<p>ಚಿಕ್ಕಬಳ್ಳಾಪುರ: `ನಮ್ಮ ದೇಶವು ವಿಶ್ವದಲ್ಲೇ ಶ್ರೇಷ್ಠವಾದ ಸಂವಿಧಾನ ವನ್ನು ಹೊಂದಿದ್ದು, ಇದರ ಬಗ್ಗೆ ನಾವೆಲ್ಲರೂ ಹೆಮ್ಮೆಪಡಬೇಕಿದೆ. ಸಂವಿಧಾನದ ಆಶಯಗಳನ್ನು ಮತ್ತು ಅಂಶಗಳನ್ನು ಅನುಷ್ಠಾನಕ್ಕೆ ತರುವುದರ ಮೂಲಕ ದೇಶವನ್ನು ಅಭಿವೃದ್ಧಿಪಥದಲ್ಲಿ ಮುನ್ನಡೆಸಬೇಕಿದೆ~ ಎಂದು ಸರ್ಕಲ್ ಇನ್ಸ್ಪೆಕ್ಟರ್ ಎಸ್.ಮಹೇಶ್ಕುಮಾರ್ ತಿಳಿಸಿದರು.<br /> <br /> ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರೌಢಶಾಲೆ ಆವರಣದಲ್ಲಿ ಶನಿವಾರ ನಡೆದ ಅಣಕು ವಿಧಾನಸಭಾ ಅಧಿವೇಶನ ಮತ್ತು ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ದೇಶದ ಮಹನೀಯರು ಎಲ್ಲ ರೀತಿಯ ಚಿಂತನೆ ಮತ್ತು ಚರ್ಚೆಗಳನ್ನು ಅತ್ಯುತ್ತಮ ಸಂವಿಧಾನವನ್ನು ರಚಿಸಿದ್ದು, ಅದರ ಘನತೆ ಮತ್ತು ಗೌರವ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ~ ಎಂದರು.<br /> <br /> `ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯಗೊಂಡು ಆರು ದಶಕಗಳೇ ಕಳೆದರೂ ನಮ್ಮ ದೇಶವು ಇನ್ನೂ ಅಭಿವೃದ್ಧಿಶೀಲ ದೇಶವಾಗಿಯೇ ಉಳಿದುಕೊಂಡಿದೆ. ದೇಶವನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ಪೈಪೋಟಿಯಲ್ಲಿ ಮುಂಚೂಣಿಗೆ ತರುವಂತೆ ಮಾಡುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು~ ಎಂದು ಅವರು ತಿಳಿಸಿದರು. ಸರ್ ಎಂ.ವಿಶ್ವೇಶ್ವರಯ್ಯ ಶಾಲೆಯ ಮುಖ್ಯ ಶಿಕ್ಷಕ ದೇವರಾಜ್, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಇತರರು ಇದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: `ನಮ್ಮ ದೇಶವು ವಿಶ್ವದಲ್ಲೇ ಶ್ರೇಷ್ಠವಾದ ಸಂವಿಧಾನ ವನ್ನು ಹೊಂದಿದ್ದು, ಇದರ ಬಗ್ಗೆ ನಾವೆಲ್ಲರೂ ಹೆಮ್ಮೆಪಡಬೇಕಿದೆ. ಸಂವಿಧಾನದ ಆಶಯಗಳನ್ನು ಮತ್ತು ಅಂಶಗಳನ್ನು ಅನುಷ್ಠಾನಕ್ಕೆ ತರುವುದರ ಮೂಲಕ ದೇಶವನ್ನು ಅಭಿವೃದ್ಧಿಪಥದಲ್ಲಿ ಮುನ್ನಡೆಸಬೇಕಿದೆ~ ಎಂದು ಸರ್ಕಲ್ ಇನ್ಸ್ಪೆಕ್ಟರ್ ಎಸ್.ಮಹೇಶ್ಕುಮಾರ್ ತಿಳಿಸಿದರು.<br /> <br /> ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರೌಢಶಾಲೆ ಆವರಣದಲ್ಲಿ ಶನಿವಾರ ನಡೆದ ಅಣಕು ವಿಧಾನಸಭಾ ಅಧಿವೇಶನ ಮತ್ತು ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ದೇಶದ ಮಹನೀಯರು ಎಲ್ಲ ರೀತಿಯ ಚಿಂತನೆ ಮತ್ತು ಚರ್ಚೆಗಳನ್ನು ಅತ್ಯುತ್ತಮ ಸಂವಿಧಾನವನ್ನು ರಚಿಸಿದ್ದು, ಅದರ ಘನತೆ ಮತ್ತು ಗೌರವ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ~ ಎಂದರು.<br /> <br /> `ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯಗೊಂಡು ಆರು ದಶಕಗಳೇ ಕಳೆದರೂ ನಮ್ಮ ದೇಶವು ಇನ್ನೂ ಅಭಿವೃದ್ಧಿಶೀಲ ದೇಶವಾಗಿಯೇ ಉಳಿದುಕೊಂಡಿದೆ. ದೇಶವನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ಪೈಪೋಟಿಯಲ್ಲಿ ಮುಂಚೂಣಿಗೆ ತರುವಂತೆ ಮಾಡುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು~ ಎಂದು ಅವರು ತಿಳಿಸಿದರು. ಸರ್ ಎಂ.ವಿಶ್ವೇಶ್ವರಯ್ಯ ಶಾಲೆಯ ಮುಖ್ಯ ಶಿಕ್ಷಕ ದೇವರಾಜ್, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಇತರರು ಇದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>