<p><strong>ಬೆಂಗಳೂರು: </strong>‘ಸಂಘಟನೆಯ ಸೂಚನೆಯಂತೆ ಕೆಲಸ ಮಾಡುವ ಕಾರ್ಯಕರ್ತರನ್ನು ಸಿದ್ಧಮಾಡುವುದು ಮತ್ತು ಸಂಘ ಪರಿವಾರದ ಹಿನ್ನೆಲೆಯ ಶಾಸಕರು ಮುಂದಿನ ಚುನಾವಣೆಗಳಲ್ಲಿ ಗೆದ್ದುಬರುವಂತೆ ಮಾಡಲು ಈ ಸಮಾವೇಶ ಆಯೋಜಿಸಲಾಗುತ್ತಿದೆ, ಇದು ಚುನಾವಣಾ ಸಿದ್ಧತೆಯ ಸಮಾವೇಶ ಅಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.<br /> <br /> ಇಲ್ಲಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆಯಲಿರುವ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಶುಕ್ರವಾರ ಆಯೋಜಿಸಲಾಗಿದ್ದ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ‘ಸರ್ಕಾರ ತನ್ನ ಅವಧಿ ಪೂರ್ಣಗೊಳಿಸುತ್ತದೆ’ ಎಂದು ಪುನರುಚ್ಛರಿಸಿದ ಅವರು, ‘ಇನ್ನೂ 25-30 ವರ್ಷಗಳ ಕಾಲ ಕಾಂಗ್ರೆಸ್ ಮತ್ತು ಜೆಡಿಎಸ್ನವರನ್ನು ವಿರೋಧ ಪಕ್ಷದ ಸ್ಥಾನದಲ್ಲೇ ಕೂರಿಸುತ್ತೇವೆ’ ಎಂದರು.<br /> <br /> ‘ಕಾಂಗ್ರೆಸ್ ಹಠಾವೊ’: ಯುಪಿಎ ಸರ್ಕಾರದ ಹಗರಣಗಳ ಕುರಿತು ವಾಗ್ದಾಳಿ ನಡೆಸಿದ ಯಡಿಯೂರಪ್ಪ ಅವರು, ‘ಭಾರತೀಯರು ತಲೆತಗ್ಗಿಸುವ ರೀತಿಯಲ್ಲಿ ಕೇಂದ್ರ ಸರ್ಕಾರದ ಹಗರಣಗಳು ಹೊರಬರುತ್ತಿವೆ’ ಎಂದರು.<br /> <br /> ‘ಕಾಂಗ್ರೆಸ್ ಹಠಾವೊ, ದೇಶ್ ಬಚಾವೊ ಆಂದೋಲನ ಆರಂಭಿಸುವ ಕುರಿತಂತೆ ಬಿಜೆಪಿಯ ಕೇಂದ್ರ ನಾಯಕರು ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಬಹುದು’ ಎಂದರು.<br /> <br /> ‘ಮಾರ್ಚ್ ಒಂದನೇ ವಾರದಿಂದ ನನ್ನ ರೀತಿ, ನೀತಿ, ನಡವಳಿಕೆಗಳಲ್ಲಿ ಬದಲಾವಣೆ ಆಗಲಿದೆ’ ಎಂದರು.ಇದಕ್ಕೂ ಮುನ್ನ ಮಾತನಾಡಿದ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು ಭಾನುವಾರದ ಸಮಾವೇಶದ ಕುರಿತು ಮಾಹಿತಿ ನೀಡಿದರು.<br /> <br /> ‘ಸಮಾವೇಶದ ಸಿದ್ಧತಾ ಮಾಹಿತಿ ಮತ್ತು ಕಾರ್ಯಕ್ರಮದ ಕ್ಷಣಕ್ಷಣದ ನೇರಪ್ರಸಾರ ಪಕ್ಷದ ವೆಬ್ಸೈಟ್ <a href="http://www.bjp.org">www.bjp.org</a> ನಲ್ಲಿ ಲಭ್ಯವಿರುತ್ತದೆ’ ಎಂದು ತಿಳಿಸಿದರು.<br /> ಮುಖಂಡರಾದ ಆಯನೂರು ಮಂಜುನಾಥ್, ಸಿ.ಟಿ. ರವಿ, ಸಚಿವರಾದ ಸುರೇಶ್ ಕುಮಾರ್, ಆರ್. ಅಶೋಕ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಸಂಘಟನೆಯ ಸೂಚನೆಯಂತೆ ಕೆಲಸ ಮಾಡುವ ಕಾರ್ಯಕರ್ತರನ್ನು ಸಿದ್ಧಮಾಡುವುದು ಮತ್ತು ಸಂಘ ಪರಿವಾರದ ಹಿನ್ನೆಲೆಯ ಶಾಸಕರು ಮುಂದಿನ ಚುನಾವಣೆಗಳಲ್ಲಿ ಗೆದ್ದುಬರುವಂತೆ ಮಾಡಲು ಈ ಸಮಾವೇಶ ಆಯೋಜಿಸಲಾಗುತ್ತಿದೆ, ಇದು ಚುನಾವಣಾ ಸಿದ್ಧತೆಯ ಸಮಾವೇಶ ಅಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.<br /> <br /> ಇಲ್ಲಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆಯಲಿರುವ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಶುಕ್ರವಾರ ಆಯೋಜಿಸಲಾಗಿದ್ದ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ‘ಸರ್ಕಾರ ತನ್ನ ಅವಧಿ ಪೂರ್ಣಗೊಳಿಸುತ್ತದೆ’ ಎಂದು ಪುನರುಚ್ಛರಿಸಿದ ಅವರು, ‘ಇನ್ನೂ 25-30 ವರ್ಷಗಳ ಕಾಲ ಕಾಂಗ್ರೆಸ್ ಮತ್ತು ಜೆಡಿಎಸ್ನವರನ್ನು ವಿರೋಧ ಪಕ್ಷದ ಸ್ಥಾನದಲ್ಲೇ ಕೂರಿಸುತ್ತೇವೆ’ ಎಂದರು.<br /> <br /> ‘ಕಾಂಗ್ರೆಸ್ ಹಠಾವೊ’: ಯುಪಿಎ ಸರ್ಕಾರದ ಹಗರಣಗಳ ಕುರಿತು ವಾಗ್ದಾಳಿ ನಡೆಸಿದ ಯಡಿಯೂರಪ್ಪ ಅವರು, ‘ಭಾರತೀಯರು ತಲೆತಗ್ಗಿಸುವ ರೀತಿಯಲ್ಲಿ ಕೇಂದ್ರ ಸರ್ಕಾರದ ಹಗರಣಗಳು ಹೊರಬರುತ್ತಿವೆ’ ಎಂದರು.<br /> <br /> ‘ಕಾಂಗ್ರೆಸ್ ಹಠಾವೊ, ದೇಶ್ ಬಚಾವೊ ಆಂದೋಲನ ಆರಂಭಿಸುವ ಕುರಿತಂತೆ ಬಿಜೆಪಿಯ ಕೇಂದ್ರ ನಾಯಕರು ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಬಹುದು’ ಎಂದರು.<br /> <br /> ‘ಮಾರ್ಚ್ ಒಂದನೇ ವಾರದಿಂದ ನನ್ನ ರೀತಿ, ನೀತಿ, ನಡವಳಿಕೆಗಳಲ್ಲಿ ಬದಲಾವಣೆ ಆಗಲಿದೆ’ ಎಂದರು.ಇದಕ್ಕೂ ಮುನ್ನ ಮಾತನಾಡಿದ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು ಭಾನುವಾರದ ಸಮಾವೇಶದ ಕುರಿತು ಮಾಹಿತಿ ನೀಡಿದರು.<br /> <br /> ‘ಸಮಾವೇಶದ ಸಿದ್ಧತಾ ಮಾಹಿತಿ ಮತ್ತು ಕಾರ್ಯಕ್ರಮದ ಕ್ಷಣಕ್ಷಣದ ನೇರಪ್ರಸಾರ ಪಕ್ಷದ ವೆಬ್ಸೈಟ್ <a href="http://www.bjp.org">www.bjp.org</a> ನಲ್ಲಿ ಲಭ್ಯವಿರುತ್ತದೆ’ ಎಂದು ತಿಳಿಸಿದರು.<br /> ಮುಖಂಡರಾದ ಆಯನೂರು ಮಂಜುನಾಥ್, ಸಿ.ಟಿ. ರವಿ, ಸಚಿವರಾದ ಸುರೇಶ್ ಕುಮಾರ್, ಆರ್. ಅಶೋಕ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>