<p>ಕಂಪ್ಲಿ: ಸಮೀಪದ ಹೊಸ ದರೋಜಿ ಗ್ರಾಮದಲ್ಲಿ ಭಾನುವಾರ ಶ್ರೀ ಕೋಡಿ ವೀರಭದ್ರೇಶ್ವರ ಮಹಾ ರಥೋತ್ಸವ ಸಂಭ್ರಮ, ಸಡಗರಗಳಿಂದ ನಡೆಯಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.<br /> <br /> ವಿವಿಧ ಪುಷ್ಪಗಳಿಂದ ವಿಶೇಷವಾಗಿ ಅಲಂಕೃತಗೊಂಡಿದ್ದ 45 ಅಡಿ ಎತ್ತರದ ತೇರನ್ನು ಸಂಜೆ ಸಾರ್ವಜನಿಕರು ಜಯಘೋಷಗಳೊಂದಿಗೆ ಎಳೆದು ಭಕ್ತಿಸೇವೆ ಸಮರ್ಪಿಸಿದರು. ತೇರು ಸಾಗುವ ಸಂದರ್ಭದಲ್ಲಿ ಅನೇಕ ಭಕ್ತರು ಹಣ್ಣು-ಹೂವು ಎಸೆದು ಹರಕೆ ತೀರಿಸಿದರು.<br /> <br /> ರಥೋತ್ಸವದ ಅಂಗವಾಗಿ ದರೋಜಿ ಕೆರೆ ಕೋಡಿ ಬಳಿ ಬೆಟ್ಟದಲ್ಲಿರುವ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ರುದ್ರಾಭಿಷೇಕ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧೆ ಹಾಗೂ ಭಕ್ತಿಯಿಂದ ನಡೆದವು. <br /> <br /> ಕಳೆದ ರಾತ್ರಿ ನಡೆದ ಅಗ್ನಿಕುಂಡೋತ್ಸವದಲ್ಲಿ ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸಿದ್ದರು. ಕೆಲ ಭಕ್ತರು ಅಗ್ನಿಕುಂಡದಲ್ಲಿ ಹಾಯುವ ಮೂಲಕ ಹರಕೆ ತೀರಿಸಿದರು. <br /> <br /> ದರೋಜಿ ದೇವಸ್ಥಾನ ಸೇವಾ ಸಮಿತಿ ಮತ್ತು ಸದ್ಭಕ್ತ ಮಂಡಳಿಯವರು, ರೈತ ಮುಖಂಡರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.<br /> <br /> ಕೋಡಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹೊಸದರೋಜಿ ಭೋವಿ ವಿನಾಯಕ ನಾಟಕ ಸಂಘದವರು ರಾತ್ರಿ `ಧರ್ಮ ಅಶ್ವಮೇಧ ಯಾಗ ಅರ್ಥಾತ್ `ಪ್ರಮೀಳೆ ದರ್ಬಾರ್~ ಪೌರಾಣಿಕ ಬಯಲಾಟ ಪ್ರದರ್ಶಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಂಪ್ಲಿ: ಸಮೀಪದ ಹೊಸ ದರೋಜಿ ಗ್ರಾಮದಲ್ಲಿ ಭಾನುವಾರ ಶ್ರೀ ಕೋಡಿ ವೀರಭದ್ರೇಶ್ವರ ಮಹಾ ರಥೋತ್ಸವ ಸಂಭ್ರಮ, ಸಡಗರಗಳಿಂದ ನಡೆಯಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.<br /> <br /> ವಿವಿಧ ಪುಷ್ಪಗಳಿಂದ ವಿಶೇಷವಾಗಿ ಅಲಂಕೃತಗೊಂಡಿದ್ದ 45 ಅಡಿ ಎತ್ತರದ ತೇರನ್ನು ಸಂಜೆ ಸಾರ್ವಜನಿಕರು ಜಯಘೋಷಗಳೊಂದಿಗೆ ಎಳೆದು ಭಕ್ತಿಸೇವೆ ಸಮರ್ಪಿಸಿದರು. ತೇರು ಸಾಗುವ ಸಂದರ್ಭದಲ್ಲಿ ಅನೇಕ ಭಕ್ತರು ಹಣ್ಣು-ಹೂವು ಎಸೆದು ಹರಕೆ ತೀರಿಸಿದರು.<br /> <br /> ರಥೋತ್ಸವದ ಅಂಗವಾಗಿ ದರೋಜಿ ಕೆರೆ ಕೋಡಿ ಬಳಿ ಬೆಟ್ಟದಲ್ಲಿರುವ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ರುದ್ರಾಭಿಷೇಕ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧೆ ಹಾಗೂ ಭಕ್ತಿಯಿಂದ ನಡೆದವು. <br /> <br /> ಕಳೆದ ರಾತ್ರಿ ನಡೆದ ಅಗ್ನಿಕುಂಡೋತ್ಸವದಲ್ಲಿ ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸಿದ್ದರು. ಕೆಲ ಭಕ್ತರು ಅಗ್ನಿಕುಂಡದಲ್ಲಿ ಹಾಯುವ ಮೂಲಕ ಹರಕೆ ತೀರಿಸಿದರು. <br /> <br /> ದರೋಜಿ ದೇವಸ್ಥಾನ ಸೇವಾ ಸಮಿತಿ ಮತ್ತು ಸದ್ಭಕ್ತ ಮಂಡಳಿಯವರು, ರೈತ ಮುಖಂಡರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.<br /> <br /> ಕೋಡಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹೊಸದರೋಜಿ ಭೋವಿ ವಿನಾಯಕ ನಾಟಕ ಸಂಘದವರು ರಾತ್ರಿ `ಧರ್ಮ ಅಶ್ವಮೇಧ ಯಾಗ ಅರ್ಥಾತ್ `ಪ್ರಮೀಳೆ ದರ್ಬಾರ್~ ಪೌರಾಣಿಕ ಬಯಲಾಟ ಪ್ರದರ್ಶಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>