<p><strong>ಬೆಂಗಳೂರು: </strong>ಬೆಂಗಳೂರಿನ ಕೃಷ್ಣಪ್ಪ ರಂಗಮ್ಮ ಚಾರಿಟಬಲ್ ಟ್ರಸ್ಟ್ನ ಆಸ್ತಿಯಲ್ಲಿ ಒಕ್ಕಲಿಗರ ಸಂಘ ನಡೆಸುತ್ತಿರುವ ಎಲ್ಲ ಕಾರ್ಯ ಚಟುವಟಿಕೆಗಳನ್ನು ನಿಲ್ಲಿಸುವಂತೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.<br /> <br /> ಸದಸ್ಯ ಬಿ.ಆರ್. ಸುಬ್ರಹ್ಮಣ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಡಿ.ಎಚ್. ವಘೇಲಾ ಹಾಗೂ ನ್ಯಾ. ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿ, ಅಧೀನ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಪ್ರಕರಣವನ್ನು ಇತ್ಯರ್ಥ ಪಡಿಸಿಕೊಳ್ಳುವಂತೆ ಸೂಚಿಸಿದೆ.<br /> <br /> ಈ ಟ್ರಸ್ಟ್ನ ಆಸ್ತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್, ಹೈಕೋರ್ಟ್, ಅಧೀನ ನ್ಯಾಯಾಲಯದಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ವಿಚಾರಣಾ ಹಂತದಲ್ಲಿವೆ. ಇಂತಹ ಪರಿಸ್ಥಿತಿಯಲ್ಲಿ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ. <br /> <br /> ಕೃಷ್ಣಪ್ಪ ರಂಗಮ್ಮ ಎಂಬುವರು ೧೯೬೨ರಲ್ಲಿ ಯಶವಂತಪುರ ಹೋಬಳಿಯ ೯೬ ಎಕರೆ ಭೂಮಿಯನ್ನು ಶೈಕ್ಷಣಿಕ ಉದ್ದೇಶಗಳಿಗೆ ಬಳಸಿಕೊಳ್ಳುವಂತೆ ಉಯಿಲು ಬರೆದಿಟ್ಟಿದ್ದರು. ಒಕ್ಕಲಿಗರ ಸಂಘ ೧೯೭೮ರಲ್ಲಿ ಈ ಟ್ರಸ್ಟ್ನ ಪಾಲುದಾರರಾಗಿ ಸೇರಿಕೊಂಡಿತು.<br /> <br /> ಆಸ್ತಿಯನ್ನು ನಿಗದಿತ ಉದ್ದೇಶಗಳಿಗೆ ಬಳಸುತ್ತಿಲ್ಲ ಎಂಬ ಆರೋಪವೂ ಇತ್ತು. ಅಲ್ಲದೆ ಟ್ರಸ್ಟ್ನ ೯೬ ಎಕರೆ ಜಮೀನಿನಲ್ಲಿ ಈಗ ಕೇವಲ ೪೬ ಎಕರೆ ಉಳಿದಿದೆ. ಇದರಿಂದಾಗಿ ಟ್ರಸ್ಟ್ನ ಆಸ್ತಿಯಲ್ಲಿ ಸಂಘದ ಯಾವುದೇ ಕಾರ್ಯ ಮುಂದುವರೆಸದಂತೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆಂಗಳೂರಿನ ಕೃಷ್ಣಪ್ಪ ರಂಗಮ್ಮ ಚಾರಿಟಬಲ್ ಟ್ರಸ್ಟ್ನ ಆಸ್ತಿಯಲ್ಲಿ ಒಕ್ಕಲಿಗರ ಸಂಘ ನಡೆಸುತ್ತಿರುವ ಎಲ್ಲ ಕಾರ್ಯ ಚಟುವಟಿಕೆಗಳನ್ನು ನಿಲ್ಲಿಸುವಂತೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.<br /> <br /> ಸದಸ್ಯ ಬಿ.ಆರ್. ಸುಬ್ರಹ್ಮಣ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಡಿ.ಎಚ್. ವಘೇಲಾ ಹಾಗೂ ನ್ಯಾ. ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿ, ಅಧೀನ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಪ್ರಕರಣವನ್ನು ಇತ್ಯರ್ಥ ಪಡಿಸಿಕೊಳ್ಳುವಂತೆ ಸೂಚಿಸಿದೆ.<br /> <br /> ಈ ಟ್ರಸ್ಟ್ನ ಆಸ್ತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್, ಹೈಕೋರ್ಟ್, ಅಧೀನ ನ್ಯಾಯಾಲಯದಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ವಿಚಾರಣಾ ಹಂತದಲ್ಲಿವೆ. ಇಂತಹ ಪರಿಸ್ಥಿತಿಯಲ್ಲಿ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ. <br /> <br /> ಕೃಷ್ಣಪ್ಪ ರಂಗಮ್ಮ ಎಂಬುವರು ೧೯೬೨ರಲ್ಲಿ ಯಶವಂತಪುರ ಹೋಬಳಿಯ ೯೬ ಎಕರೆ ಭೂಮಿಯನ್ನು ಶೈಕ್ಷಣಿಕ ಉದ್ದೇಶಗಳಿಗೆ ಬಳಸಿಕೊಳ್ಳುವಂತೆ ಉಯಿಲು ಬರೆದಿಟ್ಟಿದ್ದರು. ಒಕ್ಕಲಿಗರ ಸಂಘ ೧೯೭೮ರಲ್ಲಿ ಈ ಟ್ರಸ್ಟ್ನ ಪಾಲುದಾರರಾಗಿ ಸೇರಿಕೊಂಡಿತು.<br /> <br /> ಆಸ್ತಿಯನ್ನು ನಿಗದಿತ ಉದ್ದೇಶಗಳಿಗೆ ಬಳಸುತ್ತಿಲ್ಲ ಎಂಬ ಆರೋಪವೂ ಇತ್ತು. ಅಲ್ಲದೆ ಟ್ರಸ್ಟ್ನ ೯೬ ಎಕರೆ ಜಮೀನಿನಲ್ಲಿ ಈಗ ಕೇವಲ ೪೬ ಎಕರೆ ಉಳಿದಿದೆ. ಇದರಿಂದಾಗಿ ಟ್ರಸ್ಟ್ನ ಆಸ್ತಿಯಲ್ಲಿ ಸಂಘದ ಯಾವುದೇ ಕಾರ್ಯ ಮುಂದುವರೆಸದಂತೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>