<p><strong>ಶಿಕಾರಿಪುರ: </strong>ಕಾಗಿನೆಲೆ ಸ್ವಾಮೀಜಿ ವಿರುದ್ಧ ಅಬಕಾರಿ ಸಚಿವ ರೇಣುಕಾಚಾರ್ಯ ಕ್ಲುಲ್ಲಕ ಹೇಳಿಕೆ ನೀಡಿರುವುದನ್ನು ವಿರೋಧಿಸಿ ಕುರುಬ ಸಮಾಜ ಕರೆ ನೀಡಿದ್ದ ಶಿಕಾರಿಪುರ ಬಂದ್ ಬುಧವಾರ ಸಂಪೂರ್ಣ ಯಶಸ್ವಿಯಾಗಿದೆ.<br /> <br /> ಪಟ್ಟಣದ ಎಲ್ಲಾ ವ್ಯಾಪಾರಸ್ಥರು ಬೆಳಿಗ್ಗೆಯಿಂದಲೇ ತಮ್ಮ ಅಂಗಡಿಗಳನ್ನು ತೆರೆಯದೇ ಬಂದ್ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದರು. ಯಾವುದೇ ಖಾಸಗಿ ಬಸ್ಗಳು ಸಂಚಾರ ನಡೆಸದ್ದರಿಂದಾಗಿ ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.<br /> <br /> ಕುರುಬ ಸಮಾಜದ ತಾಲ್ಲೂಕು ಅಧ್ಯಕ್ಷ ಬೋಗಿ ರಾಮಪ್ಪ ಕನಕ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಸಚಿವ ರೇಣುಕಾಚಾರ್ಯ ಅಣಕು ಶವಯಾತ್ರೆಯನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು. ಬಸ್ನಿಲ್ದಾಣದ ಸಮೀಪ ಪ್ರತಿಕೃತಿ ದಹಿಸಲಾಯಿತು.<br /> <br /> ಕುರುಬ ಸಮಾಜದ ಮುಖಂಡರು ಮಾತನಾಡಿ, ಕಾಗಿನೆಲೆ ಗುರುಪೀಠ ಕುರುಬ ಸಮಾಜ ಬಾಂಧವರಿಗೆ ಪುಣ್ಯಸ್ಥಳವಾಗಿದ್ದು, ಇದರ ಪೀಠಾಧಿಪತಿಗಳು ಗೌರವ ಸ್ಥಾನದಲ್ಲಿರುತ್ತಾರೆ. ಇವರ ವಿರುದ್ಧ ಕ್ಷುಲ್ಲಕ ಮಾತನ್ನಾಡುವುದು ಭಕ್ತಾದಿಗಳ ಮನಸ್ಸಿಗೆ ಧಕ್ಕೆಯಾಗುವ ಸಂಗತಿಯಾಗಿದೆ ಎಂದರು.<br /> <br /> ಸ್ವಾಮೀಜಿಗಳ ವಿರುದ್ಧ ಗೌರವಯುತವಾದ ಮಾತನಾಡಲು ಬಾರದ ಸಚಿವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು. ಈ ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಇಲ್ಲವಾದಲ್ಲಿ ಕ್ಷೇತ್ರದ ಶಾಸಕ ಬಿ.ಎಸ್. ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟಿಸುವುದಾಗಿ ಸಭೆಯಲ್ಲಿ ಹೇಳಿದರು.<br /> ರೇಣುಕಾಚಾರ್ಯರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸುವ ಮನವಿ ಪತ್ರವನ್ನು ತಹಶೀಲ್ದಾರ್ಗೆ ಸಲ್ಲಿಸಲಾಯಿತು.<br /> <br /> ಮುಖಂಡರಾದ ಬಿ.ಸಿ. ವೇಣುಗೋಪಾಲ್, ಗೋಣಿ ಮಾಲತೇಶ್, ಬೋಗಿರಾಮಪ್ಪ, ಹುಲ್ಮಾರ್ ಮಹೇಶ್, ಎಸ್.ಎಚ್. ಮಂಜುನಾಥ್, ಟಿ. ನೀಲಪ್ಪ, ನಾಗರಾಜ್ ಕಂಚುಗಾರ್, ಗುಡ್ಡಳ್ಳಿ ಶಿವಮೂರ್ತಿ, ಹುಲುಗಿ ಕೃಷ್ಣ, ತ್ಯಾಗರ್ತಿ ರವಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ: </strong>ಕಾಗಿನೆಲೆ ಸ್ವಾಮೀಜಿ ವಿರುದ್ಧ ಅಬಕಾರಿ ಸಚಿವ ರೇಣುಕಾಚಾರ್ಯ ಕ್ಲುಲ್ಲಕ ಹೇಳಿಕೆ ನೀಡಿರುವುದನ್ನು ವಿರೋಧಿಸಿ ಕುರುಬ ಸಮಾಜ ಕರೆ ನೀಡಿದ್ದ ಶಿಕಾರಿಪುರ ಬಂದ್ ಬುಧವಾರ ಸಂಪೂರ್ಣ ಯಶಸ್ವಿಯಾಗಿದೆ.<br /> <br /> ಪಟ್ಟಣದ ಎಲ್ಲಾ ವ್ಯಾಪಾರಸ್ಥರು ಬೆಳಿಗ್ಗೆಯಿಂದಲೇ ತಮ್ಮ ಅಂಗಡಿಗಳನ್ನು ತೆರೆಯದೇ ಬಂದ್ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದರು. ಯಾವುದೇ ಖಾಸಗಿ ಬಸ್ಗಳು ಸಂಚಾರ ನಡೆಸದ್ದರಿಂದಾಗಿ ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.<br /> <br /> ಕುರುಬ ಸಮಾಜದ ತಾಲ್ಲೂಕು ಅಧ್ಯಕ್ಷ ಬೋಗಿ ರಾಮಪ್ಪ ಕನಕ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಸಚಿವ ರೇಣುಕಾಚಾರ್ಯ ಅಣಕು ಶವಯಾತ್ರೆಯನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು. ಬಸ್ನಿಲ್ದಾಣದ ಸಮೀಪ ಪ್ರತಿಕೃತಿ ದಹಿಸಲಾಯಿತು.<br /> <br /> ಕುರುಬ ಸಮಾಜದ ಮುಖಂಡರು ಮಾತನಾಡಿ, ಕಾಗಿನೆಲೆ ಗುರುಪೀಠ ಕುರುಬ ಸಮಾಜ ಬಾಂಧವರಿಗೆ ಪುಣ್ಯಸ್ಥಳವಾಗಿದ್ದು, ಇದರ ಪೀಠಾಧಿಪತಿಗಳು ಗೌರವ ಸ್ಥಾನದಲ್ಲಿರುತ್ತಾರೆ. ಇವರ ವಿರುದ್ಧ ಕ್ಷುಲ್ಲಕ ಮಾತನ್ನಾಡುವುದು ಭಕ್ತಾದಿಗಳ ಮನಸ್ಸಿಗೆ ಧಕ್ಕೆಯಾಗುವ ಸಂಗತಿಯಾಗಿದೆ ಎಂದರು.<br /> <br /> ಸ್ವಾಮೀಜಿಗಳ ವಿರುದ್ಧ ಗೌರವಯುತವಾದ ಮಾತನಾಡಲು ಬಾರದ ಸಚಿವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು. ಈ ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಇಲ್ಲವಾದಲ್ಲಿ ಕ್ಷೇತ್ರದ ಶಾಸಕ ಬಿ.ಎಸ್. ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟಿಸುವುದಾಗಿ ಸಭೆಯಲ್ಲಿ ಹೇಳಿದರು.<br /> ರೇಣುಕಾಚಾರ್ಯರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸುವ ಮನವಿ ಪತ್ರವನ್ನು ತಹಶೀಲ್ದಾರ್ಗೆ ಸಲ್ಲಿಸಲಾಯಿತು.<br /> <br /> ಮುಖಂಡರಾದ ಬಿ.ಸಿ. ವೇಣುಗೋಪಾಲ್, ಗೋಣಿ ಮಾಲತೇಶ್, ಬೋಗಿರಾಮಪ್ಪ, ಹುಲ್ಮಾರ್ ಮಹೇಶ್, ಎಸ್.ಎಚ್. ಮಂಜುನಾಥ್, ಟಿ. ನೀಲಪ್ಪ, ನಾಗರಾಜ್ ಕಂಚುಗಾರ್, ಗುಡ್ಡಳ್ಳಿ ಶಿವಮೂರ್ತಿ, ಹುಲುಗಿ ಕೃಷ್ಣ, ತ್ಯಾಗರ್ತಿ ರವಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>