<p><strong>ನೆಲಮಂಗಲ: </strong>ಗ್ರಾಮ ಪಂಚಾಯಿತಿಗಳು ಆರ್ಥಿಕವಾಗಿ ಸಬಲವಾಗಲು ಪಂಚಾಯಿತಿ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸುವ ಮೂಲಕ ಸಂಪನ್ಮೂಲಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ಶಾಸಕ ಎಂ.ವಿ.ನಾಗರಾಜು ಸಲಹೆ ಮಾಡಿದರು.<br /> <br /> ತಾಲ್ಲೂಕಿನ ನರಸೀಪುರ ಗ್ರಾ.ಪಂ. ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಿದ ರಾಜೀವ್ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ಗ್ರಾ.ಪಂ. ಅಧ್ಯಕ್ಷ ರಂಗಶಾಮಯ್ಯ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ, ತಾ.ಪಂ.ಅಧ್ಯಕ್ಷ ಲಕ್ಷ್ಮೀನಾರಾಯಣ, ಜಿ.ಪಂ. ಸದಸ್ಯೆ ಸುನಂದಾ ಶಿವಕುಮಾರ್, ತಾ.ಪಂ. ಸದಸ್ಯೆ ಭಾಗ್ಯಮ್ಮ, ಹನುಮಕ್ಕ, ಉಪಾಧ್ಯಕ್ಷೆ ಪೂರ್ಣಿಮಾ ಇತರರು ಉಪಸ್ಥಿತರಿದ್ದರು.<br /> <br /> <strong>`ಶ್ರೀಮಂತವಾದ ಕನ್ನಡದ ಮಡಿಲು~ </strong><br /> ಕನ್ನಡ ತಾಯಿಯ ಮಡಿಲು ಮತ್ತೊಂದು ಜ್ಞಾನ ಪೀಠ ಪ್ರಶಸ್ತಿ ಪುರಸ್ಕಾರದಿಂದ ಶ್ರೀಮಂತವಾಗಿದೆ ಎಂದು ಡಾ.ಎ.ಒ.ಅವಲಮೂರ್ತಿ ಅವರು ಅಭಿಪ್ರಾಯಪಟ್ಟರು.<br /> <br /> ನೆಲಮಂಗಲ ಸಮೀಪದ ಯಂಟಗಾನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಮತ್ತು ರಾಷ್ಟ್ರೀಯ ಹಸಿರು ಪಡೆ ಆಯೋಜಿಸಿದ್ದ ಪರಿಸರ ದಿನಾಚರಣೆ ಮತ್ತು ಕಂಬಾರರ ಅಭಿನಂದನಾ ಸಭೆಯಲ್ಲಿ ಅವರು ಮಾತನಾಡಿದರು. <br /> <br /> ಎನ್.ಎಸ್.ಎಸ್ ಅಧಿಕಾರಿ ಬಿ.ಮಧುಸೂದನ್ ಕಂಬಾರರ ಬೆಳ್ಳಿಮೀನು ಕವನ ಸಂಕಲನದ `ನಾಡು ಕಾಡು~ `ಆ ಮರ ಈ ಮರ~, `ಅಜ್ಜ ಅಜ್ಜಿ~ ಕವನ ವಾಚಿಸಿ ಕಂಬಾರರನ್ನು ಅಭಿನಂದಿಸಿದರು. ಇಕೋ ಕ್ಲಬ್ ಅಧ್ಯಕ್ಷ ಜಿ.ಬಿ.ವೆಂಕಟೇಶ್, ವಿದ್ಯಾರ್ಥಿ ಹೇಮಲತಾ ಕಂಬಾರರ ಕಾವ್ಯಕೃತಿಗಳನ್ನು ಕುರಿತು ಮಾತನಾಡಿದರು.<br /> ಉರಗ ಸ್ನೇಹಿ ಸ್ನೇಕ್ ಲೋಕಿ ಹಾವುಗಳ ಬಗ್ಗೆ ಮಾಹಿತಿ ನೀಡಿ ಅವುಗಳ ಸಂರಕ್ಷಣೆಯ ಜಾಗೃತಿ ಮೂಡಿಸಿದರು. <br /> <br /> ಮುಖ್ಯಶಿಕ್ಷಕ ಡಿ.ಶ್ರೀನಿವಾಸಯ್ಯ, ಹಿರಿಯ ಉಪನ್ಯಾಸಕ ಗೋವಿಂದಯ್ಯ ವೇದಿಕೆಯಲ್ಲಿದ್ದರು. ಕಾಲೇಜಿನ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಪರಿಸರ ಸಂರಕ್ಷಣೆಯ ಘೋಷಣಾ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಲಾಯಿತು.<br /> <br /> <strong>ಕ್ರೀಡಾಪಟುಗಳ ಕಡೆಗಣನೆಗೆ ಖಂಡನೆ<br /> </strong>ಹೊಸಕೋಟೆ: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಮೈಸೂರಿನಲ್ಲಿ ನಡೆಯುವ ದಸರಾ ಕ್ರೀಡಾಕೂಟಕ್ಕೆ ಹಿರಿಯ ಕ್ರೀಡಾಪಟುಗಳನ್ನು ಕಡೆಗಣಿಸಿರುವುದನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿರಿಯ ಕ್ರೀಡಾಪಟುಗಳ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಷಣ್ಮುಗಂ ಖಂಡಿಸಿದ್ದಾರೆ.<br /> <br /> `ಹಿರಿಯ ಕ್ರೀಡಾಪಟುಗಳಿಗೆ ಇಲಾಖೆ ಪ್ರೋತ್ಸಾಹಿಸುವ ಬದಲು ಈ ವರ್ಷ ದಿಢೀರನೆ ಯಾವುದೇ ಕಾರಣ ನೀಡದೆ ಅವರಿಗೆ ಏರ್ಪಡಿಸಿದ್ದ ನಾಲ್ಕು ಸ್ಪರ್ಧೆಯನ್ನು ರದ್ದು ಮಾಡಿದೆ. ಕ್ರೀಡಾ ಸಚಿವರು ಈ ಬಗ್ಗೆ ಪರಿಶೀಲಿಸಿ ಹಿರಿಯ ಕ್ರೀಡಾಪಟುಗಳು ನೇರವಾಗಿ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅನವು ಮಾಡಿಕೊಟ್ಟು ಹಿರಿಯರಿಗೆ ಪ್ರೋತ್ಸಾಹಿಸಬೇಕು~ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ: </strong>ಗ್ರಾಮ ಪಂಚಾಯಿತಿಗಳು ಆರ್ಥಿಕವಾಗಿ ಸಬಲವಾಗಲು ಪಂಚಾಯಿತಿ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸುವ ಮೂಲಕ ಸಂಪನ್ಮೂಲಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ಶಾಸಕ ಎಂ.ವಿ.ನಾಗರಾಜು ಸಲಹೆ ಮಾಡಿದರು.<br /> <br /> ತಾಲ್ಲೂಕಿನ ನರಸೀಪುರ ಗ್ರಾ.ಪಂ. ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಿದ ರಾಜೀವ್ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ಗ್ರಾ.ಪಂ. ಅಧ್ಯಕ್ಷ ರಂಗಶಾಮಯ್ಯ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ, ತಾ.ಪಂ.ಅಧ್ಯಕ್ಷ ಲಕ್ಷ್ಮೀನಾರಾಯಣ, ಜಿ.ಪಂ. ಸದಸ್ಯೆ ಸುನಂದಾ ಶಿವಕುಮಾರ್, ತಾ.ಪಂ. ಸದಸ್ಯೆ ಭಾಗ್ಯಮ್ಮ, ಹನುಮಕ್ಕ, ಉಪಾಧ್ಯಕ್ಷೆ ಪೂರ್ಣಿಮಾ ಇತರರು ಉಪಸ್ಥಿತರಿದ್ದರು.<br /> <br /> <strong>`ಶ್ರೀಮಂತವಾದ ಕನ್ನಡದ ಮಡಿಲು~ </strong><br /> ಕನ್ನಡ ತಾಯಿಯ ಮಡಿಲು ಮತ್ತೊಂದು ಜ್ಞಾನ ಪೀಠ ಪ್ರಶಸ್ತಿ ಪುರಸ್ಕಾರದಿಂದ ಶ್ರೀಮಂತವಾಗಿದೆ ಎಂದು ಡಾ.ಎ.ಒ.ಅವಲಮೂರ್ತಿ ಅವರು ಅಭಿಪ್ರಾಯಪಟ್ಟರು.<br /> <br /> ನೆಲಮಂಗಲ ಸಮೀಪದ ಯಂಟಗಾನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಮತ್ತು ರಾಷ್ಟ್ರೀಯ ಹಸಿರು ಪಡೆ ಆಯೋಜಿಸಿದ್ದ ಪರಿಸರ ದಿನಾಚರಣೆ ಮತ್ತು ಕಂಬಾರರ ಅಭಿನಂದನಾ ಸಭೆಯಲ್ಲಿ ಅವರು ಮಾತನಾಡಿದರು. <br /> <br /> ಎನ್.ಎಸ್.ಎಸ್ ಅಧಿಕಾರಿ ಬಿ.ಮಧುಸೂದನ್ ಕಂಬಾರರ ಬೆಳ್ಳಿಮೀನು ಕವನ ಸಂಕಲನದ `ನಾಡು ಕಾಡು~ `ಆ ಮರ ಈ ಮರ~, `ಅಜ್ಜ ಅಜ್ಜಿ~ ಕವನ ವಾಚಿಸಿ ಕಂಬಾರರನ್ನು ಅಭಿನಂದಿಸಿದರು. ಇಕೋ ಕ್ಲಬ್ ಅಧ್ಯಕ್ಷ ಜಿ.ಬಿ.ವೆಂಕಟೇಶ್, ವಿದ್ಯಾರ್ಥಿ ಹೇಮಲತಾ ಕಂಬಾರರ ಕಾವ್ಯಕೃತಿಗಳನ್ನು ಕುರಿತು ಮಾತನಾಡಿದರು.<br /> ಉರಗ ಸ್ನೇಹಿ ಸ್ನೇಕ್ ಲೋಕಿ ಹಾವುಗಳ ಬಗ್ಗೆ ಮಾಹಿತಿ ನೀಡಿ ಅವುಗಳ ಸಂರಕ್ಷಣೆಯ ಜಾಗೃತಿ ಮೂಡಿಸಿದರು. <br /> <br /> ಮುಖ್ಯಶಿಕ್ಷಕ ಡಿ.ಶ್ರೀನಿವಾಸಯ್ಯ, ಹಿರಿಯ ಉಪನ್ಯಾಸಕ ಗೋವಿಂದಯ್ಯ ವೇದಿಕೆಯಲ್ಲಿದ್ದರು. ಕಾಲೇಜಿನ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಪರಿಸರ ಸಂರಕ್ಷಣೆಯ ಘೋಷಣಾ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಲಾಯಿತು.<br /> <br /> <strong>ಕ್ರೀಡಾಪಟುಗಳ ಕಡೆಗಣನೆಗೆ ಖಂಡನೆ<br /> </strong>ಹೊಸಕೋಟೆ: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಮೈಸೂರಿನಲ್ಲಿ ನಡೆಯುವ ದಸರಾ ಕ್ರೀಡಾಕೂಟಕ್ಕೆ ಹಿರಿಯ ಕ್ರೀಡಾಪಟುಗಳನ್ನು ಕಡೆಗಣಿಸಿರುವುದನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿರಿಯ ಕ್ರೀಡಾಪಟುಗಳ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಷಣ್ಮುಗಂ ಖಂಡಿಸಿದ್ದಾರೆ.<br /> <br /> `ಹಿರಿಯ ಕ್ರೀಡಾಪಟುಗಳಿಗೆ ಇಲಾಖೆ ಪ್ರೋತ್ಸಾಹಿಸುವ ಬದಲು ಈ ವರ್ಷ ದಿಢೀರನೆ ಯಾವುದೇ ಕಾರಣ ನೀಡದೆ ಅವರಿಗೆ ಏರ್ಪಡಿಸಿದ್ದ ನಾಲ್ಕು ಸ್ಪರ್ಧೆಯನ್ನು ರದ್ದು ಮಾಡಿದೆ. ಕ್ರೀಡಾ ಸಚಿವರು ಈ ಬಗ್ಗೆ ಪರಿಶೀಲಿಸಿ ಹಿರಿಯ ಕ್ರೀಡಾಪಟುಗಳು ನೇರವಾಗಿ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅನವು ಮಾಡಿಕೊಟ್ಟು ಹಿರಿಯರಿಗೆ ಪ್ರೋತ್ಸಾಹಿಸಬೇಕು~ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>