<p>ತುಮಕೂರು: ಬದಲಾಗುತ್ತಿರುವ ಜಾಗತಿಕ ವಿದ್ಯಮಾನಗಳ ಹಿನ್ನೆಲೆಯಲ್ಲಿ ಅಧ್ಯಾಪಕರು ಸಂಶೋಧನಾ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಂತೆ ನಿವೃತ್ತ ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ.ಟಿ. ಗಂಗಾಧರಯ್ಯ ಸಲಹೆ ಮಾಡಿದರು.<br /> <br /> ತುಮಕೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಅಧ್ಯಾಪಕರ ಸಂಘವು ನಿವೃತ್ತ ಅರ್ಥಶಾಸ್ತ್ರ ಅಧ್ಯಾಪಕರು ಮತ್ತು ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಅಧ್ಯಾಪಕರಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.<br /> <br /> ಪ್ರಾಧ್ಯಾಪಕ ಕೆ.ಸಿ.ಬಸಪ್ಪ ಮಾತನಾಡಿ, ಗಂಗಾಧರಯ್ಯ ಸರಳ, ಪ್ರಾಮಾಣಿಕ, ದಕ್ಷ ಆಡಳಿತಗಾರ ಹಾಗೂ ಅಧ್ಯಾಪಕರಾಗಿ ಸುದೀರ್ಘ ಸೇವೆ ಸಲ್ಲಿಸಿ ಭವಿಷ್ಯದ ಪೀಳಿಗೆಗೆ ಮಾದರಿಯಾಗಿದ್ದಾರೆ ಎಂದರು.<br /> <br /> ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಪ್ರೊ.ತಿಪ್ಪೇಸ್ವಾಮಿ, ಪ್ರೊ.ಜಯದೇವಪ್ಪ, ಪ್ರೊ.ರಾಜಾರೆಡ್ಡಿ, ಪ್ರೊ.ವೈ.ಎಸ್.ಹನುಮಂತರಾಯ, ಪ್ರೊ.ಟಿ.ಆರ್.ಲೀಲಾವತಿ, ಪ್ರೊ. ಸವಿತಾ ಅವರನ್ನು ಸನ್ಮಾನಿಸಲಾಯಿತು.<br /> <br /> ಸಂಶೋಧಕರು ಪೂರ್ವಗ್ರಪೀಡಿತ ರಾಗದೆ ಉತ್ತಮ ಗುಣಮಟ್ಟದ ಪ್ರಬಂಧಗಳನ್ನು ಮಂಡಿಸಿ ಸಮಾಜಕ್ಕೆ ಉಪಯುಕ್ತವಾಗಬೇಕು ಎಂದು ಪ್ರೊ.ಜಯದೇವಪ್ಪ ಹೇಳಿದರು.ಪರೀಕ್ಷಾ ಮಂಡಳಿ ಅಧ್ಯಕ್ಷ ಪ್ರೊ. ಎಂ.ಎಸ್. ನರಸಿಂಹನ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ಪ್ರೊ.ಡಿ.ಆರ್. ಮೋಹನಕುಮಾರ್ ಸ್ವಾಗತಿಸಿದರು. ಪ್ರೊ.ಎಚ್.ಎಸ್. ಪ್ರಕಾಶ್ ವಂದಿಸಿದರು. ಪ್ರೊ.ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಬದಲಾಗುತ್ತಿರುವ ಜಾಗತಿಕ ವಿದ್ಯಮಾನಗಳ ಹಿನ್ನೆಲೆಯಲ್ಲಿ ಅಧ್ಯಾಪಕರು ಸಂಶೋಧನಾ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಂತೆ ನಿವೃತ್ತ ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ.ಟಿ. ಗಂಗಾಧರಯ್ಯ ಸಲಹೆ ಮಾಡಿದರು.<br /> <br /> ತುಮಕೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಅಧ್ಯಾಪಕರ ಸಂಘವು ನಿವೃತ್ತ ಅರ್ಥಶಾಸ್ತ್ರ ಅಧ್ಯಾಪಕರು ಮತ್ತು ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಅಧ್ಯಾಪಕರಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.<br /> <br /> ಪ್ರಾಧ್ಯಾಪಕ ಕೆ.ಸಿ.ಬಸಪ್ಪ ಮಾತನಾಡಿ, ಗಂಗಾಧರಯ್ಯ ಸರಳ, ಪ್ರಾಮಾಣಿಕ, ದಕ್ಷ ಆಡಳಿತಗಾರ ಹಾಗೂ ಅಧ್ಯಾಪಕರಾಗಿ ಸುದೀರ್ಘ ಸೇವೆ ಸಲ್ಲಿಸಿ ಭವಿಷ್ಯದ ಪೀಳಿಗೆಗೆ ಮಾದರಿಯಾಗಿದ್ದಾರೆ ಎಂದರು.<br /> <br /> ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಪ್ರೊ.ತಿಪ್ಪೇಸ್ವಾಮಿ, ಪ್ರೊ.ಜಯದೇವಪ್ಪ, ಪ್ರೊ.ರಾಜಾರೆಡ್ಡಿ, ಪ್ರೊ.ವೈ.ಎಸ್.ಹನುಮಂತರಾಯ, ಪ್ರೊ.ಟಿ.ಆರ್.ಲೀಲಾವತಿ, ಪ್ರೊ. ಸವಿತಾ ಅವರನ್ನು ಸನ್ಮಾನಿಸಲಾಯಿತು.<br /> <br /> ಸಂಶೋಧಕರು ಪೂರ್ವಗ್ರಪೀಡಿತ ರಾಗದೆ ಉತ್ತಮ ಗುಣಮಟ್ಟದ ಪ್ರಬಂಧಗಳನ್ನು ಮಂಡಿಸಿ ಸಮಾಜಕ್ಕೆ ಉಪಯುಕ್ತವಾಗಬೇಕು ಎಂದು ಪ್ರೊ.ಜಯದೇವಪ್ಪ ಹೇಳಿದರು.ಪರೀಕ್ಷಾ ಮಂಡಳಿ ಅಧ್ಯಕ್ಷ ಪ್ರೊ. ಎಂ.ಎಸ್. ನರಸಿಂಹನ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ಪ್ರೊ.ಡಿ.ಆರ್. ಮೋಹನಕುಮಾರ್ ಸ್ವಾಗತಿಸಿದರು. ಪ್ರೊ.ಎಚ್.ಎಸ್. ಪ್ರಕಾಶ್ ವಂದಿಸಿದರು. ಪ್ರೊ.ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>