<p><strong>ಕೋಲಾರ: </strong>ತಾಲೂಕಿನ ಜನ್ನಘಟ್ಟ ಗ್ರಾಮದಲ್ಲಿ ಲೋಕ ಕಲ್ಯಾಣಾರ್ಥ ಆಯೋಜಿಸಿದ್ದ ಶ್ರೀನಿವಾಸ ಕಲ್ಯಾಣೋತ್ಸವ ಈಚೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.<br /> <br /> ಗ್ರಾಮದ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ಕಲ್ಯಾಣೋತ್ಸವದಲ್ಲಿ ತಿರುಪತಿಯ ಮಾದರಿಯಲ್ಲೇ ಮಂಟಪಗಳನ್ನುನಿರ್ಮಿಸಿ ತಿರುಮಲದಿಂದಲೇ ಶ್ರೀನಿವಾಸ- ಪದ್ಮಾವತಿಯ ಮೂರ್ತಿಗಳನ್ನು ತರಿಸಿ ಪೂಜೆ ಸಲ್ಲಿಸಲಾಯಿತು.<br /> ಶ್ರೀನಿವಾಸ-ಪದ್ಮಾವತಿಯ ಮೂರ್ತಿಗೆ ವಿಶೇಷ ಪೂಜೆ, ಹೂವಿನ ಅಲಂಕಾರ, ಆಭರಣಗಳ ಅಲಂಕಾರಗಳನ್ನು ಮಾಡಲಾಗಿತ್ತು.<br /> <br /> ಕಲ್ಯಾಣೋತ್ಸವದ ಜನ್ನಘಟ್ಟ ಸೇರಿದಂತೆ ತಾಲೂಕು, ಜಿಲ್ಲೆಯ ವಿವಿಧೆಡೆಯಿಂದ ಅಪಾರ ಭಕ್ತರು ಪಾಲ್ಗೊಂಡಿದ್ದರು. <br /> <br /> ಜಿ. ಪಂ ಮಾಜಿ ಅಧ್ಯಕ್ಷ ವಿ.ವೆಂಕಟಮುನಿಯಪ್ಪ, ಟಿ.ವಿ.ಕೃಕಷ್ಣಪ್ಪ, ಟಿ.ವಿ.ತಿಮ್ಮರಾಯಪ್ಪ ಕುಟುಂಬದವರು ಹಾಗೂ ಗ್ರಾಮಸ್ಥರು ಸೇರಿ ಕಲ್ಯಾಣೋತ್ಸವವನ್ನು ಆಯೋಜಿಸಿದ್ದರು.<br /> <br /> ಬೆಂಗಳೂರಿನ ಶ್ರೀವಾರಿ ಫೌಂಡೇಷನ್ನ ಎಸ್.ವೆಂಕಟೇಶಮೂರ್ತಿ ಉಸ್ತವಾರಿ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ತಾಲೂಕಿನ ಜನ್ನಘಟ್ಟ ಗ್ರಾಮದಲ್ಲಿ ಲೋಕ ಕಲ್ಯಾಣಾರ್ಥ ಆಯೋಜಿಸಿದ್ದ ಶ್ರೀನಿವಾಸ ಕಲ್ಯಾಣೋತ್ಸವ ಈಚೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.<br /> <br /> ಗ್ರಾಮದ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ಕಲ್ಯಾಣೋತ್ಸವದಲ್ಲಿ ತಿರುಪತಿಯ ಮಾದರಿಯಲ್ಲೇ ಮಂಟಪಗಳನ್ನುನಿರ್ಮಿಸಿ ತಿರುಮಲದಿಂದಲೇ ಶ್ರೀನಿವಾಸ- ಪದ್ಮಾವತಿಯ ಮೂರ್ತಿಗಳನ್ನು ತರಿಸಿ ಪೂಜೆ ಸಲ್ಲಿಸಲಾಯಿತು.<br /> ಶ್ರೀನಿವಾಸ-ಪದ್ಮಾವತಿಯ ಮೂರ್ತಿಗೆ ವಿಶೇಷ ಪೂಜೆ, ಹೂವಿನ ಅಲಂಕಾರ, ಆಭರಣಗಳ ಅಲಂಕಾರಗಳನ್ನು ಮಾಡಲಾಗಿತ್ತು.<br /> <br /> ಕಲ್ಯಾಣೋತ್ಸವದ ಜನ್ನಘಟ್ಟ ಸೇರಿದಂತೆ ತಾಲೂಕು, ಜಿಲ್ಲೆಯ ವಿವಿಧೆಡೆಯಿಂದ ಅಪಾರ ಭಕ್ತರು ಪಾಲ್ಗೊಂಡಿದ್ದರು. <br /> <br /> ಜಿ. ಪಂ ಮಾಜಿ ಅಧ್ಯಕ್ಷ ವಿ.ವೆಂಕಟಮುನಿಯಪ್ಪ, ಟಿ.ವಿ.ಕೃಕಷ್ಣಪ್ಪ, ಟಿ.ವಿ.ತಿಮ್ಮರಾಯಪ್ಪ ಕುಟುಂಬದವರು ಹಾಗೂ ಗ್ರಾಮಸ್ಥರು ಸೇರಿ ಕಲ್ಯಾಣೋತ್ಸವವನ್ನು ಆಯೋಜಿಸಿದ್ದರು.<br /> <br /> ಬೆಂಗಳೂರಿನ ಶ್ರೀವಾರಿ ಫೌಂಡೇಷನ್ನ ಎಸ್.ವೆಂಕಟೇಶಮೂರ್ತಿ ಉಸ್ತವಾರಿ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>