<p><strong>ಹೊಳಲ್ಕೆರೆ: </strong>ಭಾರತ ಪ್ರಪಂಚದಲ್ಲೇ ಅತಿವೇಗವಾಗಿ ಪ್ರಗತಿ ಪಥದಲ್ಲಿ ಸಾಗುತ್ತಿರುವ ದೇಶವಾಗಿದ್ದು, ಶೇ. 100ರಷ್ಟು ಸಾಕ್ಷರತೆ ಸಾಧಿಸುವುದರಿಂದ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.<br /> ಪಟ್ಟಣದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು ನೀಡಿದ್ದು, ಸರ್ವ ಶಿಕ್ಷಣ ಅಭಿಯಾನ ಕಾರ್ಯಕ್ರಮದ ಮೂಲಕ ಹಳ್ಳಿಗಾಡಿನ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಿದೆ. ರಾಜ್ಯ ಸರ್ಕಾರವೂ ಶಿಕ್ಷಣಕ್ಕಾಗಿ ವರ್ಷಕ್ಕೆ ರೂ 12 ಸಾವಿರ ಕೋಟಿ ಖರ್ಚು ಮಾಡುತ್ತಿದ್ದು, ಸಾಕ್ಷರತೆ ಸಾಧಿಸಲು ಪ್ರಯತ್ನಿಸುತ್ತಿದೆ ಎಂದರು.<br /> <br /> ಮೂರೂವರೆ ವರ್ಷಗಳಲ್ಲಿ ತಾಲ್ಲೂಕು ಇನ್ನಿಲ್ಲದ ಅಭಿವೃದ್ಧಿ ಕಂಡಿದೆ. ಸುಮಾರು ರೂ 450 ಕೋಟಿ ವೆಚ್ಚದಲ್ಲಿ ಶಾಲಾ-ಕಾಲೇಜು, ರಸ್ತೆ, ಆಸ್ಪತ್ರೆ, ಕುಡಿಯುವ ನೀರಿನ ಯೋಜನೆಗಳು ಮತ್ತಿತರ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಪಡೆದಿದೆ. ನಿಸ್ವಾರ್ಥದಿಂದ ಕೆಲಸ ಮಾಡಿದರೆ ಮಾತ್ರ ನಿರೀಕ್ಷಿತ ಸಾಧನೆ ಮಾಡಬಹುದಾಗಿದ್ದು, ಎಲ್ಲರೂ ರಾಷ್ಟ್ರೀಯ ಭಾವೈಕ್ಯ ಹೊಂದಬೇಕು ಎಂದರು.<br /> <br /> ತಹಶೀಲ್ದಾರ್ ಬಿ.ಬಿ. ಸರೋಜಾ ಮಾತನಾಡಿ, ದೇಶದಲ್ಲಿ ಇನ್ನೂ ಹಸಿವು, ಬಡತನ, ಅನಕ್ಷರತೆ, ಭಯೋತ್ಪಾದನೆಯಂತಹ ಪಿಡುಗುಗಳು ಜೀವಂತವಾಗಿವೆ. ಎಲ್ಲರೂ ಸುಶಿಕ್ಷಿತರಾಗುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಬೇಕು ಎಂದರು. <br /> ನಿವೃತ್ತ ಶಿಕ್ಷಕ ಬಾಬೂರಾವ್ ಅವರನ್ನು ಸನ್ಮಾನಿಸಲಾಯಿತು.<br /> ಜಿ.ಪಂ. ಸದಸ್ಯ ಪಿ.ಆರ್. ಶಿವಕುಮಾರ್, ತಾ.ಪಂ. ಅಧ್ಯಕ್ಷೆ ಲಕ್ಷ್ಮೀ, ಉಪಾಧ್ಯಕ್ಷೆ ಪಾರ್ವತಮ್ಮ, ರವಿ, ಕೃಷ್ಣಮೂರ್ತಿ, ಪ.ಪಂ. ಅಧ್ಯಕ್ಷೆ ಗೀತಾಕೃಷ್ಣಮೂರ್ತಿ, ಲಿಂಗರಾಜು, ಚನ್ನಕೇಶವ, ಕೆ.ಸಿ. ರಮೇಶ್, ಡಾ.ಎನ್.ಬಿ. ಸಜ್ಜನ್ ಇದ್ದರು. <br /> ಅಸಮಾನತೆ ಹೋಗಲಾಡಿಸಿ<br /> ಧರ್ಮಪುರ: ಸಾಮಾಜಿಕ ಅಸಮಾನತೆ ಹೋಗಲಾಡಿಸುವುದರ ಮೂಲಕ ದೇಶದಲ್ಲಿ ತಾಂಡವಾಡುತ್ತಿರುವ ಭಯೋತ್ಪಾದನೆ ಕಿತ್ತೊಗೆಯಬೇಕು ಎಂದು ಧರ್ಮಪುರ ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ.ಎಸ್. ನರೇಂದ್ರಪ್ಪ ಹೇಳಿದರು.<br /> ಇಲ್ಲಿನ ಪಂಚಲಿಂಗೇಶ್ವರ ಪದವಿಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗಣ ರಾಜ್ಯೋತ್ಸವ ಕಾರ್ಯಕ್ರದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.<br /> ಗಣರಾಜ್ಯೋತ್ಸವ ಬರೀ ಆಚರಣೆಗೆ ಸೀಮಿತವಾಗಿರದೆ, ಗುಣ ರಾಜ್ಯಗಳಾಗುವುದರ ಮೂಲಕ ಸಾಮಾಜಿಕ ಸಾಮರಸ್ಯವನ್ನು ಬಿತ್ತಬೇಕು. ಬಡತನ, ದಾರಿದ್ರ್ಯ, ನಿರುದ್ಯೋಗ ಸಮಸ್ಯೆ ಹೋಗಲಾಡಿಸುವಂತಾಗಬೇಕು ಎಂದರು. <br /> ಪ್ರಾಂಶುಪಾಲ ಬಿ. ಶ್ರೀನಿವಾಸ್, ಉಪನ್ಯಾಸಕ ಬೊಪ್ಪಣ್ಣ, ಎಂ.ಎನ್. ರಂಗಸ್ವಾಮಿ, ವಿದ್ಯಾರ್ಥಿ ಚಿದಾನಂದ ಮಾತನಾಡಿದರು.<br /> ಧರ್ಮಪುರ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ರಜಾಕ್ ಉರ್ರೆಹಮಾನ್, ಖಜಾಂಚಿ ಕಣುಮಪ್ಪ, ಬಸವರಾಜು, ತಿಪ್ಪೇಸ್ವಾಮಿ, ಗ್ರಾ.ಪಂ. ಸದಸ್ಯರಾದ ಹುಸೇನ್ಬೀ, ಅಮಾನುಲ್ಲಾ, ರಂಗಮ್ಮ, ಕೆ. ಪಾಂಡುರಂಗಪ್ಪ, ಲಕ್ಷ್ಮಿಕಾಂತ್ ಇದ್ದರು.<br /> ಇಲ್ಲಿನ ಗ್ರಾ.ಪಂ.ನಲ್ಲಿ ಅಧ್ಯಕ್ಷೆ ಲಕ್ಷ್ಮೀದೇವಿ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ಬುಡೇನ್, ಸದಸ್ಯರಾದ ಅಮಾನುಲ್ಲಾ, ರಂಗಮ್ಮ, ಹುಸೇನ್ಬೀ, ಗೋವಿಂದಪ್ಪ, ಹನುಮಂತರಾಯ, ರಾಜು, ಪ್ರಭುಪಟೇಲ್, ಪಿಡಿಒ ಶ್ರೀನಿವಾಸ್, ಕಾರ್ಯದರ್ಶಿ ಕಸ್ತೂರಿನಾಯ್ಕ ಇದ್ದರು.<br /> <br /> ದೇವರಕೊಟ್ಟ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ-ಎಸ್ಡಿಎಂಸಿ ಅಧ್ಯಕ್ಷ ಮಂಜೇಶ್ ಧ್ವಜಾರೋಹಣ ನೆರವೇರಿಸಿದರು. ಕರವೇ ಹೋಬಳಿ ಅಧ್ಯಕ್ಷ ರಂಗಸ್ವಾಮಿ, ಉಪಾಧ್ಯಕ್ಷ ನಾಗರಾಜು, ರುದ್ರೇಶ್, ಲಕ್ಷ್ಮಮ್ಮ, ಮುಖ್ಯ ಶಿಕ್ಷಕ ನಾರಾಯಣಪ್ಪ, ಎಸ್ಡಿಎಂಸಿ ಉಪಾಧ್ಯಕ್ಷೆ ಜಯಮ್ಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ: </strong>ಭಾರತ ಪ್ರಪಂಚದಲ್ಲೇ ಅತಿವೇಗವಾಗಿ ಪ್ರಗತಿ ಪಥದಲ್ಲಿ ಸಾಗುತ್ತಿರುವ ದೇಶವಾಗಿದ್ದು, ಶೇ. 100ರಷ್ಟು ಸಾಕ್ಷರತೆ ಸಾಧಿಸುವುದರಿಂದ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.<br /> ಪಟ್ಟಣದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು ನೀಡಿದ್ದು, ಸರ್ವ ಶಿಕ್ಷಣ ಅಭಿಯಾನ ಕಾರ್ಯಕ್ರಮದ ಮೂಲಕ ಹಳ್ಳಿಗಾಡಿನ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಿದೆ. ರಾಜ್ಯ ಸರ್ಕಾರವೂ ಶಿಕ್ಷಣಕ್ಕಾಗಿ ವರ್ಷಕ್ಕೆ ರೂ 12 ಸಾವಿರ ಕೋಟಿ ಖರ್ಚು ಮಾಡುತ್ತಿದ್ದು, ಸಾಕ್ಷರತೆ ಸಾಧಿಸಲು ಪ್ರಯತ್ನಿಸುತ್ತಿದೆ ಎಂದರು.<br /> <br /> ಮೂರೂವರೆ ವರ್ಷಗಳಲ್ಲಿ ತಾಲ್ಲೂಕು ಇನ್ನಿಲ್ಲದ ಅಭಿವೃದ್ಧಿ ಕಂಡಿದೆ. ಸುಮಾರು ರೂ 450 ಕೋಟಿ ವೆಚ್ಚದಲ್ಲಿ ಶಾಲಾ-ಕಾಲೇಜು, ರಸ್ತೆ, ಆಸ್ಪತ್ರೆ, ಕುಡಿಯುವ ನೀರಿನ ಯೋಜನೆಗಳು ಮತ್ತಿತರ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಪಡೆದಿದೆ. ನಿಸ್ವಾರ್ಥದಿಂದ ಕೆಲಸ ಮಾಡಿದರೆ ಮಾತ್ರ ನಿರೀಕ್ಷಿತ ಸಾಧನೆ ಮಾಡಬಹುದಾಗಿದ್ದು, ಎಲ್ಲರೂ ರಾಷ್ಟ್ರೀಯ ಭಾವೈಕ್ಯ ಹೊಂದಬೇಕು ಎಂದರು.<br /> <br /> ತಹಶೀಲ್ದಾರ್ ಬಿ.ಬಿ. ಸರೋಜಾ ಮಾತನಾಡಿ, ದೇಶದಲ್ಲಿ ಇನ್ನೂ ಹಸಿವು, ಬಡತನ, ಅನಕ್ಷರತೆ, ಭಯೋತ್ಪಾದನೆಯಂತಹ ಪಿಡುಗುಗಳು ಜೀವಂತವಾಗಿವೆ. ಎಲ್ಲರೂ ಸುಶಿಕ್ಷಿತರಾಗುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಬೇಕು ಎಂದರು. <br /> ನಿವೃತ್ತ ಶಿಕ್ಷಕ ಬಾಬೂರಾವ್ ಅವರನ್ನು ಸನ್ಮಾನಿಸಲಾಯಿತು.<br /> ಜಿ.ಪಂ. ಸದಸ್ಯ ಪಿ.ಆರ್. ಶಿವಕುಮಾರ್, ತಾ.ಪಂ. ಅಧ್ಯಕ್ಷೆ ಲಕ್ಷ್ಮೀ, ಉಪಾಧ್ಯಕ್ಷೆ ಪಾರ್ವತಮ್ಮ, ರವಿ, ಕೃಷ್ಣಮೂರ್ತಿ, ಪ.ಪಂ. ಅಧ್ಯಕ್ಷೆ ಗೀತಾಕೃಷ್ಣಮೂರ್ತಿ, ಲಿಂಗರಾಜು, ಚನ್ನಕೇಶವ, ಕೆ.ಸಿ. ರಮೇಶ್, ಡಾ.ಎನ್.ಬಿ. ಸಜ್ಜನ್ ಇದ್ದರು. <br /> ಅಸಮಾನತೆ ಹೋಗಲಾಡಿಸಿ<br /> ಧರ್ಮಪುರ: ಸಾಮಾಜಿಕ ಅಸಮಾನತೆ ಹೋಗಲಾಡಿಸುವುದರ ಮೂಲಕ ದೇಶದಲ್ಲಿ ತಾಂಡವಾಡುತ್ತಿರುವ ಭಯೋತ್ಪಾದನೆ ಕಿತ್ತೊಗೆಯಬೇಕು ಎಂದು ಧರ್ಮಪುರ ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ.ಎಸ್. ನರೇಂದ್ರಪ್ಪ ಹೇಳಿದರು.<br /> ಇಲ್ಲಿನ ಪಂಚಲಿಂಗೇಶ್ವರ ಪದವಿಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗಣ ರಾಜ್ಯೋತ್ಸವ ಕಾರ್ಯಕ್ರದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.<br /> ಗಣರಾಜ್ಯೋತ್ಸವ ಬರೀ ಆಚರಣೆಗೆ ಸೀಮಿತವಾಗಿರದೆ, ಗುಣ ರಾಜ್ಯಗಳಾಗುವುದರ ಮೂಲಕ ಸಾಮಾಜಿಕ ಸಾಮರಸ್ಯವನ್ನು ಬಿತ್ತಬೇಕು. ಬಡತನ, ದಾರಿದ್ರ್ಯ, ನಿರುದ್ಯೋಗ ಸಮಸ್ಯೆ ಹೋಗಲಾಡಿಸುವಂತಾಗಬೇಕು ಎಂದರು. <br /> ಪ್ರಾಂಶುಪಾಲ ಬಿ. ಶ್ರೀನಿವಾಸ್, ಉಪನ್ಯಾಸಕ ಬೊಪ್ಪಣ್ಣ, ಎಂ.ಎನ್. ರಂಗಸ್ವಾಮಿ, ವಿದ್ಯಾರ್ಥಿ ಚಿದಾನಂದ ಮಾತನಾಡಿದರು.<br /> ಧರ್ಮಪುರ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ರಜಾಕ್ ಉರ್ರೆಹಮಾನ್, ಖಜಾಂಚಿ ಕಣುಮಪ್ಪ, ಬಸವರಾಜು, ತಿಪ್ಪೇಸ್ವಾಮಿ, ಗ್ರಾ.ಪಂ. ಸದಸ್ಯರಾದ ಹುಸೇನ್ಬೀ, ಅಮಾನುಲ್ಲಾ, ರಂಗಮ್ಮ, ಕೆ. ಪಾಂಡುರಂಗಪ್ಪ, ಲಕ್ಷ್ಮಿಕಾಂತ್ ಇದ್ದರು.<br /> ಇಲ್ಲಿನ ಗ್ರಾ.ಪಂ.ನಲ್ಲಿ ಅಧ್ಯಕ್ಷೆ ಲಕ್ಷ್ಮೀದೇವಿ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ಬುಡೇನ್, ಸದಸ್ಯರಾದ ಅಮಾನುಲ್ಲಾ, ರಂಗಮ್ಮ, ಹುಸೇನ್ಬೀ, ಗೋವಿಂದಪ್ಪ, ಹನುಮಂತರಾಯ, ರಾಜು, ಪ್ರಭುಪಟೇಲ್, ಪಿಡಿಒ ಶ್ರೀನಿವಾಸ್, ಕಾರ್ಯದರ್ಶಿ ಕಸ್ತೂರಿನಾಯ್ಕ ಇದ್ದರು.<br /> <br /> ದೇವರಕೊಟ್ಟ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ-ಎಸ್ಡಿಎಂಸಿ ಅಧ್ಯಕ್ಷ ಮಂಜೇಶ್ ಧ್ವಜಾರೋಹಣ ನೆರವೇರಿಸಿದರು. ಕರವೇ ಹೋಬಳಿ ಅಧ್ಯಕ್ಷ ರಂಗಸ್ವಾಮಿ, ಉಪಾಧ್ಯಕ್ಷ ನಾಗರಾಜು, ರುದ್ರೇಶ್, ಲಕ್ಷ್ಮಮ್ಮ, ಮುಖ್ಯ ಶಿಕ್ಷಕ ನಾರಾಯಣಪ್ಪ, ಎಸ್ಡಿಎಂಸಿ ಉಪಾಧ್ಯಕ್ಷೆ ಜಯಮ್ಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>