<p><strong>ಬೆಂಗಳೂರು: </strong>ಸಂಚಾರ ನಿಯಮ ಉಲ್ಲಂಘಿಸುವವರ ಮೇಲೆ ಕಣ್ಣಿಡುವ ಸಲುವಾಗಿ ಎರಡನೇ ದರ್ಜೆಯ ನಗರಗಳು ಮತ್ತು ಪ್ರಮುಖ ಆರು ಜಿಲ್ಲೆಗಳಲ್ಲಿ ಇದೇ ಜೂನ್ ತಿಂಗಳೊಳಗೆ ಸರ್ವೈಲೆನ್ಸ್ ಕ್ಯಾಮೆರಾ ಅಳವಡಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ತಿಳಿಸಿದ್ದಾರೆ.<br /> <br /> ಮುಂದಿನ ಮೂರು ತಿಂಗಳೊಳಗೆ ಬಳ್ಳಾರಿ, ಬೆಳಗಾವಿ, ಗುಲ್ಬರ್ಗಾ ನಗರದ 45 ಕಡೆಗಳಲ್ಲಿ ಪ್ಯಾನ್ ಟಿಲ್ಟ್ ಝೂಮ್(ಪಿಟಿಜೆಡ್) ಸರ್ವೈಲೆನ್ಸ್ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಮಂಗಳೂರು, ಶಿವಮೊಗ್ಗ ಮತ್ತು ಹುಬ್ಬಳ್ಳಿಯಲ್ಲಿ ಕಳೆದ ವರ್ಷವೇ ಈ ಕ್ಯಾಮೆರಾಗಳನ್ನು ಅಳವಾಡಿಸಲಾಗಿದೆ. <br /> <br /> ಈ ರೀತಿ ಹಲವು ಸ್ಥಳಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸುವುದರಿಂದ ಸಂಚಾರ ನಿಯಮ ಉಲ್ಲಂಘಿಸುವವರ ಹಾಗೂ ಅಪರಾಧ ಕೃತ್ಯ ಮಾಡುವ ಆರೋಪಿಗಳನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಹಕಾರಿಯಾಗುತ್ತದೆ ಎಂದು ಬಿದರಿ ತಿಳಿಸಿದ್ದಾರೆ.<br /> <br /> ಬೆಂಗಳೂರಿನಲ್ಲಿ ಬ್ಲಾಕ್ ಬೆರಿ ಉಪಕರಣದ ಬಳಕೆ ಯಶಸ್ವಿಯಾಗಿದ್ದು, ಇದನ್ನು ರಾಜ್ಯಾದ್ಯಂತ ಜಾರಿಗೆ ತರಲಾಗುವುದು. ಇದೊಂದು ಪೇಪರ್ ರಹಿತ ಉಪಕರಣವಾಗಿದ್ದು, ಸಂಚಾರ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲು ಅನುಕೂಲವಾಗಲಿದೆ. ಈ ರೀತಿ ಪೇಪರ್ರಹಿತ ಉಪಕರಣವನ್ನು ಬಳಸುತ್ತಿರುವ ಮೊದಲ ರಾಜ್ಯ ನಮ್ಮದು. <br /> <br /> ಇದರಿಂದ ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ಪಾರದರ್ಶಕವಾಗಿ ದಂಡ ವಿಧಿಸಬಹುದು ಹಾಗೂ ಪೊಲೀಸ್ ಇಲಾಖೆಯಲ್ಲಿ ಆದಾಯ ಸೋರಿಕೆಯಾಗುವುದಿಲ್ಲ. ಮೇ ತಿಂಗಳೊಳಗೆ ಈ ಉಪಕರಣ ರಾಜ್ಯಾದ್ಯಂತ ಎಲ್ಲಾ ಸಂಚಾರ ಪೊಲೀಸರು ಬಳಸಲಿದ್ದಾರೆ ಎಂದು ಅವರು ಹೇಳಿದ್ದಾರೆ.<br /> <br /> ಬೆಂಗಳೂರು ಹೊರ ವಲಯದ ರಸ್ತೆಗಳಲ್ಲಿ 30 ಹೊಸ ಟ್ರಾಫಿಕ್ ಸಿಗ್ನಲ್ಗಳನ್ನು ಅಳವಡಿಸಲಾಗುವುದು ಹಾಗೂ ನಗರದ ಎಲ್ಲಾ ಟ್ರಾಫಿಕ್ ಸಿಗ್ನಲ್ಗಳ ವಾರ್ಷಿಕ ನಿರ್ವಹಣೆಯನ್ನು ಗುತ್ತಿಗೆ ಮೂಲಕ ಖಾಸಗಿಯವರಿಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಂಚಾರ ನಿಯಮ ಉಲ್ಲಂಘಿಸುವವರ ಮೇಲೆ ಕಣ್ಣಿಡುವ ಸಲುವಾಗಿ ಎರಡನೇ ದರ್ಜೆಯ ನಗರಗಳು ಮತ್ತು ಪ್ರಮುಖ ಆರು ಜಿಲ್ಲೆಗಳಲ್ಲಿ ಇದೇ ಜೂನ್ ತಿಂಗಳೊಳಗೆ ಸರ್ವೈಲೆನ್ಸ್ ಕ್ಯಾಮೆರಾ ಅಳವಡಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ತಿಳಿಸಿದ್ದಾರೆ.<br /> <br /> ಮುಂದಿನ ಮೂರು ತಿಂಗಳೊಳಗೆ ಬಳ್ಳಾರಿ, ಬೆಳಗಾವಿ, ಗುಲ್ಬರ್ಗಾ ನಗರದ 45 ಕಡೆಗಳಲ್ಲಿ ಪ್ಯಾನ್ ಟಿಲ್ಟ್ ಝೂಮ್(ಪಿಟಿಜೆಡ್) ಸರ್ವೈಲೆನ್ಸ್ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಮಂಗಳೂರು, ಶಿವಮೊಗ್ಗ ಮತ್ತು ಹುಬ್ಬಳ್ಳಿಯಲ್ಲಿ ಕಳೆದ ವರ್ಷವೇ ಈ ಕ್ಯಾಮೆರಾಗಳನ್ನು ಅಳವಾಡಿಸಲಾಗಿದೆ. <br /> <br /> ಈ ರೀತಿ ಹಲವು ಸ್ಥಳಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸುವುದರಿಂದ ಸಂಚಾರ ನಿಯಮ ಉಲ್ಲಂಘಿಸುವವರ ಹಾಗೂ ಅಪರಾಧ ಕೃತ್ಯ ಮಾಡುವ ಆರೋಪಿಗಳನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಹಕಾರಿಯಾಗುತ್ತದೆ ಎಂದು ಬಿದರಿ ತಿಳಿಸಿದ್ದಾರೆ.<br /> <br /> ಬೆಂಗಳೂರಿನಲ್ಲಿ ಬ್ಲಾಕ್ ಬೆರಿ ಉಪಕರಣದ ಬಳಕೆ ಯಶಸ್ವಿಯಾಗಿದ್ದು, ಇದನ್ನು ರಾಜ್ಯಾದ್ಯಂತ ಜಾರಿಗೆ ತರಲಾಗುವುದು. ಇದೊಂದು ಪೇಪರ್ ರಹಿತ ಉಪಕರಣವಾಗಿದ್ದು, ಸಂಚಾರ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲು ಅನುಕೂಲವಾಗಲಿದೆ. ಈ ರೀತಿ ಪೇಪರ್ರಹಿತ ಉಪಕರಣವನ್ನು ಬಳಸುತ್ತಿರುವ ಮೊದಲ ರಾಜ್ಯ ನಮ್ಮದು. <br /> <br /> ಇದರಿಂದ ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ಪಾರದರ್ಶಕವಾಗಿ ದಂಡ ವಿಧಿಸಬಹುದು ಹಾಗೂ ಪೊಲೀಸ್ ಇಲಾಖೆಯಲ್ಲಿ ಆದಾಯ ಸೋರಿಕೆಯಾಗುವುದಿಲ್ಲ. ಮೇ ತಿಂಗಳೊಳಗೆ ಈ ಉಪಕರಣ ರಾಜ್ಯಾದ್ಯಂತ ಎಲ್ಲಾ ಸಂಚಾರ ಪೊಲೀಸರು ಬಳಸಲಿದ್ದಾರೆ ಎಂದು ಅವರು ಹೇಳಿದ್ದಾರೆ.<br /> <br /> ಬೆಂಗಳೂರು ಹೊರ ವಲಯದ ರಸ್ತೆಗಳಲ್ಲಿ 30 ಹೊಸ ಟ್ರಾಫಿಕ್ ಸಿಗ್ನಲ್ಗಳನ್ನು ಅಳವಡಿಸಲಾಗುವುದು ಹಾಗೂ ನಗರದ ಎಲ್ಲಾ ಟ್ರಾಫಿಕ್ ಸಿಗ್ನಲ್ಗಳ ವಾರ್ಷಿಕ ನಿರ್ವಹಣೆಯನ್ನು ಗುತ್ತಿಗೆ ಮೂಲಕ ಖಾಸಗಿಯವರಿಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>