<p>ಕೊಳ್ಳೇಗಾಲ: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿಯ ಮಹಾರಥೋತ್ಸವವು ಬುಧವಾರ ವಿಜೃಂಭಣೆಯಿಂದ ನಡೆಯಿತು. <br /> <br /> ಬೆಳಿಗ್ಗೆ 10.55 ಕ್ಕೆ ಉತ್ಸವ ಮೂರ್ತಿಯನ್ನು ವಿವಿಧ ಹೂಗಳಿಂದ ಅಲಂಕರಿಸಿದ್ದ ಮಹಾರಥದಲ್ಲಿ ಕುಳ್ಳಿರಿಸಿದ ನಂತರ, ಸಾಲೂರು ಮಠದ ಗುರುಸ್ವಾಮಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಿದರು. <br /> <br /> ನಂತರ ಭಕ್ತರು ಉಘೇ ಮಾದಪ್ಪ ಉಘೇ... ಎಂಬ ಹರ್ಷೋದ್ಘಾರದೊಂದಿಗೆ ರಥವನ್ನು ಎಳೆದರು. ಹಣ್ಣು, ಜವನ, ದವಸ, ಧಾನ್ಯಗಳನ್ನು ಎರಚಿ ಸಂಭ್ರಮಿಸಿದರು.<br /> <br /> ರಥೋತ್ಸವದ ನಂತರ ದೇವಸ್ಥಾನದ ಗರ್ಭ ಗುಡಿಯ ಎದುರು ಅನ್ನ ಬ್ರಹ್ಮೋತ್ಸವ ನಡೆಯಿತು. ದೀಪಾವಳಿ ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರಿಗೆ ಉಚಿತವಾಗಿ ಲಾಡು ವಿತರಿಸುತ್ತಿದ್ದುದು ವಿಶೇಷವಾಗಿತ್ತು. <br /> <br /> ವಿಶೇಷ ಸೌಲಭ್ಯ: ದೀಪಾವಳಿ ಜಾತ್ರೆಗೆ ಆಗಮಿಸಿದ್ದ ಭಕ್ತರ ಅನುಕೂಲಕ್ಕಾಗಿ ಜಿಲ್ಲಾಡಳಿತ ಹಾಗೂ ದೇವಾಲಯದ ವತಿಯಿಂದ ಶುದ್ಧ ಕುಡಿಯುವ ನೀರು, ಶೌಚಾಲಯ, ಬಸ್ ವ್ಯವಸ್ಥೆ, ಶೆಲ್ಟರ್ ವ್ಯವಸ್ಥೆ, ಪಾರ್ಕಿಂಗ್, ವಸತಿ ಸೌಲಭ್ಯ, ತುರ್ತು ಚಿಕಿತ್ಸಾ ಘಟಕ ಸೇರಿದಂತೆ ಇನ್ನೂ ಹಲವು ಸೌಲಭ್ಯ ಕಲ್ಪಿಸಲಾಗಿತ್ತು. <br /> ಬಂದೋಬಸ್ತ್: ಜಾತ್ರಾ ಮಹೋತ್ಸವದಲ್ಲಿ ನಡೆಯುವ ಸೇವಾ ಉತ್ಸವಾದಿಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಡಿ.ವೈ.ಎಸ್.ಪಿ. ಚನ್ನಬಸವಣ್ಣ ಅವರ ಮಾರ್ಗದರ್ಶನದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. <br /> <br /> ಮಹಾರಥೋತ್ಸವದಲ್ಲಿ ದೇವಾಲಯದ ಆಡಳಿತಾಧಿಕಾರಿ ಜಯವಿಭವಸ್ವಾಮಿ, ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಂ.ಶಿವಲಿಂಗೇಗೌಡ, ದೇವಾಲಯದ ಮಾಧುರಾಜ್, ಸದಾಶಿವಪ್ಪ, ನಾಗರಾಜು, ಮಹದೇವಸ್ವಾಮಿ, ಸ್ವಾಮಿ, ಬಸವರಾಜು, ಮಲೆಯಪ್ಪ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿಯ ಮಹಾರಥೋತ್ಸವವು ಬುಧವಾರ ವಿಜೃಂಭಣೆಯಿಂದ ನಡೆಯಿತು. <br /> <br /> ಬೆಳಿಗ್ಗೆ 10.55 ಕ್ಕೆ ಉತ್ಸವ ಮೂರ್ತಿಯನ್ನು ವಿವಿಧ ಹೂಗಳಿಂದ ಅಲಂಕರಿಸಿದ್ದ ಮಹಾರಥದಲ್ಲಿ ಕುಳ್ಳಿರಿಸಿದ ನಂತರ, ಸಾಲೂರು ಮಠದ ಗುರುಸ್ವಾಮಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಿದರು. <br /> <br /> ನಂತರ ಭಕ್ತರು ಉಘೇ ಮಾದಪ್ಪ ಉಘೇ... ಎಂಬ ಹರ್ಷೋದ್ಘಾರದೊಂದಿಗೆ ರಥವನ್ನು ಎಳೆದರು. ಹಣ್ಣು, ಜವನ, ದವಸ, ಧಾನ್ಯಗಳನ್ನು ಎರಚಿ ಸಂಭ್ರಮಿಸಿದರು.<br /> <br /> ರಥೋತ್ಸವದ ನಂತರ ದೇವಸ್ಥಾನದ ಗರ್ಭ ಗುಡಿಯ ಎದುರು ಅನ್ನ ಬ್ರಹ್ಮೋತ್ಸವ ನಡೆಯಿತು. ದೀಪಾವಳಿ ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರಿಗೆ ಉಚಿತವಾಗಿ ಲಾಡು ವಿತರಿಸುತ್ತಿದ್ದುದು ವಿಶೇಷವಾಗಿತ್ತು. <br /> <br /> ವಿಶೇಷ ಸೌಲಭ್ಯ: ದೀಪಾವಳಿ ಜಾತ್ರೆಗೆ ಆಗಮಿಸಿದ್ದ ಭಕ್ತರ ಅನುಕೂಲಕ್ಕಾಗಿ ಜಿಲ್ಲಾಡಳಿತ ಹಾಗೂ ದೇವಾಲಯದ ವತಿಯಿಂದ ಶುದ್ಧ ಕುಡಿಯುವ ನೀರು, ಶೌಚಾಲಯ, ಬಸ್ ವ್ಯವಸ್ಥೆ, ಶೆಲ್ಟರ್ ವ್ಯವಸ್ಥೆ, ಪಾರ್ಕಿಂಗ್, ವಸತಿ ಸೌಲಭ್ಯ, ತುರ್ತು ಚಿಕಿತ್ಸಾ ಘಟಕ ಸೇರಿದಂತೆ ಇನ್ನೂ ಹಲವು ಸೌಲಭ್ಯ ಕಲ್ಪಿಸಲಾಗಿತ್ತು. <br /> ಬಂದೋಬಸ್ತ್: ಜಾತ್ರಾ ಮಹೋತ್ಸವದಲ್ಲಿ ನಡೆಯುವ ಸೇವಾ ಉತ್ಸವಾದಿಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಡಿ.ವೈ.ಎಸ್.ಪಿ. ಚನ್ನಬಸವಣ್ಣ ಅವರ ಮಾರ್ಗದರ್ಶನದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. <br /> <br /> ಮಹಾರಥೋತ್ಸವದಲ್ಲಿ ದೇವಾಲಯದ ಆಡಳಿತಾಧಿಕಾರಿ ಜಯವಿಭವಸ್ವಾಮಿ, ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಂ.ಶಿವಲಿಂಗೇಗೌಡ, ದೇವಾಲಯದ ಮಾಧುರಾಜ್, ಸದಾಶಿವಪ್ಪ, ನಾಗರಾಜು, ಮಹದೇವಸ್ವಾಮಿ, ಸ್ವಾಮಿ, ಬಸವರಾಜು, ಮಲೆಯಪ್ಪ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>