<p>ಕುಶಾಲನಗರ: ತಾಲ್ಲೂಕಿನ ಹೆಬ್ಬಾಲೆಯಲ್ಲಿ ಯುಗಾದಿ ಹಬ್ಬದ ಅಂಗವಾಗಿ ಭಾನುವಾರ `ಹೊನ್ನಾರು~ ಉತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. <br /> <br /> ರೈತರು ಕೃಷಿಗೆ ಬಳಸುವ ಉಪಕರಣ, ಎತ್ತು, ದನಕರುಗಳನ್ನು ಸಿಂಗರಿಸಿ ಪೂಜೆ ಸಲ್ಲಿಸಿದ ನಂತರ ಹೊನ್ನಾರು ಉತ್ಸವಕ್ಕೆ ಚಾಲನೆ ನೀಡಲಾಯಿತು. <br /> <br /> ಗ್ರಾಮದ ಬಸವೇಶ್ವರ ದೇವಾಲಯದಿಂದ ಹೊರಟ ಮೆರವಣಿಗೆ ಬನಶಂಕರಿ ದೇವಾಲಯದ ವರೆಗೆ ಸಾಗಿತು. ನಂತರ ರೈತರು ತಮ್ಮ ಜಮೀನಿಗೆ ತೆರಳಿ ಹೊಸ ವರ್ಷದ ಉಳುಮೆ ಆರಂಭಿಸಿದರು. ಹಬ್ಬದ ಅಂಗವಾಗಿ ರೈತರಿಗೆ ಏರ್ಪಡಿಸಿದ್ದ ಎತ್ತಿನಗಾಡಿ ಓಟದ ಸ್ಪರ್ಧೆ ಗಮನ ಸೆಳೆಯಿತು. <br /> <br /> ಎತ್ತಿನ ಗಾಡಿ ಓಟಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರವಿ ಕುಶಾಲಪ್ಪ, ನಮ್ಮ ಸಂಸ್ಕೃತಿಯ ಪ್ರತೀಕವಾದ ಹೊನ್ನಾರು ಉತ್ಸವ ರೈತರ ಪಾಲಿನ ಚಿನ್ನದ ಹಬ್ಬವಾಗಿದೆ. ಇಂತಹ ಉತ್ಸವದ ಮೂಲಕ ಗ್ರಾಮೀಣ ಸಂಸ್ಕೃತಿ ಪುನರುಜ್ಜೀವನಗೊಳಿಸಬೇಕು ಎಂದರು.<br /> <br /> ಆಧುನಿಕತೆ, ಜಾಗತೀಕರಣದ ಪ್ರಭಾವದ ನಡುವೆಯೂ ಹೊನ್ನಾರು ಉತ್ಸವದಂತಹ ಆಚರಣೆ ಇನ್ನೂ ಉಳಿದಿರುವುದು ಸಂತೋಷದ ಸಂಗತಿ ಎಂದರು.<br /> <br /> ಉತ್ಸವದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎನ್.ರಾಜಶೇಖರ್, ದೇವಾಲಯ ಸಮಿತಿ ಅಧ್ಯಕ್ಷ ಎಚ್.ಎನ್.ಬಸವರಾಜು, ಕಾರ್ಯದರ್ಶಿ ರಾಜು, ಶ್ರೀನಿವಾಸ್, ಚೇತನ್ ಇತರರು ಇದ್ದರು.<br /> <br /> ಹೊನ್ನಾರು ಉತ್ಸವದಲ್ಲಿ ಸುಮಾರು 140ಕ್ಕೂ ಹೆಚ್ಚು ಜೋಡಿ ಎತ್ತುಗಳು ಪಾಲ್ಗೊಂಡವು. ಉತ್ಸವದ ಅಂಗವಾಗಿ ರೈತರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಶಾಲನಗರ: ತಾಲ್ಲೂಕಿನ ಹೆಬ್ಬಾಲೆಯಲ್ಲಿ ಯುಗಾದಿ ಹಬ್ಬದ ಅಂಗವಾಗಿ ಭಾನುವಾರ `ಹೊನ್ನಾರು~ ಉತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. <br /> <br /> ರೈತರು ಕೃಷಿಗೆ ಬಳಸುವ ಉಪಕರಣ, ಎತ್ತು, ದನಕರುಗಳನ್ನು ಸಿಂಗರಿಸಿ ಪೂಜೆ ಸಲ್ಲಿಸಿದ ನಂತರ ಹೊನ್ನಾರು ಉತ್ಸವಕ್ಕೆ ಚಾಲನೆ ನೀಡಲಾಯಿತು. <br /> <br /> ಗ್ರಾಮದ ಬಸವೇಶ್ವರ ದೇವಾಲಯದಿಂದ ಹೊರಟ ಮೆರವಣಿಗೆ ಬನಶಂಕರಿ ದೇವಾಲಯದ ವರೆಗೆ ಸಾಗಿತು. ನಂತರ ರೈತರು ತಮ್ಮ ಜಮೀನಿಗೆ ತೆರಳಿ ಹೊಸ ವರ್ಷದ ಉಳುಮೆ ಆರಂಭಿಸಿದರು. ಹಬ್ಬದ ಅಂಗವಾಗಿ ರೈತರಿಗೆ ಏರ್ಪಡಿಸಿದ್ದ ಎತ್ತಿನಗಾಡಿ ಓಟದ ಸ್ಪರ್ಧೆ ಗಮನ ಸೆಳೆಯಿತು. <br /> <br /> ಎತ್ತಿನ ಗಾಡಿ ಓಟಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರವಿ ಕುಶಾಲಪ್ಪ, ನಮ್ಮ ಸಂಸ್ಕೃತಿಯ ಪ್ರತೀಕವಾದ ಹೊನ್ನಾರು ಉತ್ಸವ ರೈತರ ಪಾಲಿನ ಚಿನ್ನದ ಹಬ್ಬವಾಗಿದೆ. ಇಂತಹ ಉತ್ಸವದ ಮೂಲಕ ಗ್ರಾಮೀಣ ಸಂಸ್ಕೃತಿ ಪುನರುಜ್ಜೀವನಗೊಳಿಸಬೇಕು ಎಂದರು.<br /> <br /> ಆಧುನಿಕತೆ, ಜಾಗತೀಕರಣದ ಪ್ರಭಾವದ ನಡುವೆಯೂ ಹೊನ್ನಾರು ಉತ್ಸವದಂತಹ ಆಚರಣೆ ಇನ್ನೂ ಉಳಿದಿರುವುದು ಸಂತೋಷದ ಸಂಗತಿ ಎಂದರು.<br /> <br /> ಉತ್ಸವದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎನ್.ರಾಜಶೇಖರ್, ದೇವಾಲಯ ಸಮಿತಿ ಅಧ್ಯಕ್ಷ ಎಚ್.ಎನ್.ಬಸವರಾಜು, ಕಾರ್ಯದರ್ಶಿ ರಾಜು, ಶ್ರೀನಿವಾಸ್, ಚೇತನ್ ಇತರರು ಇದ್ದರು.<br /> <br /> ಹೊನ್ನಾರು ಉತ್ಸವದಲ್ಲಿ ಸುಮಾರು 140ಕ್ಕೂ ಹೆಚ್ಚು ಜೋಡಿ ಎತ್ತುಗಳು ಪಾಲ್ಗೊಂಡವು. ಉತ್ಸವದ ಅಂಗವಾಗಿ ರೈತರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>