<p><strong>ಶ್ರೀನಗರ(ಐಎಎನ್ಎಸ್/ಪಿಟಿಐ):</strong> ಅಕಾಲಿಕವಾಗಿ ಸುರಿಯುತ್ತಿರುವ ಭಾರಿ ಹಿಮಪಾತದಿಂದಾಗಿ ಕಾಶ್ಮೀರ–ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಸೋಮವಾರದಿಂದ ಮುಚ್ಚಲಾಗಿದ್ದು, ಕಾಶ್ಮೀರ ಕಣಿವೆ ದೇಶದ ಇತರ ಭಾಗಗಳಿಂದ ಸಂಪರ್ಕ ಕಡಿದುಕೊಂಡಿದೆ.<br /> <br /> ಕಣಿವೆಯ ಹಲವು ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಇದರಿಂದ ಜನರು ಮನೆಬಿಟ್ಟು ಹೊರಕ್ಕೆ ಬರಲಾಗದಂತಹ ಸ್ಥಿತಿ ಎದುರಾಗಿದೆ. ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದಿರುವ ಕಾರಣ ವಿದ್ಯುತ್ ಸರಬರಾಜನ್ನು ನಿಲ್ಲಿಸಲಾಗಿದೆ. ಇದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.<br /> <br /> ಅಕಾಲಿಕವಾಗಿ ಸುರಿದ ಹಿಮಪಾತದಿಂದಾಗಿ ಎಲ್ಲಾ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಅಲ್ಲದೇ, ರಾಜ್ಯ ಲೋಕಸೇವಾ ಆಯೋಗ ಮಂಗಳವಾರ ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಮುಂದೂಡಿದೆ. ಬುಧವಾರದಂದು ಹಿಮಪಾತ ನಿಂತರೆ ಶಾಲಾ–ಕಾಲೇಜುಗಳನ್ನು ಪುನಃ ಆರಂಭಿಸಲಾಗುವುದು ಎಂದು ಶಿಕ್ಷಣ ಸಂಸ್ಥೆಗಳು ಹೇಳಿವೆ.<br /> <br /> ಹಿಮಪಾತದಿಂದಾಗಿ ಅನೇಕ ಮರಗಳು ನೆಲಕ್ಕುರುಳಿವೆ. ಇದರಲ್ಲಿ ಅನೇಕ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದಿರುವುದರಿಂದ ವಿದ್ಯುತ್ ಸರಬರಾಜನ್ನು ನಿಲ್ಲಿಸಲಾಗಿದೆ. ಇದರಿಂದ ಕಾಶ್ಮೀರ ಕಣಿವೆಯಲ್ಲಿ ಸೋಮವಾರ ಸಂಜೆಯಿಂದಲೇ ಕತ್ತಲು ಆವರಿಸಿದೆ.<br /> <br /> ‘ಹಿಮಪಾತದಿಂದಾಗಿ 300 ಕಿ.ಮೀ ಉದ್ದ ಇರುವ ಹೆದ್ದಾರಿಯ ಮೇಲೆ ಸುಮಾರು ಒಂದು ಅಡಿಗಿಂತಲೂ ಹೆಚ್ಚು ಹಿಮ ಬಿದ್ದಿದೆ. ಆದ್ದರಿಂದ ಈ ಮಾರ್ಗದಲ್ಲಿ ಯಾವುದೇ ವಾಹನಗಳನ್ನು ಬಿಡಲಾಗುತ್ತಿಲ್ಲ. ಹಿಮಪಾತ ನಿಂತ ನಂತರ ರಸ್ತೆಯ ಮೇಲೆ ಬಿದ್ದ ಹಿಮವನ್ನು ತೆರವುಗೊಳಿಸಿದ ನಂತರವೇ ಹೆದ್ದಾರಿಯನ್ನು ಪುನಃ ಆರಂಭಿಸಲಾಗುವುದು’ ಎಂದು ಸಂಚಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ‘ಪ್ರತಿಕೂಲ ಹವಾಮಾನದಿಂದಾಗಿ ಯಾವುದೇ ವಿಮಾನಗಳು ಶ್ರೀನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿಲ್ಲ. ಈವರೆಗೆ ಯಾವುದೇ ವಿಮಾನಯಾನವನ್ನು ರದ್ದುಪಡಿಸಿಲ್ಲ. ಒಂದು ವೇಳೆ ಹಿಮಪಾತ ಹೀಗೆಯೇ ಮುಂದುವರಿದರೆ ವಿಮಾನಯಾನಗಳನ್ನು ರದ್ದು ಪಡಿಸುವ ಸಾಧ್ಯತೆ ಇದೆ’ ಎಂದು ವಿಮಾನಯಾನ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.<br /> <br /> ಅಕಾಲಿಕ ಹಿಮಪಾತದಿಂದಾಗಿ ಬೆಳೆ ನಷ್ಟವಾಗುವ ಸಾಧ್ಯತೆ ಇದೆ ಎಂದು ರೈತರು ಚಿಂತೆಗೀಡಾಗಿದ್ದಾರೆ.<br /> <br /> ‘ಅಕಾಲಿಕವಾಗಿ ಸುರಿಯುತ್ತಿರುವ ಹಿಮದಿಂದಾಗಿ ಕೃಷಿ ಮತ್ತು ಹಣ್ಣುಗಳ ಬೆಳೆಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಈ ಸಮಯದಲ್ಲಿ ಹಿಮಪಾತವಾಗುವುದು ಯಾವುದೇ ಬೆಳೆಗೂ ಸರಿಯಾದುದಲ್ಲ’ ಎಂದು ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ರೈತರೊಬ್ಬರು ಅಲವತ್ತುಕೊಂಡಿದ್ದಾರೆ.<br /> <br /> ಕಾಶ್ಮೀರ ಕಣಿವೆಯಲ್ಲಿ ಮುಂದಿನ 24 ಗಂಟೆಯವರೆಗೆ ಇದೇ ರೀತಿ ಹಿಮಪಾತವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ(ಐಎಎನ್ಎಸ್/ಪಿಟಿಐ):</strong> ಅಕಾಲಿಕವಾಗಿ ಸುರಿಯುತ್ತಿರುವ ಭಾರಿ ಹಿಮಪಾತದಿಂದಾಗಿ ಕಾಶ್ಮೀರ–ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಸೋಮವಾರದಿಂದ ಮುಚ್ಚಲಾಗಿದ್ದು, ಕಾಶ್ಮೀರ ಕಣಿವೆ ದೇಶದ ಇತರ ಭಾಗಗಳಿಂದ ಸಂಪರ್ಕ ಕಡಿದುಕೊಂಡಿದೆ.<br /> <br /> ಕಣಿವೆಯ ಹಲವು ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಇದರಿಂದ ಜನರು ಮನೆಬಿಟ್ಟು ಹೊರಕ್ಕೆ ಬರಲಾಗದಂತಹ ಸ್ಥಿತಿ ಎದುರಾಗಿದೆ. ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದಿರುವ ಕಾರಣ ವಿದ್ಯುತ್ ಸರಬರಾಜನ್ನು ನಿಲ್ಲಿಸಲಾಗಿದೆ. ಇದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.<br /> <br /> ಅಕಾಲಿಕವಾಗಿ ಸುರಿದ ಹಿಮಪಾತದಿಂದಾಗಿ ಎಲ್ಲಾ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಅಲ್ಲದೇ, ರಾಜ್ಯ ಲೋಕಸೇವಾ ಆಯೋಗ ಮಂಗಳವಾರ ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಮುಂದೂಡಿದೆ. ಬುಧವಾರದಂದು ಹಿಮಪಾತ ನಿಂತರೆ ಶಾಲಾ–ಕಾಲೇಜುಗಳನ್ನು ಪುನಃ ಆರಂಭಿಸಲಾಗುವುದು ಎಂದು ಶಿಕ್ಷಣ ಸಂಸ್ಥೆಗಳು ಹೇಳಿವೆ.<br /> <br /> ಹಿಮಪಾತದಿಂದಾಗಿ ಅನೇಕ ಮರಗಳು ನೆಲಕ್ಕುರುಳಿವೆ. ಇದರಲ್ಲಿ ಅನೇಕ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದಿರುವುದರಿಂದ ವಿದ್ಯುತ್ ಸರಬರಾಜನ್ನು ನಿಲ್ಲಿಸಲಾಗಿದೆ. ಇದರಿಂದ ಕಾಶ್ಮೀರ ಕಣಿವೆಯಲ್ಲಿ ಸೋಮವಾರ ಸಂಜೆಯಿಂದಲೇ ಕತ್ತಲು ಆವರಿಸಿದೆ.<br /> <br /> ‘ಹಿಮಪಾತದಿಂದಾಗಿ 300 ಕಿ.ಮೀ ಉದ್ದ ಇರುವ ಹೆದ್ದಾರಿಯ ಮೇಲೆ ಸುಮಾರು ಒಂದು ಅಡಿಗಿಂತಲೂ ಹೆಚ್ಚು ಹಿಮ ಬಿದ್ದಿದೆ. ಆದ್ದರಿಂದ ಈ ಮಾರ್ಗದಲ್ಲಿ ಯಾವುದೇ ವಾಹನಗಳನ್ನು ಬಿಡಲಾಗುತ್ತಿಲ್ಲ. ಹಿಮಪಾತ ನಿಂತ ನಂತರ ರಸ್ತೆಯ ಮೇಲೆ ಬಿದ್ದ ಹಿಮವನ್ನು ತೆರವುಗೊಳಿಸಿದ ನಂತರವೇ ಹೆದ್ದಾರಿಯನ್ನು ಪುನಃ ಆರಂಭಿಸಲಾಗುವುದು’ ಎಂದು ಸಂಚಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ‘ಪ್ರತಿಕೂಲ ಹವಾಮಾನದಿಂದಾಗಿ ಯಾವುದೇ ವಿಮಾನಗಳು ಶ್ರೀನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿಲ್ಲ. ಈವರೆಗೆ ಯಾವುದೇ ವಿಮಾನಯಾನವನ್ನು ರದ್ದುಪಡಿಸಿಲ್ಲ. ಒಂದು ವೇಳೆ ಹಿಮಪಾತ ಹೀಗೆಯೇ ಮುಂದುವರಿದರೆ ವಿಮಾನಯಾನಗಳನ್ನು ರದ್ದು ಪಡಿಸುವ ಸಾಧ್ಯತೆ ಇದೆ’ ಎಂದು ವಿಮಾನಯಾನ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.<br /> <br /> ಅಕಾಲಿಕ ಹಿಮಪಾತದಿಂದಾಗಿ ಬೆಳೆ ನಷ್ಟವಾಗುವ ಸಾಧ್ಯತೆ ಇದೆ ಎಂದು ರೈತರು ಚಿಂತೆಗೀಡಾಗಿದ್ದಾರೆ.<br /> <br /> ‘ಅಕಾಲಿಕವಾಗಿ ಸುರಿಯುತ್ತಿರುವ ಹಿಮದಿಂದಾಗಿ ಕೃಷಿ ಮತ್ತು ಹಣ್ಣುಗಳ ಬೆಳೆಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಈ ಸಮಯದಲ್ಲಿ ಹಿಮಪಾತವಾಗುವುದು ಯಾವುದೇ ಬೆಳೆಗೂ ಸರಿಯಾದುದಲ್ಲ’ ಎಂದು ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ರೈತರೊಬ್ಬರು ಅಲವತ್ತುಕೊಂಡಿದ್ದಾರೆ.<br /> <br /> ಕಾಶ್ಮೀರ ಕಣಿವೆಯಲ್ಲಿ ಮುಂದಿನ 24 ಗಂಟೆಯವರೆಗೆ ಇದೇ ರೀತಿ ಹಿಮಪಾತವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>