<p><strong>ಉಡುಪಿ:</strong> `ಅಕ್ರಮ ಗಣಿಗಾರಿಕೆ ಕುರಿತಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೈಕೋರ್ಟ್ ತೀರ್ಪಿನಿಂದ ನಿರಾಳವಾಗಿರುವುದು ತಾತ್ಕಾಲಿಕ. ಸುಪ್ರೀಂ ಕೋರ್ಟ್ನಿಂದ ಇನ್ನೂ ಕ್ಲೀನ್ಚಿಟ್ ಸಿಕ್ಕಿಲ್ಲ. ಅವರು ಬಹಳ ಸಂಭ್ರಮಪಡುವುದರಲ್ಲಿ ಅರ್ಥವಿಲ್ಲ~ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.<br /> <br /> ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆ ಪ್ರಚಾರಕ್ಕೆ ಗುರುವಾರ ಉಡುಪಿಗೆ ಆಗಮಿಸಿದ ಅವರು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.<br /> <br /> `ಲೋಕಾಯುಕ್ತರು ದಾಖಲಿಸಿದ್ದ ಎಫ್ಐಆರ್ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿರುವುದನ್ನು ತಾವು ಪ್ರಶ್ನಿಸುವುದಿಲ್ಲ. ಆದರೆ ಯಡಿಯೂರಪ್ಪ ವಿರುದ್ಧ ಇನ್ನೂ ಹಲವು ಗಂಭೀರ ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ~ ಎಂದರು.<br /> <br /> ಈ ಮಾತನ್ನು ಮುಖ್ಯಮಂತ್ರಿ ಸದಾನಂದ ಗೌಡ ಅವರೂ ಹೇಳಿದ್ದಾರೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ಗೆ ಹೋಗಲು ಇನ್ನೂ ಅವಕಾಶವಿದೆ. ಇದು ಇಷ್ಟಕ್ಕೇ ಮುಗಿಯುವುದಿಲ್ಲ~ ಎಂದು ಭವಿಷ್ಯ ನುಡಿದರು.<br /> <br /> `ಯಡಿಯೂರಪ್ಪ ಅಕ್ರಮ ಗಣಿಗಾರಿಕೆ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ಜೀವಂತವಾಗಿದೆ. ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ವರದಿ ಪರಿಶೀಲಿಸಿ ಸಿಬಿಐ ತನಿಖೆ ಕುರಿತು ಸುಪ್ರೀಂ ಕೋರ್ಟ್ ನಿರ್ಧರಿಸುವವವರೆಗೂ ಯಡಿಯೂರಪ್ಪ ಆರೋಪ ಮುಕ್ತರಲ್ಲ~ ಎಂದು ಅವರು ಪ್ರತಿಕ್ರಿಯೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> `ಅಕ್ರಮ ಗಣಿಗಾರಿಕೆ ಕುರಿತಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೈಕೋರ್ಟ್ ತೀರ್ಪಿನಿಂದ ನಿರಾಳವಾಗಿರುವುದು ತಾತ್ಕಾಲಿಕ. ಸುಪ್ರೀಂ ಕೋರ್ಟ್ನಿಂದ ಇನ್ನೂ ಕ್ಲೀನ್ಚಿಟ್ ಸಿಕ್ಕಿಲ್ಲ. ಅವರು ಬಹಳ ಸಂಭ್ರಮಪಡುವುದರಲ್ಲಿ ಅರ್ಥವಿಲ್ಲ~ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.<br /> <br /> ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆ ಪ್ರಚಾರಕ್ಕೆ ಗುರುವಾರ ಉಡುಪಿಗೆ ಆಗಮಿಸಿದ ಅವರು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.<br /> <br /> `ಲೋಕಾಯುಕ್ತರು ದಾಖಲಿಸಿದ್ದ ಎಫ್ಐಆರ್ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿರುವುದನ್ನು ತಾವು ಪ್ರಶ್ನಿಸುವುದಿಲ್ಲ. ಆದರೆ ಯಡಿಯೂರಪ್ಪ ವಿರುದ್ಧ ಇನ್ನೂ ಹಲವು ಗಂಭೀರ ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ~ ಎಂದರು.<br /> <br /> ಈ ಮಾತನ್ನು ಮುಖ್ಯಮಂತ್ರಿ ಸದಾನಂದ ಗೌಡ ಅವರೂ ಹೇಳಿದ್ದಾರೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ಗೆ ಹೋಗಲು ಇನ್ನೂ ಅವಕಾಶವಿದೆ. ಇದು ಇಷ್ಟಕ್ಕೇ ಮುಗಿಯುವುದಿಲ್ಲ~ ಎಂದು ಭವಿಷ್ಯ ನುಡಿದರು.<br /> <br /> `ಯಡಿಯೂರಪ್ಪ ಅಕ್ರಮ ಗಣಿಗಾರಿಕೆ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ಜೀವಂತವಾಗಿದೆ. ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ವರದಿ ಪರಿಶೀಲಿಸಿ ಸಿಬಿಐ ತನಿಖೆ ಕುರಿತು ಸುಪ್ರೀಂ ಕೋರ್ಟ್ ನಿರ್ಧರಿಸುವವವರೆಗೂ ಯಡಿಯೂರಪ್ಪ ಆರೋಪ ಮುಕ್ತರಲ್ಲ~ ಎಂದು ಅವರು ಪ್ರತಿಕ್ರಿಯೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>