<p>ಕನಕಪುರ: ತಾಲ್ಲೂಕಿನ ಬ್ಲಾಸಮ್ ಶಾಲೆಯ ಇಪ್ಪತ್ತನೆಯ ವರ್ಷದ ಸಾಂಸ್ಕೃತಿಕ ಹಬ್ಬವನ್ನು ಗುರುವಾರ ಅದ್ದೂರಿಯಾಗಿ ಆಚರಿಸಲಾಯಿತು. <br /> <br /> ಹತ್ತನೇ ತರಗತಿ ವಿದ್ಯಾರ್ಥಿ ಉಮ್ಮೇಹಾನಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.<br /> ಕಾರ್ಯಕ್ರಮದ ಮುಖ್ಯ ಅತಿಥಿ ಐದನೇ ತರಗತಿಯ ಆರ್.ಅನುಶ್ರೀ. `ಶಾಲೆಯಲ್ಲಿ ಎಲ್ಲ ಮಕ್ಕಳಿಗೂ ಪ್ರತಿಭಾ ಪ್ರದರ್ಶನದಲ್ಲಿ ಸಮಾನ ಅವಕಾಶ ನೀಡಿ, ಮಕ್ಕಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಲೆಯ ಸಂಸ್ಥಾಪಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ~ ಎಂದರು.<br /> <br /> ಪಿ.ಕೆ.ಜಿ ತರಗತಿಯಿಂದ 10 ನೇ ತರಗತಿವರೆಗಿನ ಮಕ್ಕಳು ಹಿಂದೂಸ್ಥಾನಿ ಗಾಯನ, ಭರತನಾಟ್ಯ, ನಾಟಕ, ತಬಲಾ ವಿವಿಧ ನೃತ್ಯಗಳ ಮೂಲಕ ಮನಸೂರೆಗೊಳ್ಳುವ ವರ್ಣರಂಜಿತ ಕಾರ್ಯಕ್ರಮ ನೀಡಿ ಪ್ರೇಕ್ಷಕರಿಂದ ಪ್ರಶಂಸೆ ಪಡೆದರು. ಹತ್ತನೇ ತರಗತಿಯ ವಿದ್ಯಾ.ಕೆ.ವಿ ಸ್ವಾಗತಿಸಿದರು. ಅನುಷಾ. ಎಸ್ ಶಾಲಾ ವರದಿ ಮಂಡಿಸಿದರು. <br /> <br /> ಮಕ್ಕಳಿಗಾಗಿ `ಯಂಗ್ ರೀಡರ್ ಅವಾರ್ಡ್~ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅದರಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು. ಟ್ರಸ್ಟ್ನ ಅಧ್ಯಕ್ಷ ಡಾ.ಶ್ವೇತಾ ಶಶಿಧರ್ ವಿಜೇತ ಮಕ್ಕಳಿಗೆ ಬಹುಮಾನವನ್ನು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ತಾಲ್ಲೂಕಿನ ಬ್ಲಾಸಮ್ ಶಾಲೆಯ ಇಪ್ಪತ್ತನೆಯ ವರ್ಷದ ಸಾಂಸ್ಕೃತಿಕ ಹಬ್ಬವನ್ನು ಗುರುವಾರ ಅದ್ದೂರಿಯಾಗಿ ಆಚರಿಸಲಾಯಿತು. <br /> <br /> ಹತ್ತನೇ ತರಗತಿ ವಿದ್ಯಾರ್ಥಿ ಉಮ್ಮೇಹಾನಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.<br /> ಕಾರ್ಯಕ್ರಮದ ಮುಖ್ಯ ಅತಿಥಿ ಐದನೇ ತರಗತಿಯ ಆರ್.ಅನುಶ್ರೀ. `ಶಾಲೆಯಲ್ಲಿ ಎಲ್ಲ ಮಕ್ಕಳಿಗೂ ಪ್ರತಿಭಾ ಪ್ರದರ್ಶನದಲ್ಲಿ ಸಮಾನ ಅವಕಾಶ ನೀಡಿ, ಮಕ್ಕಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಲೆಯ ಸಂಸ್ಥಾಪಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ~ ಎಂದರು.<br /> <br /> ಪಿ.ಕೆ.ಜಿ ತರಗತಿಯಿಂದ 10 ನೇ ತರಗತಿವರೆಗಿನ ಮಕ್ಕಳು ಹಿಂದೂಸ್ಥಾನಿ ಗಾಯನ, ಭರತನಾಟ್ಯ, ನಾಟಕ, ತಬಲಾ ವಿವಿಧ ನೃತ್ಯಗಳ ಮೂಲಕ ಮನಸೂರೆಗೊಳ್ಳುವ ವರ್ಣರಂಜಿತ ಕಾರ್ಯಕ್ರಮ ನೀಡಿ ಪ್ರೇಕ್ಷಕರಿಂದ ಪ್ರಶಂಸೆ ಪಡೆದರು. ಹತ್ತನೇ ತರಗತಿಯ ವಿದ್ಯಾ.ಕೆ.ವಿ ಸ್ವಾಗತಿಸಿದರು. ಅನುಷಾ. ಎಸ್ ಶಾಲಾ ವರದಿ ಮಂಡಿಸಿದರು. <br /> <br /> ಮಕ್ಕಳಿಗಾಗಿ `ಯಂಗ್ ರೀಡರ್ ಅವಾರ್ಡ್~ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅದರಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು. ಟ್ರಸ್ಟ್ನ ಅಧ್ಯಕ್ಷ ಡಾ.ಶ್ವೇತಾ ಶಶಿಧರ್ ವಿಜೇತ ಮಕ್ಕಳಿಗೆ ಬಹುಮಾನವನ್ನು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>