<p><strong>ಮಂಡ್ಯ:</strong> ಜಿಲ್ಲೆಯ ಮೇಲುಕೋಟೆಯಲ್ಲಿ ಚಲುವನಾರಾಯಣಸ್ವಾಮಿಯ ವಿಶ್ವವಿಖ್ಯಾತ ವೈರಮುಡಿ ಉತ್ಸವದ ಸಂಭ್ರಮಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು.<br /> <br /> ಭಗವಂತನ ಕಿರೀಟವೆಂದೇ ಕರೆಯಲಾಗುವ ವಜ್ರಖಚಿತ ವೈರಮುಡಿ ಕಿರೀಟವನ್ನು ಧರಿಸಿದ ಚಲುವನಾರಾಯಣಸ್ವಾಮಿಯ ದರ್ಶನ ಪಡೆದು ಪುನೀತರಾದರು. ಭಕ್ತರ ಸಂಭ್ರಮ, ಸಡಗರ ಮುಗಿಲು ಮುಟ್ಟಿತು.<br /> <br /> ಬೆಳಿಗ್ಗೆ ಮಂಡ್ಯದಿಂದ ಬಿಗಿಭದ್ರತೆಯಲ್ಲಿ ತರಲಾದ ಕಿರೀಟ ಹಾಗೂ ಇನ್ನಿತರ ಆಭರಣಗಳನ್ನು ಪಾರ್ವತಿ ಮಂಟಪದಿಂದ ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆಯಲ್ಲಿ ತರಲಾಯಿತು. ನಂತರ ಆಭರಣಗಳನ್ನು ಸ್ಥಾನಿಕರಿಗೆ ಹಸ್ತಾಂತರಿಸಲಾಯಿತು.<br /> <br /> ದೇವಸ್ಥಾನದ ಸ್ಥಾನಿಕರು ಸ್ವಾಮಿಯನ್ನು ಅಲಂಕರಿಸಿದರು. ರಾತ್ರಿ ಯಾಗಶಾಲೆಯಲ್ಲಿ ಮತ್ತು ಗರುಡದೇವನ ಮೆರವಣಿಗೆ ನಂತರ ಬ್ರಹ್ಮೋತ್ಸವಕ್ಕೆ ಚಾಲನೆ ನೀಡಲಾಯಿತು.<br /> <br /> ವಜ್ರದ ಕಿರೀಟ ಧರಿಸಿದ ಚಲುವನಾರಾಯಣಸ್ವಾಮಿಯು ಹೂವಿನಿಂದ ಅಲಂಕೃತವಾದ ಪಲ್ಲಕ್ಕಿಯಲ್ಲಿ ರಾಜಬೀದಿಗೆ ಬರುತ್ತಿದ್ದಂತೆಯೇ ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಗೋವಿಂದಾ... ಗೋವಿಂದಾ ಎನ್ನುವ ಭಕ್ತರ ಕೂಗು ಜೋರಾಯಿತು.<br /> <br /> ರಾಜ್ಯದ ವಿವಿಧೆಡೆಗಳಿಂದಷ್ಟೇ ಅಲ್ಲದ ತಮಿಳುನಾಡು, ಆಂಧ್ರಪ್ರದೇಶ, ಕೇರಳದಿಂದಲೂ ಭಕ್ತರು ಆಗಮಿಸಿದ್ದರು .<br /> ಮಂಟಪ, ದೇವಸ್ಥಾನದ ರಾಜಬೀದಿಗಳನ್ನು ವಿದ್ಯುತ್ ದೀಪ ಗಳಿಂದ ಅಲಂಕರಿಸಲಾಗಿತ್ತು. ಉತ್ಸವ ವೀಕ್ಷಣೆಗೆ ಅನುಕೂಲವಾಗಲಿ ಎಂದು ಅಲ್ಲಲ್ಲಿ ಎಲ್ಸಿಡಿಗಳನ್ನು ಅಳವಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಜಿಲ್ಲೆಯ ಮೇಲುಕೋಟೆಯಲ್ಲಿ ಚಲುವನಾರಾಯಣಸ್ವಾಮಿಯ ವಿಶ್ವವಿಖ್ಯಾತ ವೈರಮುಡಿ ಉತ್ಸವದ ಸಂಭ್ರಮಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು.<br /> <br /> ಭಗವಂತನ ಕಿರೀಟವೆಂದೇ ಕರೆಯಲಾಗುವ ವಜ್ರಖಚಿತ ವೈರಮುಡಿ ಕಿರೀಟವನ್ನು ಧರಿಸಿದ ಚಲುವನಾರಾಯಣಸ್ವಾಮಿಯ ದರ್ಶನ ಪಡೆದು ಪುನೀತರಾದರು. ಭಕ್ತರ ಸಂಭ್ರಮ, ಸಡಗರ ಮುಗಿಲು ಮುಟ್ಟಿತು.<br /> <br /> ಬೆಳಿಗ್ಗೆ ಮಂಡ್ಯದಿಂದ ಬಿಗಿಭದ್ರತೆಯಲ್ಲಿ ತರಲಾದ ಕಿರೀಟ ಹಾಗೂ ಇನ್ನಿತರ ಆಭರಣಗಳನ್ನು ಪಾರ್ವತಿ ಮಂಟಪದಿಂದ ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆಯಲ್ಲಿ ತರಲಾಯಿತು. ನಂತರ ಆಭರಣಗಳನ್ನು ಸ್ಥಾನಿಕರಿಗೆ ಹಸ್ತಾಂತರಿಸಲಾಯಿತು.<br /> <br /> ದೇವಸ್ಥಾನದ ಸ್ಥಾನಿಕರು ಸ್ವಾಮಿಯನ್ನು ಅಲಂಕರಿಸಿದರು. ರಾತ್ರಿ ಯಾಗಶಾಲೆಯಲ್ಲಿ ಮತ್ತು ಗರುಡದೇವನ ಮೆರವಣಿಗೆ ನಂತರ ಬ್ರಹ್ಮೋತ್ಸವಕ್ಕೆ ಚಾಲನೆ ನೀಡಲಾಯಿತು.<br /> <br /> ವಜ್ರದ ಕಿರೀಟ ಧರಿಸಿದ ಚಲುವನಾರಾಯಣಸ್ವಾಮಿಯು ಹೂವಿನಿಂದ ಅಲಂಕೃತವಾದ ಪಲ್ಲಕ್ಕಿಯಲ್ಲಿ ರಾಜಬೀದಿಗೆ ಬರುತ್ತಿದ್ದಂತೆಯೇ ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಗೋವಿಂದಾ... ಗೋವಿಂದಾ ಎನ್ನುವ ಭಕ್ತರ ಕೂಗು ಜೋರಾಯಿತು.<br /> <br /> ರಾಜ್ಯದ ವಿವಿಧೆಡೆಗಳಿಂದಷ್ಟೇ ಅಲ್ಲದ ತಮಿಳುನಾಡು, ಆಂಧ್ರಪ್ರದೇಶ, ಕೇರಳದಿಂದಲೂ ಭಕ್ತರು ಆಗಮಿಸಿದ್ದರು .<br /> ಮಂಟಪ, ದೇವಸ್ಥಾನದ ರಾಜಬೀದಿಗಳನ್ನು ವಿದ್ಯುತ್ ದೀಪ ಗಳಿಂದ ಅಲಂಕರಿಸಲಾಗಿತ್ತು. ಉತ್ಸವ ವೀಕ್ಷಣೆಗೆ ಅನುಕೂಲವಾಗಲಿ ಎಂದು ಅಲ್ಲಲ್ಲಿ ಎಲ್ಸಿಡಿಗಳನ್ನು ಅಳವಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>