ಉತ್ಸವಗಳಲ್ಲಿ ವಿವಿಧ ಸಂಸ್ಕೃತಿಗಳ ಸಂಗಮವಾಗಿ ಕೇಳುಗರಿಗೆ ಹೊಸ ಹುರುಪು ನೀಡುತ್ತದೆ~ ಎಂದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯುಕ್ತ ಮನು ಬಳಿಗಾರ್, `ನಶಿಸುತ್ತಿರುವ ದೇಸಿ ಮತ್ತು ಶಾಸ್ತ್ರೀಯ ಸಂಗೀತವನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಸಂಗೀತೋತ್ಸವಗಳು ಸಹಕಾರಿಯಾಗಿದ್ದು, ಇದು ಹೀಗೆ ಮುಂದುವರಿಯಲಿ~ ಎಂದು ಆಶಿಸಿದರು.</p>.<p>ಕದ್ರಿ ಗೋಪಾಲನಾಥ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಮಂಡಳಿಯ ಎ.ರವೀಂದ್ರ, ಮುನಿನಾರಾಯಣಸ್ವಾಮಿ ಇತರರು ಉಪಸ್ಥಿತರಿದ್ದರು. ಉತ್ಸವವು ಮೇ 6ರವರೆಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>