<p>ಗದಗ: ಲಿಂಗೈಕ್ಯ ಡಾ. ಪಂಡಿತ ಪುಟ್ಟರಾಜ ಗವಾಯಿ ಅವರು ಅಂಧ, ಅನಾಥ ಮಕ್ಕಳ ಬದುಕಿನಲ್ಲಿ ಬೆಳಕು ಮೂಡಿಸಿ ಸ್ವಾಭಿಮಾನದ ಬದುಕನ್ನು ಕಟ್ಟಿಕೊಡಲು ಶ್ರಮಿಸಿದ್ದಾರೆ ಎಂದು ಕ್ಷೌರಿಕ ಹಿತರಕ್ಷಣಾ ವೇದಿಕೆ ರಾಜ್ಯ ಜಂಟಿ ಕಾರ್ಯದರ್ಶಿ ಕೃಷ್ಣ ಹಡಪದ ಹೇಳಿದರು. <br /> <br /> ಸವಿತಾ ಸಮಾಜ ಸುಧಾರಣಾ ಸಂಘದ ವತಿಯಿಂದ ಇತ್ತೀಚೆಗೆ ಲಿಂಗೈಕ್ಯ ಡಾ. ಪಂಡಿತ ಪುಟ್ಟರಾಜರ ಪ್ರಥಮ ಪುಣ್ಯಸ್ಮರಣೆ ಅಂಗವಾಗಿ ಏರ್ಪಡಿಸಿದ್ದ ಉಚಿತ ಕೇಶ ಮುಂಡನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಸಂಗೀತ ಕ್ಷೇತ್ರದಲ್ಲಿ ಅಮೋಘ ಸೇವೆ ಸಲ್ಲಿಸಿರುವ ಪುಟ್ಟರಾಜರು ಅಪಾರ ಸಂಖ್ಯೆಯಲ್ಲಿ ತಮ್ಮ ಶಿಷ್ಯ ಬಳಗವನ್ನು ಹೊಂದಿದ್ದಾರೆ. ಅಂಧರಿಗಾಗಿ ಅವರು ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅವರ ಆದರ್ಶ ಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಸಲಹೆ ನೀಡಿದರು. <br /> <br /> ಡಾ. ಪಂಡಿತ ಪುಟ್ಟರಾಜರ ಪುಣ್ಯಸ್ಮರಣೆ ನಿಮಿತ್ಯ ಪುಟ್ಟರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ವಿಠ್ಠಲ ದಿವಡೆ, ಗಣೇಶ ಕಡೇಮನಿ, ಜುಮ್ಮಣ್ಣ ಕಡಮೂರ, ಹುಲಗಪ್ಪ ಅನವಾಳ, ರಾಜು ಹಾದಿಮನಿ, ವಾಸು ಬೈಗೊಟ್ಟಿ, ರವಿ ಯಳವಾರ ಮತ್ತಿತರರು ಹಾಜರಿದ್ದರು. <br /> <br /> <strong>ಸಂಗೀತ, ಚಿತ್ರಕಲೆ ಉಚಿತ ಶಿಬಿರ ನಾಳೆಯಿಂದ </strong><br /> ಕನ್ನಡ ಮತ್ತು ಕಲಾಭಿವೃದ್ಧಿ ಸೇವಾ ಸಂಸ್ಥೆಯ ರಾಜೇಶ್ವರಿ ಕಲಾ ಕುಟೀರದ `ದಶಮಾನೋತ್ಸವ~ ಅಂಗವಾಗಿ 1ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಉಚಿತ ಚಿತ್ರಕಲೆ ಹಾಗೂ ಸಂಗೀತ ಶಿಬಿರ ಏರ್ಪಡಿಸಲಾಗಿದೆ. <br /> <br /> ಇದೇ 15ರಿಂದ ಆರಂಭವಾಗುವ ಶಿಬಿರದಲ್ಲಿ ಚಿತ್ರಕಲೆ, ಪೇಂಟಿಂಗ್, ಕ್ರಾಫ್ಟ್ವರ್ಕ್, ಲಘು ಸಂಗೀತ, ಜಾನಪದ ಗೀತೆ, ಭಾವಗೀತೆ, ಭಕ್ತಿ ಗೀತೆ ತರಬೇತಿ ನೀಡಲಾಗುವುದು. ಪ್ರತಿ ಶನಿವಾರ ಮತ್ತು ಭಾನುವಾರ ತಬಲಾ ವಾದನ ತರಬೇತಿ ನೀಡಲಾಗುವುದು. <br /> <br /> ಆಸಕ್ತರು ರಾಜೇಶ್ವರಿ ಕಲಾ ಕುಟೀರ, ಕೆ.ಸಿ. ರಾಣಿ ರಸ್ತೆ, ಸಿ.ಎಸ್. ಪಾಟೀಲ ಪ್ರೌಢಶಾಲೆ ಎದುರಿಗೆ, ಗದಗ, ದೂ. 08372- 253319 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ಲಿಂಗೈಕ್ಯ ಡಾ. ಪಂಡಿತ ಪುಟ್ಟರಾಜ ಗವಾಯಿ ಅವರು ಅಂಧ, ಅನಾಥ ಮಕ್ಕಳ ಬದುಕಿನಲ್ಲಿ ಬೆಳಕು ಮೂಡಿಸಿ ಸ್ವಾಭಿಮಾನದ ಬದುಕನ್ನು ಕಟ್ಟಿಕೊಡಲು ಶ್ರಮಿಸಿದ್ದಾರೆ ಎಂದು ಕ್ಷೌರಿಕ ಹಿತರಕ್ಷಣಾ ವೇದಿಕೆ ರಾಜ್ಯ ಜಂಟಿ ಕಾರ್ಯದರ್ಶಿ ಕೃಷ್ಣ ಹಡಪದ ಹೇಳಿದರು. <br /> <br /> ಸವಿತಾ ಸಮಾಜ ಸುಧಾರಣಾ ಸಂಘದ ವತಿಯಿಂದ ಇತ್ತೀಚೆಗೆ ಲಿಂಗೈಕ್ಯ ಡಾ. ಪಂಡಿತ ಪುಟ್ಟರಾಜರ ಪ್ರಥಮ ಪುಣ್ಯಸ್ಮರಣೆ ಅಂಗವಾಗಿ ಏರ್ಪಡಿಸಿದ್ದ ಉಚಿತ ಕೇಶ ಮುಂಡನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಸಂಗೀತ ಕ್ಷೇತ್ರದಲ್ಲಿ ಅಮೋಘ ಸೇವೆ ಸಲ್ಲಿಸಿರುವ ಪುಟ್ಟರಾಜರು ಅಪಾರ ಸಂಖ್ಯೆಯಲ್ಲಿ ತಮ್ಮ ಶಿಷ್ಯ ಬಳಗವನ್ನು ಹೊಂದಿದ್ದಾರೆ. ಅಂಧರಿಗಾಗಿ ಅವರು ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅವರ ಆದರ್ಶ ಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಸಲಹೆ ನೀಡಿದರು. <br /> <br /> ಡಾ. ಪಂಡಿತ ಪುಟ್ಟರಾಜರ ಪುಣ್ಯಸ್ಮರಣೆ ನಿಮಿತ್ಯ ಪುಟ್ಟರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ವಿಠ್ಠಲ ದಿವಡೆ, ಗಣೇಶ ಕಡೇಮನಿ, ಜುಮ್ಮಣ್ಣ ಕಡಮೂರ, ಹುಲಗಪ್ಪ ಅನವಾಳ, ರಾಜು ಹಾದಿಮನಿ, ವಾಸು ಬೈಗೊಟ್ಟಿ, ರವಿ ಯಳವಾರ ಮತ್ತಿತರರು ಹಾಜರಿದ್ದರು. <br /> <br /> <strong>ಸಂಗೀತ, ಚಿತ್ರಕಲೆ ಉಚಿತ ಶಿಬಿರ ನಾಳೆಯಿಂದ </strong><br /> ಕನ್ನಡ ಮತ್ತು ಕಲಾಭಿವೃದ್ಧಿ ಸೇವಾ ಸಂಸ್ಥೆಯ ರಾಜೇಶ್ವರಿ ಕಲಾ ಕುಟೀರದ `ದಶಮಾನೋತ್ಸವ~ ಅಂಗವಾಗಿ 1ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಉಚಿತ ಚಿತ್ರಕಲೆ ಹಾಗೂ ಸಂಗೀತ ಶಿಬಿರ ಏರ್ಪಡಿಸಲಾಗಿದೆ. <br /> <br /> ಇದೇ 15ರಿಂದ ಆರಂಭವಾಗುವ ಶಿಬಿರದಲ್ಲಿ ಚಿತ್ರಕಲೆ, ಪೇಂಟಿಂಗ್, ಕ್ರಾಫ್ಟ್ವರ್ಕ್, ಲಘು ಸಂಗೀತ, ಜಾನಪದ ಗೀತೆ, ಭಾವಗೀತೆ, ಭಕ್ತಿ ಗೀತೆ ತರಬೇತಿ ನೀಡಲಾಗುವುದು. ಪ್ರತಿ ಶನಿವಾರ ಮತ್ತು ಭಾನುವಾರ ತಬಲಾ ವಾದನ ತರಬೇತಿ ನೀಡಲಾಗುವುದು. <br /> <br /> ಆಸಕ್ತರು ರಾಜೇಶ್ವರಿ ಕಲಾ ಕುಟೀರ, ಕೆ.ಸಿ. ರಾಣಿ ರಸ್ತೆ, ಸಿ.ಎಸ್. ಪಾಟೀಲ ಪ್ರೌಢಶಾಲೆ ಎದುರಿಗೆ, ಗದಗ, ದೂ. 08372- 253319 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>